ಲಂಚದ ಹಣದೊಂದಿಗೆ ಕೇರಳದಲ್ಲಿ ಸಿಕ್ಕಿ ಬಿದ್ದಿದ್ದ ನಾಲ್ವರು ಪೊಲೀಸರು ಅಮಾನತು

Date:

  • ಬೆಂಗಳೂರಿನ ವೈಟ್‌ಫೀಲ್ಡ್‌ ಸೆನ್ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿ ಅಮಾನತು
  • ಅಮಾನತುಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ

ಪ್ರಕರಣವೊಂದರ ತನಿಖೆಗೆ ಕೇರಳಕ್ಕೆ ಹೋಗಿ, ಆರೋಪಿಗಳಿಂದ ಸ್ವೀಕರಿಸಿದ್ದ ಲಂಚದ ಹಣದೊಂದಿಗೆ ಸಿಕ್ಕಿಬಿದ್ದು, ಕೇರಳ ಪೊಲೀಸರ ವಶದಲ್ಲಿದ್ದ ಬೆಂಗಳೂರಿನ ನಾಲ್ವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ವೈಟ್‌ಫೀಲ್ಡ್‌ ಸೆನ್ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿ ನಾಲ್ವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ.

ಇನ್ಸ್​ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್ಸ್​ಟೇಬಲ್​ಗಳಾದ ಶಿವಾನಿ, ವಿಜಯ್ ಕುಮಾರ್ ಹಾಗೂ ಕಾನ್ಸ್​ಟೇಬಲ್ ಸಂದೇಶ್ ಅಮಾನತು ಸಸ್ಪೆಂಡ್ ಮಾಡಲಾಗಿದೆ. ಘಟನೆ ಕುರಿತು ಎಸಿಪಿ ವರದಿ ಆಧರಿಸಿ ಪ್ರಕರಣದ ತನಿಖೆ ಕಾರ್ಯವಿಧಾನದಲ್ಲಿ ಲೋಪಗೈದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಘಟನೆ?

ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್​ವೇರ್ ಇಂಜಿನಿಯರ್​ ಬಳಿ ಆನ್​ಲೈನ್ ಮೂಲಕ 26 ಲಕ್ಷ ರೂ. ಹಣವನ್ನು ಪಡೆದು ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್​ ಠಾಣೆಗೆ ದೂರು ಕೊಟ್ಟಿದ್ದರು.

ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಇಎನ್ ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಮಡಿಕೇರಿಯ ಆರೋಪಿ ಐಸಾಕ್ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್​ನಲ್ಲಿ ಎರಡು ಕೋಟಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿತ್ತು. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಅವರ ತಂಡ ಕೇರಳದ ಕೊಚ್ಚಿ ನಗರದ ಕಳಮಶ್ಶೇರಿಗೆ ಹೋಗಿದ್ದರು. ಅಲ್ಲಿ ಆರೋಪಿಗಳಾದ ನೌಶಾದ್ ಹಾಗೂ ಅಕೀಲ್​ ಎಂಬುವವರಿಂದ ಆನ್ ಲೈನ್ ಫ್ರಾಡ್​ ಆಗಿರುವ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಈ ಹಿನ್ನೆಲೆ ಅರೆಸ್ಟ್ ಮಾಡಲು ಪೊಲೀಸರು ತೆರಳಿದ್ದರು. ಬಿಡುಬೇಕಾದರೆ 25 ಲಕ್ಷಕ್ಕೆ ಮೊದಲು ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ. ಆ ಬಳಿಕ ಆರೋಪಿಗಳಿಂದ 3,95,000 ಹಣ ಪಡೆದಿದ್ದರು.

ಇದನ್ನು ಓದಿದ್ದೀರಾ? ಲಂಚದ ಹಣದೊಂದಿಗೆ ಸಿಕ್ಕಿ ಬಿದ್ದ ಕರ್ನಾಟಕ ಪೊಲೀಸರ ಬಿಡುಗಡೆಗೆ ಕೇರಳ ಪೊಲೀಸರ ತೀರ್ಮಾನ!

ಆರೋಪಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ, ಕೇರಳದ ಕಳಮಶ್ಶೇರಿ ಪೊಲೀಸರಿಗೆ ಆರೋಪಿಗಳ ಕುಟುಂಬಸ್ಥರು ದೂರು ನೀಡಿದ್ದರು. ಈ ದೂರಿನನ್ವಯ ಕೊಚ್ಚಿಯ ಕಳಮಶ್ಶೇರಿ ಪೊಲೀಸರು, ಆರೋಪಿಗಳಿಂದ ಹಣ ವಸೂಲಿ ಮಾಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ವೈಟ್‌ಫೀಲ್ಡ್‌ನ ಸೆನ್ ಪೊಲೀಸ್ ಠಾಣೆಯ ಎಸ್ ಐ ಹಾಗೂ ಮೂವರು ಕಾನ್‌ಸ್ಟೆಬಲ್ ಸಹಿತ ನಾಲ್ವರನ್ನು ಬಂಧಿಸಲಾಗಿತ್ತು.

ಕರ್ತವ್ಯದ ವೇಳೆಯಲ್ಲಿರುವಾಗಲೇ ತಪ್ಪು ಮಾಡಿರುವ ಹಿನ್ನೆಲೆಯಲ್ಲಿ ಬಂಧನವಿಲ್ಲದೆ ಬಿಡುಗಡೆ ಮಾಡಬೇಕೆಂಬುದು ಕಾನೂನು ಸಲಹೆ ಎಂಬುದನ್ನು ಗಮನಿಸಿದ ಬಳಿಕ ಅಲ್ಲಿನ ಪೊಲೀಸರು ಬಿಡುಗಡೆಗೊಳಿಸಿದ್ದರು. ಅಲ್ಲದೇ, ತನಿಖಾ ತಂಡ ಕೋರಿದರೆ ಹಾಜರಾಗುವಂತೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...