ಮೈಸೂರು | ಅಂಗವಿಕಲರಿಗೆ ಆಹಾರ ಕಿಟ್ ವಿತರಣೆ

Date:

ಮೈಸೂರಿನ ಏಕಲವ್ಯ ನಗರದಲ್ಲಿ ವಾಸವಿರುವ ಅಂಗವಿಕಲರಿಗೆ ಭಾನುವಾರದಂದು ದಸಂಸ ನೇತೃತ್ವದಲ್ಲಿ ಆಹಾರ ಕಿಟ್‌ ವಿತರಣೆ ಮಾಡಿದರು.

ಏಕಲವ್ಯ ನಗರದಲ್ಲಿ ಅಂಗ ವೈಕಲ್ಯದಿಂದ ಬಳಲುತ್ತಿರುವ ನಿರ್ಗತಿಕ ಕುಟುಂಬಗಳು ವಾಸವಿದ್ದು, ಸಂಕಷ್ಟದ ಬದುಕನ್ನು ಸಾಗಿಸುತ್ತಿರುವ 20 ಮಂದಿ ಅಂಗವಿಕಲರಿಗೆ ಎರಡು ತಿಂಗಳಿಗೆ ಬೇಕಾಗುವ ಆಹಾರ ಪದಾರ್ಥಗಳನ್ನು ವಿತರಣೆ ಮಾಡಿದರು. ಅಂಗವಿಕಲ ಕುಟುಂಬಗಳು ದಿನನಿತ್ಯದ ಬದುಕನ್ನು ಸಾಗಿಸಲು ಮೈಸೂರಿನ ರಸ್ತೆ ಬದಿಗಳಲ್ಲಿ ಭಿಕ್ಷಾಟನೆ ಮಾಡುತ್ತಾ ಬಿಡಿಗಾಸಿನಿಂದ ಜೀವನ ಸಾಗಿಸುವವರಾಗಿದ್ದು ಕಡು ಕಷ್ಟದಲ್ಲಿರುವವರಿಗೆ ಕೈಲಾಗುವ ನೆರವು ನೀಡಿದ್ದಾರೆ.

ದಸಂಸ ಮುಖಂಡ ನಿಂಗರಾಜ್ ಮಲ್ಲಾಡಿ ಮಾತನಾಡಿ ‘ ಅಂಗವಿಕಲರಿಗೆ ಸರ್ಕಾರದಿಂದ ಬರುವ ಮಾಸಾಶನ ಸಾಕಾಗುತ್ತಿಲ್ಲ. ಅಂಗವಿಕಲರು ಅನ್ಯ ಮಾರ್ಗವಿಲ್ಲದೆ ಬೀದಿಗಳಲ್ಲಿ ಭಿಕ್ಷೆ ಬೇಡುವ ಸ್ಥಿತಿಯನ್ನು ನಾವು ಕಾಣುತ್ತಿದ್ದೇವೆ. ಕೂಡಲೇ ಸರ್ಕಾರ ಅಂಗವಿಕಲರುಗಳಿಗೆ ಜೀವನ ನಿರ್ವಹಣೆಗಾಗಿ ದಿನಕ್ಕೆ ನೂರು ರೂಪಾಯಿಗಳಂತೆ ತಿಂಗಳಿಗೆ ಮೂರು ಸಾವಿರ ಮಾಸಾಶನವನ್ನಾದರೂ ನೀಡುವಂತೆ ‘ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗವಿಕಲರ ಸಮಸ್ಯೆಯನ್ನು ದಸಂಸ ಮತ್ತು ಅಲೆಮಾರಿ ಸಂಘ ಮೈಸೂರಿನ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಅಧಿಕಾರಿ ವೆಂಕಟರಾಜುರವರಿಗೆ ತಿಳಿಸಿದಾಗ 50 ಸಾವಿರ ರೂಪಾಯಿ ಸ್ವಂತ ಹಣದಲ್ಲಿ ಆಹಾರ ಕಿಟ್ ಖರೀದಿಸಿ ವಿತರಿಸಿದ್ದಾರೆ.

