ಸಾರ್ವಜನಿಕ ಸಾರಿಗೆಯಲ್ಲಿ ಬರುವ ಪ್ರವಾಸಿಗರಿಗೆ ಬನ್ನೇರುಘಟ್ಟ ಚಿಟ್ಟೆ ಉದ್ಯಾನಕ್ಕೆ ಉಚಿತ ಪ್ರವೇಶ

Date:

ಪರಿಸರ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಇದರಲ್ಲಿ ಐದು ಸೋಮವಾರಗಳು ಸಾರ್ವಜನಿಕ ಸಾರಿಗೆ ಮೂಲಕ ಬನ್ನೇರುಘಟ್ಟಕ್ಕೆ ಬರುವ ಪ್ರವಾಸಿಗರಿಗೆ ಚಿಟ್ಟೆ ಉದ್ಯಾನ ಭೇಟಿಗೆ ಉಚಿತ ಪ್ರವೇಶ ವ್ಯವಸ್ಥೆ ಮಾಡಲಾಗಿದೆ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸುನೀಲ್‌ ಪನ್ವಾರ್‌ ತಿಳಿಸಿದ್ದಾರೆ.

“ಮೇ 8ರಿಂದ ಜೂನ್‌ 5ರವರೆಗೆ ಚಿಟ್ಟೆ ಉದ್ಯಾನಕ್ಕೆ ಉಚಿತ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಮೇ 22, 29 ಮತ್ತು  ಜೂನ್‌ 5ರಂದು ಸಾರ್ವಜನಿಕ ಸಾರಿಗೆಯಲ್ಲಿ ಬರುವ ಪ್ರವಾಸಿಗರಿಗೆ ಉಚಿತ ಪ್ರವೇಶವಿದೆ. ಬಸ್‌ ಟಿಕೆಟ್‌ ಅಥವಾ ಬಸ್‌ ಪಾಸ್‌ ತೋರಿಸಿ ಪ್ರವೇಶ ಪಡೆಯಬಹುದಾಗಿದೆ” ಎಂದು ಹೇಳಿದ್ದಾರೆ.

“ಪ್ರತಿಯೊಂದು ಕುಟುಂಬವು ತಮ್ಮ ಕಾರುಗಳಲ್ಲಿ ಬರುವ ಬದಲಿಗೆ ಸಾರ್ವಜನಿಕ ಸಾರಿಗೆಯಲ್ಲಿ ಬಂದರೆ ಇಂಧನ ಉಳಿತಾಯ, ಪರಿಸರದಲ್ಲಿ ವಾಯು ಮಾಲಿನ್ಯವನ್ನು ತಡೆಯಲು ಸಾಧ್ಯವಾಗುತ್ತದೆ. ಹಾಗಾಗಿ ಪರಿಸರ ದಿನಾಚರಣೆಯ ಅಂಗವಾಗಿ ಉದ್ಯಾನದಲ್ಲಿ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಿಂದಾಗಿ ಸಾರ್ವಜನಿಕ ಸಾರಿಗೆಯನ್ನು ಬೆಂಬಲಿಸಿದಂತಾಗುತ್ತದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದೆದಿ ಓದಿದ್ದೀರಾ? ಮಂಡ್ಯ | ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಮಹಿಳೆ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಪ್ರವಾಸಿಗರು ಪರಿಸರ ಸಂರಕ್ಷಣೆಯ ಪ್ರತಿಜ್ಞೆಗೆ ಸಹಿ ಮಾಡಿದರು.

ಪ್ರವಾಸಿಗರಿಂದ ಗಿಡ ನೆಡುವ ಕಾರ್ಯಕ್ರಮವನ್ನು ಪ್ರತಿದಿನ ನಡೆಸಲಾಗುತ್ತಿದೆ. ಜೀವನಶೈಲಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಪರಿಸರ ಸಂರಕ್ಷಿಸಲು ಸಾಧ್ಯ. ಹಾಗಾಗಿ ಸ್ವಚ್ಛತೆ, ಕಸ ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಉದ್ಯಾನಕ್ಕೆ ಭೇಟಿ ಮಾಡುವ ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸುವಂತೆ ಪ್ರತಿಜ್ಞೆ ಮಾಡಿ ಸಹಿ ಮಾಡುವ ವ್ಯವಸ್ಥೆಯನ್ನು ಜೈವಿಕ ಉದ್ಯಾನದ ಚಿಟ್ಟೆ ಪಾರ್ಕ್‌ನಲ್ಲಿ ರೂಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...