- ಪರಿಸ್ಥಿತಿ ನಿಯಂತ್ರಿಸಲು ಮಸ್ಕಿ ನಗರದಲ್ಲಿ 144 ಸೆಕ್ಷನ್ ಜಾರಿ
- ನಡು ರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಕಾರ್ಯಕರ್ತರು
ಮಾಜಿ ಶಾಸಕ ಬಸನಗೌಡ ತುರುವಿಹಾಳ ಸಹೋದರ ಸಿದ್ದನಗೌಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಮಸ್ಕಿ ನಗರದ 3ನೇ ವಾರ್ಡಿನಲ್ಲಿ ಬೆಳಿಗ್ಗೆ ಜನರನ್ನು ಬಿಜೆಪಿಗೆ ಮತ ಹಾಕಿ ಎಂದು ದಾಂದಲೆ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ತಡೆಯಲು ಮುಂದಾದಾಗ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆದಿದೆ.
ಬಿಜೆಪಿ ಸೋಲುವ ಭಿತಿಯಲ್ಲಿ ಸಂಜೆ ಹೊತ್ತು ಬಿಜೆಪಿ ಯುವ ಮುಖಂಡ ರಾಕೇಶ್ ಪಾಟೀಲ ಹಾಗೂ ಕಾರ್ಯಕರ್ತರು ಗುಂಪಾಗಿ ಸೇರಿ ಹಲ್ಲೆ ಮಾಡಿದ್ದಾರೆ ಎಂದು ಸ್ಥಳೀಯ ನಿವಾಸಿ ಆರೋಪಿಸಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಘೋಷಣೆ ಕೂಗಿ ಪ್ರತಿಭಟಿಸಿದ್ದಾರೆ. ನಗದರಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಬಜರಂಗದಳ – ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
ಕೇಸರಿ ಶಾಲು ಧರಿಸಿರುವ ಗೂಂಡಾಗಳು ನಡು ರಸ್ತೆಯಲ್ಲಿಯೇ ಸಾರ್ವಜನಿಕವಾಗಿ ಕಾಂಗ್ರೆಸ್ ಮುಖಂಡ ಸಿದ್ದನಗೌಡರ ಮೇಲೆ ಮಾರಣಾಂತಿಕ ಹಲ್ಲೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿದ್ದನಗೌಡರ ತಲೆ ಮತ್ತು ಕೈಗೆ ಪೆಟ್ಟು ಬಿದ್ದಿದೆ.
ಬಿಜೆಪಿ ಕಾರ್ಯುಕರ್ತ ರಾಕೇಶ್ ಪಾಟಿಲ್ ನೇತೃತ್ವದಲ್ಲಿ ಹಲ್ಲೆ ಮಾಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.