ಅಲೆಮಾರಿ, ಅರೆ ಅಲೆಮಾರಿ ಸಂಘಗಳ ರಾಜ್ಯಾಧ್ಯಕ್ಷ ವೈ ಕುಮಾರ್‌ ಮಾತನಾಡಿ ” ಅಂಗವಿಕಲರು ದೈಹಿಕವಾಗಿ ಅಂಗವೈಕಲ್ಯತೆಯಿಂದ ಕೂಡಿದ್ದರೂ ಅವರ ಮನಸ್ಸುಗಳು ಅಂಗವೈಕಲ್ಯತೆಯಿಂದ ಕೂಡದೆ ಹೃದಯ ಶ್ರೀಮಂತರಾಗಿದ್ದಾರೆ. ಆದರೆ, ಕೆಲವು ಮನುಷ್ಯರು ಎಲ್ಲಾ ರೀತಿಯಲ್ಲೂ ಆರೋಗ್ಯವಾಗಿದ್ದರೂ ಅವರ ಮನಸ್ಸುಗಳು ಅಂಗವೈಕಲ್ಯತೆಯಿಂದ ಕೂಡಿ ಸಮಾಜದಲ್ಲಿ ಭ್ರಷ್ಟಾಚಾರ, ಘಾತುಕ ಕೆಲಸಗಳನ್ನು ಮಾಡುವ ಸ್ಥಿತಿಯನ್ನು ನಾವು ನೋಡುತ್ತಿದ್ದೇವೆ. ಇಂತಹ ಮನುಷ್ಯರಿಗೆ ಹೋಲಿಕೆ ಮಾಡಿದರೆ ಅಂಗವಿಕಲರೇ ನಿಜವಾಗಲೂ ಹೃದಯ ಶ್ರೀಮಂತರಾಗಿದ್ದಾರೆ. ಇಂತಹವರನ್ನು ಸಮಾಜ ಪ್ರೀತಿ, ಗೌರವದಿಂದ ಕಾಣುವಂತಾಗಬೇಕು. ಅವರ ಕಷ್ಟ ನೋವುಗಳಿಗೆ ಕೈಲಾಗುವ ಮಟ್ಟಿಗೆ ಸ್ಪಂದಿಸುವ ಗುಣವನ್ನು ಮೈಗೂಡಿಸಿಕೊಂಡು ನೆರವಾಗಬೇಕು. ಇಂತಹ ಒಳ್ಳೆಯ ಕೆಲಸಗಳನ್ನು ಸಾಧ್ಯವಾದಷ್ಟು ಮಾಡಬೇಕು ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ದಸಂಸ ಮುಖಂಡರಿಂದ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮನೆ ಮುತ್ತಿಗೆ ಯತ್ನ; ಬಂಧನ

ಚಾಮುಂಡೇಶ್ವರಿ ಬಡಾವಣೆಯ ಮುಖಂಡರುಗಳಾದ ಸಿಂಗೇಗೌಡ, ನಿವೃತ್ತ ಪೊಲೀಸ್‌ ಅಧಿಕಾರಿ ಸಣ್ಣಪ್ಪ, ಉಪನ್ಯಾಸಕ ಪರಮೇಶ್‌, ಏಕಲವ್ಯ ಗ್ರಾಮ ಪಂಚಾಯ್ತಿ ಸದಸ್ಯೆ ತೇಜಸ್ವಿನಿ ಶ್ರೀಧರ್‌, ಏಕಲವ್ಯ ನಗರದ ಮುಖಂಡರುಗಳಾದ ನಂದನ್‌ ಕುಮಾರ್‌, ನವೀನ, ಕಿರಣ, ಸತೀಶ, ರಮೇಶ, ಪುತ್ರ, ಅಂಗವಿಕಲರ ಸಂಘದ ಅಧ್ಯಕ್ಷ ಕೆರೆಯೂರು ಶಿವಶೆಟ್ಟಿ, ತಿಮ್ಮರಾಯಪ್ಪ, ಕುಮಾರ, ಹರೀಶ, ರಂಗಮ್ಮ, ನಾಗರತ್ನಮ್ಮ, ಜಮುನಾ ಅಂಬಿಕಾ, ಕಾವ್ಯ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...