ಉಡುಪಿ | ಜಿ ರಾಜಶೇಖರ್ ಸ್ಮಾರಕ ಜ್ಞಾನ ವೇತನ: ಆಸಕ್ತರಿಂದ ಅರ್ಜಿ ಆಹ್ವಾನ

Date:

ಲೇಖಕ, ಸಾರ್ವಜನಿಕ ಚಿಂತಕ ಹಾಗೂ ಸಾಮಾಜಿಕ ಚಳುವಳಿಗಾರ ಜಿ ರಾಜಶೇಖರ್ ಅಗಲಿ ಎರಡು ವರ್ಷಗಳಾಗಿವೆ. ಜಿ.ರಾಜಶೇಖರ್ ಅವರ ಸೆ.16ರ ಹುಟ್ಟುಹಬ್ಬದ ಪ್ರಯುಕ್ತ ಮೊದಲ ‘ಜಿ.ರಾಜಶೇಖರ್ ಸ್ಮಾರಕ ಜ್ಞಾನವೇತನ’ವನ್ನು ಆರಂಭಿಸಲು ಉದ್ದೇಶಿಸಲಾಗಿದೆ.

ಪ್ರಸ್ತುತ ಜ್ಞಾನವೇತನವು, ಕಾಲದ ಗುಣಗ್ರಾಹಿಯಾದ ಜಿ.ರಾಜಶೇಖರ್ ಅವರ ’ಕಾಗೋಡು ಸತ್ಯಾಗ್ರಹ’ದಂತಹ ಕೃತಿಗಳನ್ನು ಕಟ್ಟಲು ಕನ್ನಡದ ಯುವ ಬರಹಗಾರರು, ಸಂಶೋಧಕರು ಹಾಗೂ ಪತ್ರಕರ್ತರಿಗೆ ಪತ್ರಕರ್ತರಿಗೆ ಸ್ಪೂರ್ತಿದಾಯಕವಾಗಲಿ ಎಂಬುದು ಇದರ ಉದ್ದೇಶವಾಗಿದೆ ಎಂದು ಸಲಹಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಜ್ಞಾನ ವೇತನದ ವಿವರ ಹೀಗಿದೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಟ್ಟು 1,00,000 ರೂಪಾಯಿ ಮೊತ್ತದ ಜ್ಞಾನವೇತನವನ್ನು, 18-35 ರ ವಯಸ್ಸಿನ ಮಿತಿಯಲ್ಲಿ ಇರುವ ಒಬ್ಬ ಅಭ್ಯರ್ಥಿಗೆ ನಾಲ್ಕು ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ವಿತರಿಸಲಾಗುವುದು.

ವೇತನ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸಂಶೋಧನೆಯ ವಿಷಯ ಹಾಗೂ ಸಂಶೋಧನಾ ವಿಧಾನವನ್ನು ಒಳಗೊಂಡ ಸಂಶೋಧನಾ ಪ್ರಸ್ತಾವನೆಯನ್ನು ಅಕ್ಟೋಬರ್ 30ರೊಳಗೆ ಸಲ್ಲಿಸಬೇಕು. ಶೈಕ್ಷಣಿಕ ಕ್ಷೇತ್ರದಲ್ಲಿ ನುರಿತರಾಗಿರುವವರು, ಅನುಭವಿ ಲೇಖಕರನ್ನು ಒಳಗೊಂಡ ಸಲಹಾ ಮಂಡಳಿಯು ಒಬ್ಬ ಅಭ್ಯರ್ಥಿಯನ್ನು ವೇತನಕ್ಕೆ ಆಯ್ಕೆ ಮಾಡುತ್ತದೆ.

ಆಯ್ಕೆಯಾದ ಅಭ್ಯರ್ಥಿಯು ಸಂಶೋಧನೆಗೆ ಆಯ್ದುಕೊಂಡ ಚಾರಿತ್ರಿಕ ವಿಷಯದ ಮೇಲೆ, ಸಾಕ್ಷಿ-ಪುರಾವೆ ಹಾಗು ಆಳ-ಅಗಲ ಉಳ್ಳ ವರದಿಗಳ ಆಧಾರದಲ್ಲಿ ಸಂಶೋಧನೆ ನಡೆಸಬೇಕು. ಸಲಹಾ ಮಂಡಳಿಯು ಸಂಶೋಧನಾ ಸಂಶೋಧನಾ ಕಾರ್ಯದಲ್ಲಿ ಮಾರ್ಗದರ್ಶನ ನೀಡುತ್ತದೆ. ಮಹಿಳೆ, ಕಡೆಗಣಿತ ಜಾತಿ ಪಂಗಡ ಹಾಗೂ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಲಾಗುವುದು.

