ಉಡುಪಿ | ಪಿಎಂಇಜಿಪಿ ಸಾಲ ಕೊಡಿಸುವ ಹೆಸರಿನಲ್ಲಿ ಕೋಟ್ಯಾಂತರ ವಂಚನೆ — ಆರೋಪಿ ಮಹಿಳೆ ಬಂಧನ

Date:

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್‌ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣದಲ್ಲಿ ಆರೋಪಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರದ ಕೌಶಲ್ಯ ಬಂಧಿತ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಕೆ 2023ರ ನವೆಂಬರ್ ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್‌ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್‌ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್‌ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ ಲೂವಿಸ್‌ ಹಂತ ಹಂತವಾಗಿ ಕೌಶಲ್ಯಳ ಖಾತೆಗೆ ಹಾಗೂ ಆಕೆಯ ತಿಳಿಸಿದ ವ್ಯಕ್ತಿಗಳಾದ ಆಕೆಯ ಗಂಡ ಸಂದೇಶ ಮತ್ತು ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತ, ಹರಿಣಿ, ನವ್ಯ, ಕುಮಾರ್‌, ಮಾಲತಿ, ಪ್ರವೀಣ್‌, ಹರಿಪ್ರಸಾದ್‌, ನಾಗರಾಜ ಮತ್ತು ಭಾರತಿ ಸಿಂಗ್‌ ಎಂಬವರಿಗೆ ಒಟ್ಟು 80,72,000ರೂ. ಹಣ ನೀಡಿದ್ದರು ಎಂದು ದೂರಲಾಗಿದೆ.

ಅದೇ ರೀತಿ ಕೌಶಲ್ಯ, ಅಂಜಲಿನ್‌ ಡಿಸಿಲ್ವಾ ಎಂಬವರಿಗೂ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್‌ ಮಾಡಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಸರಿತಾ ಲೂವಿಸ್ ಗೆ ತಿಳಿಸಿದ ವ್ಯಕ್ತಿಗಳ ಖಾತೆಗಳಿಗೆ 65,00,000ರೂ. ನಗದು ಹಣವನ್ನು ಪಾವತಿಸಿದ್ದರು. ಕೌಶಲ್ಯ ಇವರಿಬ್ಬರಿಗೆ ಒಟ್ಟು 4 ಕೋಟಿ ಸಬ್ಸಿಡಿ ಲೋನ್‌ ಮಾಡಿಸಿಕೊಡುವುದಾಗಿ ನಂಬಿಸಿ ಹಾಗೂ ಬ್ಯಾಂಕ್‌ ನೌಕರ ಎಂದು ಪೋನ್‌ನಲ್ಲಿ ಮಾತನಾಡಿ ನಂಬಿಸಿ ಒಟ್ಟು 1,45,72,000ರೂ. ಹಣ ಪಡೆದು ಮೋಸ ಮಾಡಿರುವುದಾಗಿ ದೂರಲಾಗಿದೆ. ಅದರಂತೆ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...