ಕಲಬುರಗಿ | ಜಾಗತೀಕರಣದಿಂದ ಜಾನಪದ ಅಳಿವು : ಜಗನ್ನಾಥ ಹೆಬ್ಬಾಳೆ

Date:

ಅತಿಯಾದ ಆಧುನಿಕ ಸಂಸ್ಕೃತಿ ಹಾಗೂ ಜಾಗತೀಕರಣ ದಾಳಿಯಿಂದಾಗಿ ಜಾನಪದ ಅಳಿವಿನಂಚಿಗೆ ತಲುಪುತ್ತಿದೆ. ಜಾನಪದ ಉಳಿಸುವ ಜವಾಬ್ದಾರಿ ಹೊಸ ಪೀಳಿಗೆಯ ಮೇಲಿದೆ ಎಂದು ಬೀದರ ವಿಶ್ವವಿದ್ಯಾಲಯದ ನಿವೃತ್ತ ಡೀನ್ ಡಾ.ಜಗನ್ನಾಥ ಹೆಬ್ಬಾಳೆ ಹೇಳಿದರು.

ಬೀದರ್ ಬರಹಗಾರರ ಮತ್ತು ಕಲಾವಿದರ ಸಂಘದ ಸಹಯೋಗದಲ್ಲಿ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ನವೋದಯ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಾನಪದ ಸಂಗಮ ಸಮಾರಂಭದಲ್ಲಿ ಮಾತನಾಡಿದರು.

‘ಜಾನಪದದ ಅಧ್ಯಯನಕ್ಕಾಗಿಯೇ ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾಲಯ ಹುಟ್ಟಿಕೊಂಡಿದೆ. ಜನ ಸಮುದಾಯದ ಸಮಸ್ತ ಮುಖಗಳನ್ನು ಕಾಣಲು ಜಾನಪದದಿಂದ ಸಾಧ್ಯ. ಜಾತ್ರೆ ಉತ್ಸವಗಳಲ್ಲಿ, ಹಬ್ಬ ಹರಿದಿನಗಳಲ್ಲಿ, ಆಚರಣೆ ಸಂಪ್ರದಾಯಗಳಲ್ಲಿ ಜಾನಪದ ಜೀವಂತವಾಗಿದೆ. ನಗರ ಹಳ್ಳಿಗಳಿರಲಿ ಜಾನಪದದಿಂದ ಯಾರೂ ಬಿಡಿಸಿಕೊಂಡು ಬದುಕಲು ಸಾಧ್ಯವಿಲ್ಲ. ಆಧುನಿಕ ಸಂಸ್ಕೃತಿಯ ಪ್ರಭಾವ ಹೆಚ್ಚಾದಂತೆಲ್ಲ ಜಾನಪದಕ್ಕೆ ಅಳಿವಿನ ಅಪಾಯ ಎದುರಿಸುತ್ತಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಪ್ರೊ. ಶಂಭುಲಿಂಗ ಕಾಮಣ್ಣ ಸಮಾರಂಭ ಉದ್ಘಾಟಿಸಿ ಮಾತನಾಡಿ,’ಜಾನಪದ ಸಾಹಿತ್ಯ ಇಡೀ ಜನ ಬದುಕನ್ನು ಬಿಂಬಿಸುತ್ತದೆ. ಜಾನಪದ ಜನರ ಒಟ್ಟು ಜೀವನದ ಮೊತ್ತವಾಗಿದೆ. ಜನ ಜೀವನದ ನಾಡಿ ಮಿಡಿತ ಜಾನಪದ ಒಳಗೊಂಡಿದೆ. ನೈತಿಕ ಮೌಲ್ಯಗಳನ್ನು, ಸಾಮಾಜಿಕ ಜವಾಬ್ದಾರಿಗಳನ್ನು, ಮಾನವೀಯತೆಯ ಆಲೋಚನೆಗಳನ್ನು ಜನಪದರು ಹಾಡು, ಕತೆ, ಗಾದೆ, ಒಗಟುಗಳ ಮೂಲಕ ಕಟ್ಟಿಕೊಟ್ಟಿದ್ದಾರೆ. ಅದನ್ನು ಅರಿಯಲು ಜಾನಪದದ ಓದು ಅಗತ್ಯ’ ಎಂದರು.

ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಭೀಮಾಶಂಕರ ಬಿರಾದಾರ ಮಾತನಾಡಿ, ‘ಮನುಷ್ಯ ಜಗತ್ತಿನ ಎಲ್ಲ ಕಡೆಗಳಲ್ಲೂ ಜಾನಪದ ಸಂಸ್ಕೃತಿಯಿದೆ. ಇತ್ತೀಚಿನ ಹೊಸ ಶೋಧಗಳಿಂದ ನಗರ ಜಾನಪದ, ಗ್ರಾಮೀಣ ಜಾನಪದ, ಸಬಾಲ್ಟರ್ನ್ ಸಮುದಾಯದ ಸಾಂಸ್ಕೃತಿಕ ಅಧ್ಯಯನ ಜಾನಪದದ ಭಾಗವಾಗಿ ಓದಲಾಗುತ್ತಿದೆ. ಜನಪ್ರಿಯ ಸಂಸ್ಕೃತಿಯಲ್ಲಿಯೂ ಜನಪದ ಬಳಕೆಗೊಂಡು ಬೆಳೆಯುತ್ತಿದೆ. ಜಾನಪದ ನೆಲದ ಕಸುವು ಒಳಗೊಂಡಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಭಾವನಾ ಋಷಿ ಮಾತನಾಡಿದರು. ಸಂಗೀತ ಶಿಕ್ಷಕ ಈರಪ್ಪ ಹಾಗೂ ವಿದ್ಯಾರ್ಥಿಗಳ ತಂಡದಿಂದ ಗೀತ ಗಾಯನ ನೆರವೇರಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜನಪ್ರತಿನಿಧಿಗಳ ನಿರಾಸಕ್ತಿ : ಕನಸಾಗಿಯೇ ಉಳಿದ ಮನ್ನಾಏಖೇಳ್ಳಿ ‘ಪಟ್ಟಣ ಪಂಚಾಯಿತಿ’ ರಚನೆ

ಸಮಾರಂಭದಲ್ಲಿ ಕಲಬುರ್ಗಿ ಎನ್.ವಿ ಕಾಲೇಜು ಅಧ್ಯಾಪಕ ಡಾ. ಶಿವಾಜಿ ಮೇತ್ರೆ, ಲಿಗಾಡೆ ಪ್ರತಿಷ್ಠಾನದ ಕಾರ್ಯದರ್ಶಿ ದೇವೇಂದ್ರ ಬರಗಾಲೆ, ಗಂಗಾಧರ ಸಾಲಿಮಠ, ರಿತೇಶ್ ರಾಯ್, ಅಲ್ಕಾ ಜೋಷಿ, ಧನ್ಯಾ ಸೇರಿದಂತೆ ಹಲವರಿದ್ದರು. ಧರ್ಮಣ್ಣ ಚಿತ್ತಾ ನಿರೂಪಿಸಿ ಸ್ವಾಗತಿಸಿದರು. ಲಕ್ಷ್ಮೀಕಾಂತ ದುದ್ದಣಗಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...