ಮೈಸೂರು | ವಿಶೇಷಚೇತನ ಮಕ್ಕಳ ಉಚಿತ ವೈದ್ಯಕೀಯ ತಪಾಸಣೆ-ಮೌಲ್ಯಾಂಕನ ಶಿಬಿರ

Date:

ಮೈಸೂರು ಜಿಲ್ಲೆ, ಹೆಚ್.ಡಿ.ಕೋಟೆ ಪಟ್ಟಣದ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆವತಿಯಿಂದ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ವಿಶೇಷಚೇತನ ಮಕ್ಕಳ ಉಚಿತ ವೈದ್ಯಕೀಯ ತಪಾಸಣೆ ಮತ್ತು ಮೌಲ್ಯಾಂಕನ ಶಿಬಿರವನ್ನು ಏರ್ಪಡಿಸಲಾಗಿತ್ತು.

ಶಿಕ್ಷಣ ಇಲಾಖೆ ಜಿಲ್ಲಾ ಉಪ ಸಮನ್ವಯಾಧಿಕಾರಿ ಶೋಭಾ ಮಾತನಾಡಿ, “ಕಾರ್ಯಕ್ರಮವನ್ನು ಮೊತ್ತ ಮೊದಲ ಬಾರಿಗೆ ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ತಾಲೂಕಿನಲ್ಲೂ ಸಹ ಈ ರೀತಿ ಶಿಬಿರವನ್ನು ಯೋಜನೆ ಮಾಡುತ್ತೇವೆ. ಎಚ್. ಡಿ. ಕೋಟೆ ತಾಲ್ಲೂಕಿನ ಎಲ್ಲಾ ವಿಶೇಷ ಚೇತನ ಮಕ್ಕಳು ತಪಾಸಣೆಯನ್ನು ಮಾಡಿಸಿಕೊಂಡು, ಅಗತ್ಯವಿರುವ ಸಲಕರಣೆಗಳನ್ನು ಪಡೆದುಕೊಳ್ಳಿ” ಎಂದು ತಿಳಿಸಿದರು.

ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ, “ತಾಲ್ಲೂಕಿನಲ್ಲಿ ಒಟ್ಟು 352 ವಿಶೇಷ ಚೇತನ ಮಕ್ಕಳು ಇದ್ದಾರೆ. ಇದರಲ್ಲಿ ಎಲ್ಲರಿಗೂ ಯುಡಿಐಡಿ ಕಾರ್ಡ್ ಸಿಕ್ಕಿರುವುದಿಲ್ಲ. ಆದುದರಿಂದ ಪೋಷಕರು ಹೆಚ್ಚಿನ ಗಮನವಹಿಸಿ ಆರೋಗ್ಯ ಇಲಾಖೆಯ ಜೊತೆಗೂಡಿ ಮಕ್ಕಳಿಗೆ ಯುಡಿಐಡಿ ಕಾರ್ಡನ್ನು ಮಾಡಿಸಬೇಕು. ಅದರಿಂದ ಸರ್ಕಾರದಿಂದ ಬರುವಂತಹ ಸವಲತ್ತುಗಳನ್ನು ಪಡೆದುಕೊಳ್ಳಬೇಕು.”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾರದಲ್ಲಿ ಎರಡನೇ ಮಂಗಳವಾರ ಸಾರ್ವಜನಿಕ ಆಸ್ಪತ್ರೆಯಲ್ಲಿ ಯುಡಿಐಡಿ ಕಾರ್ಡ್ ಮಾಡಿಸಲು ತಪಾಸಣೆಯನ್ನು ಮಾಡಲಾಗುತ್ತದೆ. ಜೊತೆಗೆ ಈ ರೀತಿ ವಿಶೇಷ ಶಿಬಿರವನ್ನು ಸಹ ಆಯೋಜನೆ ಮಾಡುತ್ತೇವೆ. ಮಕ್ಕಳಲ್ಲಿ ಹಲವಾರು ನರಗಳಸಮಸ್ಯೆ, ಕಣ್ಣಿನ ದೃಷ್ಟಿದೋಷ ಸಮಸ್ಯೆ, ಅಂಗವಿಕಲತೆ ಸಮಸ್ಯೆಗಳನ್ನು ನೋಡುತ್ತಿದ್ದೇವೆ. ಇದು ಯಾರ ದೇವರಶಾಪವಲ್ಲ. ಹಾಗೆಯೇ, ವಂಶ ಪಾರಂಪರ್ಯವಾಗಿ ಬರುವ ರೋಗ ಅಲ್ಲ, ಹಲವಾರು ಕಾರಣಗಳಿಂದ ಈ ರೀತಿ ಹುಟ್ಟುತ್ತಾರೆ.

ವಿಶೇಷಚೇತನ ಮಕ್ಕಳನ್ನು ಪಾಲನೆ ಮಾಡುವುದು ಅಷ್ಟೊಂದು ಸುಲಭವಲ್ಲ , ಅವರನ್ನು ನೋಡಿಕೊಳ್ಳುತ್ತಿರುವ ತಾಯಿಯವರಿಗೆ ತಾಲ್ಲೂಕಿನ ಪರವಾಗಿ ಧನ್ಯವಾದಗಳು. ಈ ಶಿಬಿರದಲ್ಲಿ ನುರಿತ ತಜ್ಞ ವೈದ್ಯರುಗಳು ಇರುತ್ತಾರೆ. ಎಲ್ಲಾ ವಿಶೇಷಚೇತನ ಮಕ್ಕಳು ತಪಾಸಣೆಯನ್ನು ಮಾಡಿಸಿ ಈ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ರಾಜು ಮಾತನಾಡಿ, ತಾಲ್ಲೂಕಿನಲ್ಲಿ ಶಿಬಿರವನ್ನು ಆಯೋಜಿಸಿರುವುದು ತುಂಬಾ ಸಂತೋಷಕರವಾದ ವಿಷಯ. ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ನಮಗೆ ಎಲ್ಲಾ ರೀತಿಯಲ್ಲೂ ಸಹಾಯವನ್ನು ಮಾಡುತ್ತಾ ಇದ್ದಾರೆ.ಈ ಶಿಬಿರವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಬೇಡ್ಕರ್ ಭಾವಚಿತ್ರ ವಿರೂಪ, ಬುದ್ಧ ಪ್ರತಿಮೆ ಭಗ್ನಗೊಳಿಸಿರುವ ಕಿಡಿಗೇಡಿಗಳು

ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞ ಡಾ. ಶಾಂತಕುಮಾರ್, ಕಣ್ಣಿನ ತಜ್ಞ ಡಾ. ರಾಜಶೇಖರ್, ಆರ್‌ಬಿಎಸ್‌ಕೆ ವೈದ್ಯಾಧಿಕಾರಿ ಡಾ. ಹೇಮಲತಾ, ಡಾ. ರಮ್ಯಾ, ಶಿಕ್ಷಣ ಇಲಾಖೆಯ ಗಿರೀಶ್ ಮೂರ್ತಿ, ಮಹದೇವ್, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು, ಶಿಕ್ಷಣ ಇಲಾಖೆ ಸಿಬ್ಬಂದಿ ವರ್ಗದವರು, ವಿಶೇಷ ಚೇತನ ಮಕ್ಕಳ ಪೋಷಕರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...