ಬೀದರ್‌ | ವಸತಿ ರಹಿತ ಅಲೆಮಾರಿ ಸಮುದಾಯಕ್ಕೆ ನಿವೇಶನ ಕಲ್ಪಿಸುವಂತೆ ಒತ್ತಾಯ

Date:

ಬೀದರ್ ನಗರದ ನೌಬಾದನ ಆಟೊ ನಗರದಲ್ಲಿ ತಾತ್ಕಾಲಿಕ ಜೋಪಡಿಗಳಲ್ಲಿ ವಾಸಿಸುತ್ತಿರುವ ಅಲೆಮಾರಿ / ಅರೆ ಅಲೆಮಾರಿ ಜನಾಂಗಕ್ಕೆ 2017ರಲ್ಲಿ ಜಿಲ್ಲಾಡಳಿತ ವಸತಿಗಾಗಿ ನಿವೇಶನ ಮಂಜುರಾತಿ ಮಾಡಿದರೂ ಇಲ್ಲಿಯವರೆಗೂ ನಿವೇಶನ ಹಂಚಿಕೆ ಮಾಡದೆ ನಿರ್ಲಕ್ಷಿಸುತ್ತಿದೆ, ಕೂಡಲೇ ವಸತಿ ವಂಚಿತ ಅಲೆಮಾರಿ ಸಮುದಾಯಕ್ಕೆ ನಿವೇಶನ ಹಂಚಿಕೆ ಮಾಡಿ ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿತು.

‌ವಿಶ್ವಕ್ರಾಂತಿ ದಿವ್ಯಪೀಠ ನೇತ್ರತ್ವದಲ್ಲಿ ಅಲೆಮಾರಿ ಸಮುದಾಯ ನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಿಂದ ಭಗತ್‌ ಸಿಂಗ್‌ ವೃತ್ತ, ತಹಸೀಲ್‌ ಕಚೇರಿ ಮುಖಾಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಮಾತನಾಡಿ, “ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಕಳೆದರೂ ಬೀದರ್‌ ನಗರದ ಬೀದಿ ಬದಿಯಲ್ಲಿ ವಾಸಿಸುತ್ತಿರುವ ನೂರಾರು ಅಲೆಮಾರಿ ಕುಟುಂಬಗಳಿಗೆ ಕನಿಷ್ಟ ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ. ಸಮಾಜದ ಮಧ್ಯೆ ದೈನ್ಯಾತಿ ದೈನ್ಯ ಸ್ಥಿತಿಯಲ್ಲಿ ನರಕ ಸದೃಶ್ಯವಾಗಿ ಬದುಕುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪರಿಸ್ಥಿತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲಾ ಸರ್ಕಾರಗಳು ದೇಶದ ಎಲ್ಲಾ ಜನಾಂಗಗಳಿಗೆ ಸಮಾಜದ ಮುಖ್ಯ ವಾಹಿನಿಗೆ ತರಲು ಹಲವು ಯೋಜನೆಗಳು ರೂಪಿಸಿದೆ, ಆದರೆ ಅಧಿಕಾರಿಗಳ ನಿರ್ಲಕ್ಷ, ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯಿಂದ ಇಂದು ಬೀದರ್‌ ನಗರದ ಅಲೆಮಾರಿ ಜನಾಂಗ ಸಮಾಜದ ಎಲ್ಲಾ ಸೌಕರ್ಯಗಳಿಂದ ವಂಚಿತರಾಗಿ ಜೀವಿಸುತ್ತಿರುವುದು ನಾಗರಿಕ ಸಮಾಜಕ್ಕೆ ನಾಚಿಕೆಯ ವಿಷಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ನೌಬಾದನಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸಲು 2017 ರಲ್ಲಿ ಪ್ರಕ್ರಿಯೆ ಆರಂಭವಾಗಿದ್ದು,‌ 2017 ರ ಎಪ್ರಿಲ್ 17 ರಂದು ಬೀದರ ನಗರಸಭೆ ನಡಾವಳಿಯಲ್ಲಿ ಠರಾವು ಪಾಸು ಮಾಡಿ ಆಶ್ರಯ ಸಮಿತಿ ಸಭೆಯಲ್ಲಿ ಬೀದರ್ ತಾಲೂಕಿನ ಗೋರನಳ್ಳಿ‌ ಸಮೀಪ ವಸತಿಗಾಗಿ ಜಮೀನು ನೀಡಲು ಆದೇಶಿಸಿದ್ದರು. ಈ ಠರಾವಿನಂತೆ ನಗರಸಭೆಯವರು ಹಿಂದುಳಿದ ವರ್ಗಗಳ ತಾಲುಕಾ ಅಧಿಕಾರಿಗಳಿಗೆ ಜಮೀನು ಹಸ್ತಾಂತರಿಸಬೇಕಾಗಿತ್ತು. ಆದರೆ, ಆರು ವರ್ಷ ಕಳೆದರೂ ಇಲ್ಲಿಯವರೆಗೆ ಜಮೀನು ಹಸ್ತಾಂತರವಾಗಿಲ್ಲ, ಈ ಬಗ್ಗೆ ಕೇಳಿದರೆ ಸಮಜಾಯಿಸಿ ಕೊಟ್ಟು ದಿನಗಳೆಯುತ್ತಿದ್ದಾರೆ. ಸರ್ಕಾರದ, ಜಿಲ್ಲಾಡಳಿತದ ಆದೇಶ ಕಾರ್ಯಾನುಷ್ಠಾನ ಆಗುವುದಿಲ್ಲ ಎಂದರೆ ಆಡಳಿತ ಯಂತ್ರ ತುಕ್ಕು ಹಿಡಿದಿದೆ ಎಂದರ್ಥ” ಎಂದು ಕಿಡಿಕಾರಿದರು.‌

