ಮಂಡ್ಯ | ಕಾವೇರಿ ಪ್ರವಾಹದಿಂದ ಮುಳುಗಡೆ ಭೀತಿಯಲ್ಲಿ ಎಣ್ಣೆಹೊಳೆ ಗ್ರಾಮ

Date:

ಕೃಷ್ಣರಾಜ ಸಾಗರ ಜಲಾಶಯದಿಂದ 1,70,000 ಕ್ಯುಸೆಕ್ ಹೊರಹರಿವು ನೀರನ್ನು ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ತಗ್ಗಿನಲ್ಲಿರುವ ಪಾಂಡವಪುರ ತಾಲೂಕಿನ ಎಣ್ಣೆಹೊಳೆ ಗ್ರಾಮವು ಮುಳುಗಡೆಯಾಗುವ ಭೀತಿ ಎದುರಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೊರ ಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಣ್ಣೆಹೊಳೆ ಗ್ರಾಮ ಹೊರ ಜಗತ್ತಿನೊಂದಿಗೆ ಸಂಪರ್ಕ ಕಡಿತವಾಗುವ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.

1001149415

ಪಾಂಡವಪುರ ತಾಲೂಕಿನಲ್ಲಿ ಪ್ರತಿ ವರ್ಷ ಕಾವೇರಿಯಲ್ಲಿ ಪ್ರವಾಹ ಬಂದಾಗ ಮುಳುಗಡೆಯ ಭೀತಿ ಎದುರಿಸು ತಗ್ಗಿನಲ್ಲಿರುವ ಏಕೈಕ ಗ್ರಾಮ ಎಣ್ಣೆಹೊಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 8 ಕೋಟಿ ವೆಚ್ಚದಲ್ಲಿ ಮೂರು ವರ್ಷಗಳ ಹಿಂದೆ ಯೋಜನಾಬದ್ಧವಾದ ತಡೆಗೋಡೆ ನಿರ್ಮಿಸದೆ, ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವುದರಿಂದ ಗ್ರಾಮದೊಳಗೆ ಪ್ರವಾಹದ ನೀರು ನುಗ್ಗುವುದನ್ನು ತಡೆಯಲು ವಿಫಲವಾಗಿದೆ.

1001149418

ಊರಿನ ಒಂದು ಕಡೆಯಿಂದ ಕಾವೇರಿ ನದಿಯ ನೀರು ಬರುತ್ತದೆ ಹಾಗೂ ಇನ್ನೊಂದು ಕಡೆಯಿಂದ ಕಾಲುವೆಯ ನೀರು ಬಂದು ಸೇರುವ ಕೊಲ್ಲಿಯ ಜಾಗದಲ್ಲಿ ರಭಸ ಹೆಚ್ಚಾಗಿ, ನೀರು ಒತ್ತರಿಸಿಕೊಳ್ಳುತ್ತದೆ. ಈ ಭಾಗದಲ್ಲಿ ತಡೆಗೋಡೆ ಇಲ್ಲದ ಕಾರಣ ಊರ ಕಡೆಗೆ ನೀರು ನುಗ್ಗುತ್ತದೆ. ಇನ್ನೂ 20000 ಕ್ಯುಸೆಕ್ ನೀರು ಹೆಚ್ಚಾದರೆ ಕ್ಯಾತನಹಳ್ಳಿಗೆ ಹೋಗುವ ಸಂಪರ್ಕ ರಸ್ತೆ ಕಡಿತವಾಗುವ ಭೀತಿ ಎದುರಾಗಿದೆ.

ಜಿಲ್ಲಾಡಳಿತ, ಕಾವೇರಿ ನೀರಾವರಿ ನಿಗಮ ಹಾಗೂ ಸಣ್ಣ ನೀರಾವರಿ ಇಲಾಖೆ ಇವರೆಲ್ಲ ಗಮನಹರಿಸಿ ಪ್ರಕೃತಿ ವಿಕೋಪ ನಿಧಿಯಿಂದ ತುರ್ತು ಕಾಮಗಾರಿಯನ್ನು ಕೈಗೊಂಡು ಪ್ರವಾಹದ ಪ್ರಭಾವವನ್ನು ತಡೆಯಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಎಣ್ಣೆ ಹೊಳೆ ರಘು ಒತ್ತಾಯಿಸಿದ್ದಾರೆ.

1001149416

ಈ ಮೊದಲು ಬಿದ್ದ ಮಳೆಯ ನೀರು ಚರಂಡಿಯ ಮೂಲಕ ಸರಾಗವಾಗಿ ಊರಿಂದ ಹೊರಹರಿದು ಹೋಗಿ ನದಿಯನ್ನು ಸೇರುತ್ತಿತ್ತು. ಅವೈಜ್ಞಾನಿಕವಾಗಿ ತಡೆಗೋಡೆಯನ್ನು ನಿರ್ಮಿಸಿದ ಕಾರಣ ನೀರು ಊರಲ್ಲಿ ಶೇಖರಣೆಯಾಗಿ ನಿಂತು ರೋಗರುಜಿನಗಳಿಗೆ ಕಾರಣವಾಗುತ್ತಿದೆ. ಇದನ್ನು ತುರ್ತಾಗಿ ಸರಿಪಡಿಸಬೇಕಾಗಿದೆ ಎಂದು ಒತ್ತಾಯಿಸಿದರು.

ಪ್ರತಿ ಸಲವೂ ಕಾವೇರಿ ನದಿಯಲ್ಲಿ ನೀರು ಹೆಚ್ಚಾದಂತೆ ಎಣ್ಣೆಹೊಳೆ ಗ್ರಾಮದಲ್ಲಿ ಮುಳುಗಡೆಯ ಭೀತಿ ಎದುರಾಗುತ್ತದೆ. ಇದರ ಬಗ್ಗೆ ಸರ್ಕಾರಗಳು ವಿಶೇಷ ಕಾಳಜಿ ವಹಿಸಿ ಗ್ರಾಮದಲ್ಲಿ ಆಗಿರುವ ಅವ್ಯವಸ್ಥೆಯನ್ನು ತುರ್ತಾಗಿ ಸರಿಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

1001149443
1001149417
Untitled 24
ನಗರಕೆರೆ ಜಗದೀಶ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...