ಮಡಿಕೇರಿ | ಜ. 31 ರಿಂದ ಪೇರಡ್ಕ-ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭ

Date:

ಇತಿಹಾಸ ಪ್ರಸಿದ್ಧ ಪೇರಡ್ಕ-ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭ ಮತ್ತು ಸರ್ವಧರ್ಮ ಸಮ್ಮೇಳನವು ಜ.31 ರಿಂದ ಫೆ.2ರ ವರೆಗೆ ಪೇರಡ್ಕ ತೆಕ್ಕಿಲ್ ಮೊಹಮದ್ ಹಾಜಿ ವೇದಿಕೆಯಲ್ಲಿ ನಡೆಯಲಿದೆ ಎಂದು ಮುಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಟಿ ಎಂ ಶಹೀದ್ ತೆಕ್ಕಿಲ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪೇರಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿ ಮತ್ತು ದರ್ಗಾದಲ್ಲಿ ಜ.31ರಂದು ಸಮಾರಂಭಕ್ಕೆ ಚಾಲನೆ ದೊರೆಯಲಿದೆ. ಅಪರಾಹ್ನ 2 ಗಂಟೆಗೆ ಮುಖಾಂ ಅಲಂಕಾರ ಮತ್ತು ಕೂಟು ಪ್ರಾರ್ಥನೆ ನಡೆಯಲಿದ್ದು, ರಾತ್ರಿ 8 ಗಂಟೆಯಿಂದ ಪಾಣಕ್ಕಾಡ್ ಅಲ್‍ಹಾಜ್ ಹಮೀದಲೀ ಶಿಹಾಬ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಖುತ್‍ಮುಲ್ ಖುರ್‌ಆನ್ ದುಃಆ ನೇತೃತ್ವ ವಹಿಸಲಿದ್ದಾರೆ. ಪತ್ತನಂತಿಟ್ಟ ಅಬ್ದುಲ್ ರಝಾಕ್ ಅಬ್ರಾರಿ ಧಾರ್ಮಿಕ ಭಾಷಣ ಮಾಡಲಿದ್ದು, ವೇದಿಕೆಯಲ್ಲಿ ಸ್ಥಳದಾನಿಗಳಾದ ತೆಕ್ಕಿಲ್ ಬಾಬ ಹಾಜಿ, ತಾಜ್ ಮೊಹಮದ್, ಭಯಂಬಾಡಿ ಅಬೂಬಕ್ಕರ್ ಸಹಿತ ವಿವಿಧ ಗಣ್ಯರು ಉಪಸ್ಥಿತರಿಲಿದ್ದಾರೆ” ಎಂದು ಮಾಹಿತಿ ನೀಡಿದರು.

“ಫೆ.1 ರಂದು ಪೇರಡ್ಕ ದರ್ಗಾ ಶರೀಫ್ ವಠಾರದ ವೇದಿಕೆಯಲ್ಲಿ ಸಂಜೆ 7.30ಕ್ಕೆ ಕಾಸರಗೋಡ್‍ನ ರೌಲತುಲ್ ಉಲೂಂ ದಫ್ ಕಳಿ ಸಂಘಂ ಪೋವ್ವಲ್ ಅವರಿಂದ “ದಫ್ ಸ್ಪರ್ಧೆ, ಬುರ್ದಾ ಮಜ್ಲೀಸ್, ರಸೂಲ್ ಮದ್‍ಹ್ ಗಾನಂ” ನಡೆಯಲಿದೆ. ಕಾರ್ಯಕ್ರಮವನ್ನು ಕೇರಳದ ಸಮಸ್ತ ಕೇಂದ್ರ ಮುಶಾವರದ ಸದಸ್ಯ ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಪೇರಡ್ಕ ಎಂಜೆಎಂ ಮಾಜಿ ಅಧ್ಯಕ್ಷ ಇಬ್ರಾಹಿಂ ಹಾಜಿ ಮೈಲುಕಲ್ಲು ವಹಿಸಲಿದ್ದಾರೆ. ಖತೀಬರಾದ ಅಹ್ಮದ್ ನಈಮ್ ಫೈಝಿ ಅಲ್ ಮಅïಬರಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫೆ.2 ರಂದು ಸಂಜೆ 7 ಗಂಟೆಯಿಂದ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ದುವಾಃ ನೇತೃತ್ವವನ್ನು ಪೇರಡ್ಕ ಎಂ.ಜೆ.ಎಂ ಖತೀಬರಾದ ಅಹ್ಮದ್ ನಈಮ್ ಫೈಝಿ ಅಲ್ ಮಅïಬರಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಉದ್ಘಾಟಿಸಲಿದ್ದು, ಖತೀಬ ಪತ್ತನಂತಿಟ್ಟ ಅಬ್ದುಲ್ ರಝಾಕ್ ಅಬ್ರಾರಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಜಮ್ಮು ಕಾಶ್ಮೀರ ಸಿಆರ್‌ಪಿಎಫ್ ಸಬ್‌ಇನ್ಸ್‌ಪೆಕ್ಟರ್ ಅನ್ವರ್ ಪಿ‌ ಎಂ ತೆಕ್ಕಿಲ್, ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹಾಗೂ ಹೈಕೋರ್ಟ್ ವಕೀಲ ಅಬೂಬಕ್ಕರ್ ಅಡ್ಕಾರ್, ಕಾಂಗ್ರೆಸ್ ಮುಖಂಡ ಕೃಷ್ಣಪ್ಪ, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ನ್ಯಾಯವಾದಿ ವಿ ವೆಂಕಪ್ಪ ಗೌಡ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಮಡಿಕೇರಿ | ಭೂಮಿ ಹಾಗೂ ನಿವೇಶನಕ್ಕಾಗಿ ಬೃಹತ್ ರ್ಯಾಲಿ; ಪ್ರಗತಿಪರ ಸಂಘಟನೆಗಳ ಬೆಂಬಲ

“ಸಂಜೆ 5 ಗಂಟೆಗೆ ಮೌಲೂದ್ ಪಾರಾಯಣ ನಡೆಯಲಿದ್ದು, ರಾತ್ರಿ 9 ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ದುಗ್ಗಲಡ್ಕ ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್ ದುಃಆ ನೇತೃತ್ವ ವಹಿಸಲಿದ್ದು, ಬಹು ಶಮೀರ್ ದಾರಿಮಿ ಕೊಲ್ಲಂ ಧಾರ್ಮಿಕ ಪ್ರಭಾಷಣ ಮಾಡಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಉಲಮಾ, ಉಮರಾ ಹಾಗೂ ಸಾಮಾಜಿಕ, ರಾಜಕೀಯ, ನೇತರಾರರು ಪಾಲಗೊಳ್ಳಲಿದ್ದಾರೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...