ಮಂಗಳೂರು | ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ನಾಪತ್ತೆ: ಸೇತುವೆ ಮೇಲೆ ಕಾರು ಪತ್ತೆ

Date:

ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಕೂಳೂರು ಸೇತುವೆಯ ಬಳಿ ನಾಪತ್ತೆಯಾಗಿದ್ದಾರೆ.

ಇಂದು ಮುಂಜಾನೆ 6 ಗಂಟೆಗೆ ಕದ್ರಿ ಅಗ್ನಿಶಾಮಕ ಠಾಣೆಗೆ ಕರೆ ಬಂದಿದ್ದು, ಮುಮ್ತಾಜ್ ಅಲಿ ಅವರ ಬಿಎಂಡಬ್ಲ್ಯೂ ಕಾರು ಸೇತುವೆಯ ಬಳಿ ಪಾರ್ಕ್ ಮಾಡಿರುವುದು ಪತ್ತೆಯಾಗಿದೆ.

ಅವರ ನಾಪತ್ತೆಯ ಹಿನ್ನೆಲೆಯಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ಠಾಣೆಗಳ ಸಿಬ್ಬಂದಿ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಬಂದು 2 ಬೋಟ್‌ಗಳೊಂದಿಗೆ ಕೂಳೂರಿನ ಫಲ್ಗುಣಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈವರೆಗೆ ಮುಮ್ತಾಜ್ ಅಲಿ ಪತ್ತೆಯಾಗಿಲ್ಲ, ಮತ್ತು ಶೋಧ ಮುಂದುವರಿದಿರುವುದಾಗಿ ತಿಳಿದು ಬಂದಿದೆ. ವಿಷಯ ಹರಿದಾಡುತ್ತಿದ್ದಂತೆಯೇ ನೂರಾರು ಮಂದಿ ಕೂಳೂರು ಸೇತುವೆಯ ಬಳಿ ಜಮಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001931414

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಸೇರಿದಂತೆ ಹಲವು ಮಂದಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಘಟನಾ ಸ್ಥಳದಲ್ಲಿ ಸುದ್ದಿಸಂಸ್ಥೆ ಎಎನ್‌ಐ ಪ್ರತಿನಿಧಿಯೊಂದಿಗೆ ಮಾತನಾಡಿರುವ ಪೊಲೀಸ್ ಕಮಿಷನರ್, “ಇಂದು ಮುಂಜಾನೆ ಕೂಳೂರು ಸೇತುವೆಯ ಬಳಿ ಉದ್ಯಮಿ ಮುಮ್ತಾಜ್ ಅಲಿ ಅವರ ವಾಹನ ಪತ್ತೆಯಾಗಿದೆ ಎಂಬ ಮಾಹಿತಿ ನಮಗೆ ಬಂತು. ಅವರು ಸೇತುವೆಯಿಂದ ಜಿಗಿದಿರಬಹುದು ಎಂಬ ಅನುಮಾನ ಇದೆ” ಎಂದು ತಿಳಿಸಿದ್ದಾರೆ.

“ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬೆಳಗ್ಗೆ ಮೂರು ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಮನೆಯಿಂದ ಹೊರಟು ನಗರದೆಲ್ಲೆಡೆ ಸುತ್ತಾಡಿದ್ದು, 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಬಳಿ ಕಾರನ್ನು ನಿಲ್ಲಿಸಿದ್ದಾರೆ‌. ನಂತರ ಅವರ ಮಗಳು ಅಪಘಾತವಾಗಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಕೋಸ್ಟ್ ಗಾರ್ಡ್ ತಂಡಗಳು ನದಿಯಲ್ಲಿ ಹುಡುಕಾಟ ನಡೆಸುತ್ತಿವೆ ಮತ್ತು ಅವರು ನದಿಗೆ ಹಾರಿದ್ದಾರೆಯೇ ಎಂದು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

1001931730 1
1001931414 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...