ಬೀದರ್‌ | ಸೌಹಾರ್ದ ಪರಂಪರೆ ಅಭಿಯಾನ | ಬಹುತ್ವದ ನೆಲದಲ್ಲಿ ಕೋಮುವಾದ ಹಬ್ಬಿಸಲು ಬಿಡುವುದಿಲ್ಲ

Date:

ಬಹುತ್ವ ಭಾರತದ ನೆಲದಲ್ಲಿ ಜಾತಿ-ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕಿ ಕೋಮುವಾದ ಹಬ್ಬಿಸಲು ಬಿಡುವುದಿಲ್ಲ. ಸೌಹಾರ್ದ ಪರಂಪರೆ ಉಳಿವಿಗಾಗಿ ನಾವು ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಸೌಹಾರ್ದ ಪರಂಪರೆ ಅಭಿಯಾನದ ಅಂಬುಬಾಯಿ ಮಾಳಗೆ ಹೇಳಿದರು.

ಸೌಹಾರ್ದ ಸಂಘಟನೆಗಳು, ವಿವಿಧ ಪ್ರಗತಿಪರ, ಜನಪರ ಸಂಘಟನೆಗಳು, ಸಮಾನ ಮನಸ್ಕರು ವತಿಯಿಂದ ಮಹಾತ್ಮ ಗಾಂಧಿ ಹುತಾತ್ಮ ದಿನ ಅಂಗವಾಗಿ ಆಯೋಜಿಸಿದ್ದ ಸೌಹಾರ್ದ ಪರಂಪರೆಯ ಅಭಿಯಾನವನ್ನು ಬೀದರ್ ನಗರದ ‌ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಸೌಹಾರ್ದತಾ ಮಾನವ ಸರಪಳಿ‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

bidar abhiyana 44
ಸೌಹಾರ್ದತಾ ಭಾರತ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ಘೋಷಣೆ ಕೂಗಿದರು.

“ಸೌಹಾರ್ದ ಎಂದರೆ ಪಕ್ಷಪಾತವಲ್ಲ, ಪೂರ್ವಾಗ್ರಹವಲ್ಲ. ಇದು ಎಲ್ಲಾ ವಲಯದ ಅವಿವೇಕಗಳನ್ನು ಮೀರಿದ ವಿವೇಕದ ಹಾದಿ. ಶಾಂತಿ, ಸಮಾಧಾನ ಮತ್ತು ಸಮಾನ ಮನಸ್ಥಿತಿಯ ಸಾಮಾಜಿಕ ಮೌಲ್ಯಪರ ಮತ್ತು ವಿರೋಧಿ ನೆಲೆಗಳಲ್ಲಿರುವ ವೈರುಧ್ಯಗಳನ್ನು ಒಂದಾಗಿಸುವ ಪ್ರಕ್ರಿಯೆಯ ಪ್ರತೀಕವೇ ಸೌಹಾರ್ದ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Bidar abhiyana 33
ಅಭಿಯಾನದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.

ಜನವಾದಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಸಾವಿತ್ರಾಬಾಯಿ ಚಿಕ್ಕಮಠ ಮಾತನಾಡಿ, “ದೇಶದಲ್ಲಿ ಸೌಹಾರ್ದತೆಯ ಗಟ್ಟಿ ಪರಂಪರೆಯಿದೆ. ಪ್ರಾಚೀನ ಕಾಲದಿಂದ ಆಧುನಿಕ ಕಾಲದವರೆಗೂ ಈ ಸೌಹಾರ್ದ ಪರಂಪರೆಯು ಸಂಕುಚಿತ ಸವಾಲುಗಳನ್ನು ಮೆಟ್ಟಿ ಮುಂದುವರೆಯುತ್ತ ಬಂದಿದೆ. ಈ ಸೌಹಾರ್ದ ಸಂವೇದನೆಗೆ ಧಕ್ಕೆ ತರಲು ಯಾವುದೇ ಧರ್ಮ ಮೂಲದವರು ಪ್ರಯತ್ನಿಸಿದರೂ ಅದನ್ನು ತೀವ್ರವಾಗಿ ಖಂಡಿಸುತ್ತೇವೆ. ಕೆಲವು ಹಿತಾಸಕ್ತಿಗಳು ಧರ್ಮದ ಹೆಸರಿನಲ್ಲಿ ಜನಸಮುದಾಯದ ನಡುವೆ ಕಂದಕ ಮೂಡಿಸುತ್ತ ಕಲುಷಿತ ವಾತಾವರಣಕ್ಕೆ ಕಾರಣವಾಗುತ್ತಿರುವಾಗ, ಜನಸಮುದಾಯಕ್ಕೆ ಸತ್ಯವನ್ನು ಮನವರಿಕೆ ಮಾಡಿಕೊಡುವುದು ನಮ್ಮ ನೈತಿಕ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಯಾ ಕುಮಾರ್, ಗಯಾ ಕುಮಾರ್’- ಅವರೇ ನಿತೀಶ್ ಕುಮಾರ್

ಅಭಿಯಾನದಲ್ಲಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು, ಕೂಲಿಕಾರರ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ವಿವಿಧ ಜನಪರ ಸಂಘಟನೆಗಳ ಪ್ರಮುಖರಾದ ಪ್ರಭು ಸಂತೋಷ್ಕರ್, ಇಸಾಮೋದ್ದಿನ್ ಮೀರಾಸಾಬ್ ಲಖನ ಮಹಾಜನ್, ರೇಷ್ಮಾ ಹಂಸರಾಜ, ಗೌಸುದ್ದಿನ್, ಶಶಿಕಾಂತ ಡಾಂಗೆ, ರಾಜು,  ಶ್ರೀದೇವಿ ಚಿವಡೆ, ಮಹೇಶ್, ಕಾಟೆ, ಸಚಿನ್ ಗುಂಡೆ ಜಯಶ್ರೀ  ಆರತಿ ಹಳಿಖೇಡ, ರಾಜು ಪಂಡರಗೆರಾ, ಪದ್ಮಾವತಿ ಸ್ವಾಮಿ , ಉಷಾ ಗುತ್ತೆದಾರ, ರೇಖಾ, ಪ್ರಭು ಸಂತೋಷ, ಓಂಪ್ರಕಾಶ್ ರೊಟ್ಟೆ, ಜಗದೀಶ್ವರ ಬಿರಾದಾರ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...