ರಾಯಚೂರು | ಎಲ್‌ಇಡಿ ಬೀದಿ ದೀಪ ಅಳವಡಿಕೆಗೆ ಕ್ರಿಯಾ ಯೋಜನೆ ರೂಪಿಸಿ : ಡಿಸಿ ಚಂದ್ರಶೇಖರ ನಾಯಕ

Date:

ಜಿಲ್ಲೆಯ ಸ್ಥಳಿಯ ಸಂಸ್ಥೆಗಳಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಅಂದಾಜು ಕ್ರಿಯಾ ಯೋಜನೆಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚಿಸಿದರು.

ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆ ಕುರಿತು ಹಮ್ಮಿಕೊಂಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ತಾಂತ್ರಿಕತೆಯಿಂದ ಕೂಡಿರುವ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಇ-ಸ್ಮಾರ್ಟ್ ಕಂಪನಿ ಮುಂದೆ ಬಂದಿದೆ. ಈ ಕುರಿತು ಇ-ಸ್ಮಾರ್ಟ್ ಸಂಸ್ಥೆಯು ಈಗಾಗಲೇ ಮೈಸೂರು ಜಿಲ್ಲೆಯಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಸಿ ಯಶಸ್ವಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆ ಕುರಿತು ಸಂಸ್ಥೆಯು ನಿರ್ವಹಣೆ ಮಾಡಲಿದೆ ಎಂದು ಸಂಸ್ಥೆಯ ಪ್ರತಿನಿಧಿಯು ತಿಳಿಸಿದ್ದು ಡೆಮೋ ಮಾಹಿತಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಲ್ಲ ಸ್ಥಳಿಯ ಸಂಸ್ಥೆಗಳು ಅಂದಾಜು ಕ್ರಿಯಾ ಯೋಜನೆ ಸಲ್ಲಿಸಿಬೇಕಾಗಿದೆ” ಎಂದರು.

ರಾಯಚೂರು ನಗರಸಭೆಯು 15ನೇ ಹಣಕಾಸು, ಎಸ್‌ಎಫ್‌ಸಿ ಅನುದಾನ ಸೇರಿದಂತೆ ಉಳಿಕೆಯಾದ ಅನುದಾನ ಹಾಗೂ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಬೇಕಾಗಿರುವ ಅಂದಾಜಿಗೆ ಅನುಗುಣವಾಗಿ 7 ಕೋಟಿ ರೂ. ನಿಗದಿಪಡಿಸಿದ್ದು, ಕ್ರಿಯಾ ಯೋಜನೆಯು ಸಲ್ಲಿಸಬೇಕು, ಬೀದಿ ದೀಪಗಳ ಅಳವಡಿಕೆ ಕುರಿತು ಜೆಸ್ಕಾಂಗೆ ಸಲ್ಲಿಸಬೇಕು. ಲಿಂಗಸುಗೂರು ಪುರಸಭೆಯಲ್ಲಿ 24 ಕೋಟಿ ರೂ. ಅಂದಾಜಿಸಿದ್ದು ಮತ್ತೊಮ್ಮೆ ಕ್ರಿಯಾ ಯೋಜನೆ ಸಲ್ಲಿಸಬೇಕು, ಸಿಂಧನೂರು ನಗರಸಭೆಯು ಅಂದಾಜಿನ ಹೊಸ ಬಡಾವಣೆಯ ಸೇರಿಸಿ ಸಲ್ಲಿಸಿದ್ದು ಅವಶ್ಯಕತೆ ಇರುವ ಕಡೆ ಮಾತ್ರ ಸೇರಿಸಲು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವದುರ್ಗ ಪುರಸಭೆಯಲ್ಲಿ 20 ಲಕ್ಷ ರೂ. ನಿಗದಿಪಡಿಸಿದ್ದು, ಹೆಚ್ಚಿನ ಪ್ರಮಾಣದಲ್ಲಿ ಬೇಕಾಗಿರುವುದರಿಂದ ಕ್ರಿಯಾ ಯೋಜನೆ ಸಿದ್ದಪಡಿಸಬೇಕು, ಹಟ್ಟಿ ಪಟ್ಟಣ ಪಂಚಾಯತಿಯಲ್ಲಿ 3 ಕೋಟಿ ಸಲ್ಲಿಸಿದೆ, ಅನುದಾನ ಎಲ್ಲಿಂದ ಸಂಗ್ರಹ ಕುರಿತು ಅಂದಾಜು ಹಾಗೂ ಈ ಯೋಜನೆಗೆ ಬೇಕಾಗಿರುವ ಹಣಕಾಸು ಕುರಿತು ಕ್ರಿಯಾ ಯೋಜನೆ ಸಲ್ಲಸಲು ತಿಳಿಸಿದರು. ಮಸ್ಕಿ ಪಟ್ಟಣ ಪಂಚಾಯತಿಯು 70 ಲಕ್ಷ ರೂ. ಅನುದಾನ ಪಟ್ಟಿ ನಿಗದಿಪಡಿಸದೆ, ಯೋಜನೆಗೆ ಅವಶ್ಯಕತೆ ಇರುವ ಕ್ರಿಯಾ ಯೋಜನೆ ಮಾಡಿ ಸಲ್ಲಿಸಬೇಕು, ಮುದಗಲ್ ಪಟ್ಟಣ ಪಂಚಾಯತಿ 48 ಲಕ್ಷ ರೂ ಪಟ್ಟಿಯಲ್ಲಿ ತಿಳಿಸಿದ್ದು ಅಂದಾಜು ಸಿದ್ದಪಡಿಸಲು” ಹೇಳಿದರು.

“ತುರವಿಹಾಳ, ಬಳಗಾನೂರು, ಪಟ್ಟಣ ಪಂಚಾಯತಿಗಳು ಅವಶ್ಯಕತೆ ಇರುವನ್ನು ಮಾತ್ರ ಕ್ರಿಯಾ ಯೋಜನೆಯಲ್ಲಿ ಸೇರಿಸಿ, ಎಲ್ಲ ಸ್ಥಳೀಯ ಸಂಸ್ಥೆಗಳು ಕ್ರಿಯಾ ಯೋಜನೆ ಸಿದ್ದಪಡಿಸುವಾಗ ಯಾವ ಕಡೆಯಿಂದ ಹಣ ಸಂಗ್ರಹ ಮತ್ತು ಬಾಕಿ ಉಳಿಸಿಕೊಂಡ 14, 15 ನೇ ಹಣಕಾಸು ಕುರಿತು ಮಾಹಿತಿ ಸಲ್ಲಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮುದಗಲ್‌ನ ಹಮಾಲಿ ಕಾರ್ಮಿಕರ ಸಮಸ್ಯೆ ಪರಿಹರಿಸಲು ಕ್ರಮ; ಎಸಿ ಭರವಸೆ

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಗಂಗಣ್ಣನವರ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಇ-ಸ್ಮಾರ್ಟ್ ಕಂಪನಿ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಟಿಜನ್‌ ಜರ್ನಲಿಸ್ಟ್‌, ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...