today bidar 30

ಸಾಮಾಜಿಕ ಕಾರ್ಯಕರ್ತ ಜಗದೀಶ್ವರ ಬಿರಾದರ ಮಾತನಾಡಿ, “ಹಲವು ವರ್ಷಗಳಿಂದ ನಗರದಲ್ಲಿ ಅಲೆಮಾರಿ ಜನಾಂಗ ಯಾವುದೇ ಸೌಲಭ್ಯವಿಲ್ಲದೆ ವಾಸಿಸುತ್ತಿದ್ದರೂ ಜಿಲ್ಲೆಯ ಜನ ಪ್ರತಿನಿಧಿಗಳ ಗಮನಕ್ಕೆ ಬರುವುದಿಲ್ಲ. ತಮ್ಮ ವೈಯಕ್ತಿಕ ಪ್ರತಿಷ್ಠೆ ಮೆರೆಯುವುದರಲ್ಲೇ ಕಾಲಹರಣ ಮಾಡುತ್ತಾರೆ. ಸ್ವಾರ್ಥ ಸಾಧಿಸಿಕೊಳ್ಳುವುದು, ಪ್ರತಿಷ್ಠೆ ಮೆರೆಯುವುದು, ಸ್ವಜನಪಕ್ಷಪಾತ, ಆಗದವರೊಂದಿಗೆ ದ್ವೇಷ ಸಾಧಿಸುವುದರಲ್ಲೇ ನಿಸ್ಸಿಮರು ಹೊರತು ಜನಪರ ಕಾಳಜಿ ಎದ್ದು ಕಾಣುವುದಿಲ್ಲ. ಕ್ಷೇತ್ರದ ಶಾಸಕ ರಹೀಂ ಖಾನ್‌ ಅವರರು ಪೌರಾಡಳಿತ ಸಚಿವರಾಗಿ ತಿಂಗಳುಗಳೇ ಕಳೆದಿವೆ, ಆದರೂ ತನ್ನ ಕ್ಷೇತ್ರದ ತನ್ನ ಇಲಾಖೆಯಲ್ಲಿನ ಕಾರ್ಯಗಳ ಬಗ್ಗೆ ಪರಿಶೀಲನೆ ಮಾಡುವುದಿಲ್ಲ. ಹಾಗಾದರೆ ಪ್ರತಿ ತಿಂಗಳು ಪ್ರಗತಿ ಪರಿಶೀಲನಾ ಸಭೆಯಲ್ಲಿ ಯಾವ ಪ್ರಗತಿ ಪರಿಶೀಲನೆ ಆಗುತ್ತೆ, ಅಲೆಮಾರಿ ಜನಾಂಗಕ್ಕೆ ಸಂಬಂಧಿಸಿದ ಒಂದು ಆದೇಶ 6 ವರ್ಷಗಳವರೆಗೆ ಅನುಷ್ಠಾನ ಆಗುವುದಿಲ್ಲವೆಂದರೆ ಜಿಲ್ಲಾಡಳಿತಕ್ಕೆ ಅಪಹಾಸ್ಯವಲ್ಲವೇ?” ಎಂದು ಪ್ರಶ್ನಿಸಿದರು.

ಕೂಡಲೇ ಈ ಬಗ್ಗೆ ಬೀದರ್ ಜಿಲ್ಲಾಡಳಿತ, ನಗರಸಭೆ, ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗಾಗಿ ಆದೇಶ ಅನುಷ್ಠಾನಗೊಳಿಸಿ ಅಲೆಮಾರಿ ಕುಟುಂಬಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು. ವಿಳಂಬವಾದರೆ ಬೀದರ್ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ವಿಭಿನ್ನ ರೀತಿಯ ಧರಣಿ ಸತ್ಯಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಬಗರ್‌ ಹುಕುಂ ಸಮಸ್ಯೆ ಬಗೆಹರಿಸಿದರಷ್ಟೇ ಅರಣ್ಯ ಒತ್ತುವರಿ ತೆರವು ಸಲೀಸು

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ ವಿನೋದ ರತ್ನಾಕರ್‌, ವಿನಯ ಮಾಳಗೆ, ರೋಹನ್‌ ಕುಮಾರ, ಪ್ರಕಾಶ ರಾವಣ, ಹರ್ಷವರ್ಧನ ರಾಠೋಡ್‌, ಮಛೇಂದ್ರ ವಾಘಮಾರೆ ಸೇರಿದಂತೆ ಅಲೆಮಾರಿ ಸಮಾಜದ ದಿಲೀಪ, ಲಕ್ಷ್ಮಣ, ಬಿಚ್ಚಪ್ಪ ಹಾಗೂ ಮಹಿಳೆಯರು, ಮಕ್ಕಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...