ಕಡೆಗಣಿತ ಸಮುದಾಯಗಳ(ಸ್ಥಳ, ಸಮುದಾಯ ನಿರ್ದಿಷ್ಟತೆ ಇರಬೇಕು) ಪ್ರತಿರೋಧ ಚರಿತ್ರೆ ಮತ್ತೂ ಪ್ರಸ್ತುತ ಪರಿಸ್ಥಿತಿಯ ನೈಜತೆ. ಆಧುನಿಕ ಸಾಂಸ್ಥಿಕ ವ್ಯವಸ್ಥೆಗಳ(ಕಾನೂನು, ನ್ಯಾಯಿಕ, ಆರೋಗ್ಯ, ಶಿಕ್ಷಣ, ಮಹಿಳೆ-ಮಕ್ಕಳ ಕಲ್ಯಾಣ ಇತ್ಯಾದಿ) ವೈಫಲ್ಯದ ಕಾರ್ಯ-ಕಾರಣ -ಪರಿಣಾಮ. ಶ್ರಮಿಕರ ಆಂತರಿಕ ವಲಸೆ: ಸಾಮಾಜಿಕ ಕಾರ್ಯ-ಕಾರಣ, ವಲಸೆಯ ನಕ್ಷೆ, ಪ್ರದೇಶ ಭಿನ್ನತೆ, ಹೊರಗಿಡುವಿಕೆ, ಕಡೆಗಣಿಸುವಿಕೆ, ಸಾಮಾಜಿಕ ಪರಿಣಾಮಗಳು. ‘ಕಡೆಗಣಿತ ಸಮುದಾಯಗಳ ಕಲ್ಯಾಣಕ್ಕಾಗಿ ವಿಜ್ಞಾನ ತಂತ್ರಜ್ಞಾನ- ವರ್ತಮಾನದ ಸ್ಥಿತಿಗತಿ, ಎದುರಿಸಬೇಕಾದ ಸವಾಲುಗಳು, ಸಾಗಬೇಕಾದ ಹಾದಿ. ಜೀವಸಂಕುಲ, ಪರಿಸರ ಮತ್ತು ಮಾನವ ಅಸ್ತಿತ್ವದ ಸಮಸ್ಯೆಗಳು. ಈ ಸೂಚಿತ ವಿಷಯಗಳಲ್ಲದೆ ಸಂಶೋಧನೆಗೆ ಅರ್ಹವಾದ ಸಾಮಾಜಿಕ ಕಾಳಜಿಯ/ಕುತೂಹಲಕರ ವಸ್ತುಗಳಿಗೂ ಅವಕಾಶವಿದೆ. ಆದರೆ, ಸಲಹಾ ಸಮಿತಿಯ ಆಯ್ಕೆಯೇ ಅಂತಿಮವಾಗಿರುತ್ತದೆ.

ಆಯ್ಕೆಯಾದ ಸಂಶೋಧನಾ ವರದಿಯನ್ನು ಅಂತಿಮವಾಗಿ ಪುಸ್ತಕ ರೂಪದಲ್ಲಿ ಹೊರತರಲಾಗುವುದು. ಪ್ರಸ್ತಾವನೆಯನ್ನು ಇಮೇಲ್ ಐಡಿ-grskksv@gmail.comಗೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಬರಹಗಾರರಾದ ಎಚ್.ಎಸ್.ಅನುಪಮಾ, ರಹಮತ್ ತರೀಕೆರೆ, ಕವಿ ರಘುನಂದನ, ಮಾಧ್ಯಮ ತಜ್ಞ ಎನ್‌ಎಎಂ ಇಸ್ಮಾಯಿಲ್, ಹಿರಿಯ ಪತ್ರಕರ್ತ ಡಿ.ಉಮಾಪತಿ, ಸಹಸಂಪಾದಕ ಕುಂಟಾಡಿ ನಿತೇಶ್, ಹಿರಿಯ ಚಿಂತಕ ಪ್ರೊ.ಕೆ.ಫಣಿರಾಜ್ ಸಲಹಾ ಮಂಡಳಿಯ ಪ್ರಮುಖರಾಗಿದ್ದಾರೆ.

ಪ್ರಸ್ತಾವನೆ ಕಳುಹಿಸಲು ಇ-ಮೇಲ್ ವಿಳಾಸ: grskksv@gmail.com. ಮಾಹಿತಿಗೆ ಸಂಪರ್ಕ ಸಂಖ್ಯೆ : 7838263911

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...