ಗುಂಡ್ಲುಪೇಟೆ | ಹುಲಿ ಪತ್ತೆಗೆ ಬೋನಿಟ್ಟ ಅರಣ್ಯ ಇಲಾಖೆ; ಸಿಬ್ಬಂದಿಯನ್ನೇ ಕೂಡಿಟ್ಟ ಗ್ರಾಮಸ್ಥರು

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಬೊಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿ ಹಿಡಿಯಲು ಬೋನಿರಿಸಿದ್ದರು. ಇದುವರೆಗೆ ಹುಲಿ ಸೆರೆ ಹಿಡಿಯಲಿಲ್ಲ ಎನ್ನುವ ಕಾರಣಕ್ಕೆ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳನ್ನು ಬೋನಿನಲ್ಲಿ ಕೂಡಿಟ್ಟ ಘಟನೆ ವರದಿಯಾಗಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಹುಲಿ ಉಪಟಳ ಹೆಚ್ಚಿದೆ. ಕಾಡಂಚಿನ ಗ್ರಾಮಗಳಲ್ಲಿ ಆಗಿಂದಾಗ್ಗೆ ಹುಲಿ ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಿಗೆ ಭಯದ ವಾತಾವರಣ ಸೃಷ್ಟಿಸಿದೆ. ಇದೇ ಕಾರಣಕ್ಕೆ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದು ಹುಲಿ ಹಿಡಿಯುವಂತೆ ಒತ್ತಾಯಿಸಿದ್ದರು.

ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಇಲಾಖೆಯವರು ಬೊಮ್ಮಲಾಪುರ ಗ್ರಾಮದಲ್ಲಿ ಹುಲಿ ಹಿಡಿಯಲು ಬೋನು ಇರಿಸಿದ್ದರು. ಆದರೇ, ಹುಲಿ ಬೋನಿಗೆ ಬಿದ್ದಿರಲಿಲ್ಲ. ಇದರಿಂದ ಹತಾಶರಾಗಿದ್ದ ಗ್ರಾಮಸ್ಥರು ಗ್ರಾಮಕ್ಕೆ ಬಂದ ಅರಣ್ಯ ಸಿಬ್ಬಂದಿಗಳನ್ನು ಹುಲಿಗಿಟ್ಟ ಬೋನಿನಲ್ಲಿ ಕೂಡಿ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿ ಆರ್ ಎಫ್ ಓ ಶಿವಕುಮಾರ್ ಅವರು ಈದಿನ.ಕಾಮ್ ಜೊತೆ ಮಾತನಾಡಿ ಬೊಮ್ಮಲಾಪುರ ಗ್ರಾಮದಲ್ಲಿ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳನ್ನು ಹುಲಿ ಬೋನಿನಲ್ಲಿ ಕೊಡಿಟ್ಟಿದ್ದು ವಿಷಾಧನಿಯ. ಅರಣ್ಯ ಇಲಾಖೆ ಗ್ರಾಮಸ್ಥರ ಒತ್ತಾಯದ ಅನುಸಾರ ಹತ್ತು ಕಡೆ ಸಿಸಿ ಟಿವಿ ಇರಿಸಿ ಹುಲಿ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ. ಅದಲ್ಲದೇ, ದ್ರೋಣ್ ಮೂಲಕವು ಪತ್ತೇಗಾಗಿ ಪ್ರಯತ್ನಿಸುತ್ತಿದ್ದು ಇದುವರೆಗೆ ಹುಲಿ ಕಂಡು ಬಂದಿಲ್ಲ. ಪ್ರತಿ ದಿನ ಅಲ್ಲದಿದ್ದರೂ ಹುಲಿ ಕಂಡು ಬಂದ ಮಾಹಿತಿ ಅನುಸರಿಸಿ ಕೂಂಬಿಂಗ್ ನಡೆಸಲಾಗುತ್ತಿದ್ದರು ಹುಲಿ ಪತ್ತೆಯಾಗಿಲ್ಲ.

ವಿಡಿಯೋ ವೀಕ್ಷಿಸಿ : https://x.com/eedinanews/status/1965349342564524524?t=9SsKvJq-EfWZ9jxVeVPdEg&s=19

ಇಂದು ಸಹ ಆನೆ ಕರಿಸಲಾಗಿತ್ತು. ಆದರೇ, ಗ್ರಾಮಸ್ಥರು ಗ್ರಾಮಕ್ಕೆ ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯವರನ್ನೆಲ್ಲ ಅದೇ ಬೋನಿನಲ್ಲಿ ಕೂಡಿ ಹಾಕಿದ್ದು ಸರಿಯಲ್ಲ. ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಪ್ರಕರಣದ ಕುರಿತಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...