ಗದಗ | ಸಾಮರಸ್ಯ, ಭಾವೈಕ್ಯತೆ, ಬಹುತ್ವ ಪರಂಪರೆಯ ಸಂರಕ್ಷಣೆಗಾಗಿ ಎಸ್‌ಎಫ್ಐ 5ನೇ ಜಿಲ್ಲಾ ಸಮ್ಮೇಳನ

Date:

ಗದಗ ಪಟ್ಟಣದ ಎಸ್‌ಎಫ್ಐ ಕಚೇರಿಯಲ್ಲಿ ಸಾರ್ವತ್ರಿಕ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ, ಜಿಲ್ಲೆಯ ಶೈಕ್ಷಣಿಕ ಹಾಗೂ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ಸಾಮರಸ್ಯ, ಭಾವೈಕ್ಯತೆ ಮತ್ತು ಬಹುತ್ವ ಪರಂಪರೆಯ ಸಂರಕ್ಷಣೆಗಾಗಿ 5ನೇ ಗದಗ ಜಿಲ್ಲಾ ಸಮ್ಮೇಳನ ನಡೆಯಿತು.

ಸಮ್ಮೇಳನವನ್ನು ಉದ್ಘಾಟಿಸಿ ಎಸ್‌ಎಫ್ಐನ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ್ ಮಾತನಾಡಿ, “ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020 ಶೈಕ್ಷಣಿಕ ವಲಯವನ್ನು ಹದಗೆಸುತ್ತಿದ್ದು ಗೊಂದಲದ ಗೂಡಾಗಿದೆ. ರಾಜ್ಯದಲ್ಲಿ ಹಿಜಾಬ್ ಕೇಸರಿ ಶಾಲು ಗಲಾಟೆ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರಿದೆ ಹಾಗೆ ಪಠ್ಯ ಪುಸ್ತಕದ ಬದಲಾವಣೆ ಮೂಲಕ ಸರ್ಕಾರವೇ ಕೇಸರಿಕರಣಕ್ಕೆ ಇಳಿದಿದ್ದು ಖೇದಕರವಾಗಿತ್ತು. ಎಲ್ಲವನ್ನು ಸಹಿಸಿಕೊಂಡು ಬಂದ ವಿದ್ಯಾರ್ಥಿಗಳು ಚುನಾವಣೆಯಲ್ಲಿ ಸರಿಯಾದ ಪಾಠವನ್ನು ಕಲಿಸಿದ್ದಾರೆ” ಎಂದರು.

ಇಂದಿನ ಸರ್ಕಾರವು ಸರಿಯಾದ ನೀತಿ ಇಲ್ಲದೇ ಹೆಣಗುತ್ತಿವೆ. ಜಿಲ್ಲೆಗೊಂದು ನರ್ಸಿಂಗ್ ಕಾಲೇಜುಗಳು ಪ್ರಾರಂಭಿಸಲು ಒತ್ತಾಯಿಸಬೇಕಿದೆ. ಜೊತೆಗೆ ಹಾಸ್ಟೆಲ್ ಕೊರತೆ, ಬಸ್ ಸಮಸ್ಯೆ, ಶಿಕ್ಷಕರ, ಉಪನ್ಯಾಸಕರ, ಮೂಲಭೂತ ಸೌಕರ್ಯಗಳ ಕೊರತೆ ನಿರಂತರವಾಗಿದ್ದು, ಸರಿದೂಗಿಸಲು ಸರ್ಕಾರಗಳು ಮುಂದಾಗುತ್ತಿಲ್ಲ. ಎಲ್ಲಾ ಸಮಸ್ಯೆಗಳ ಮಧ್ಯೆ ವಿದ್ಯಾರ್ಥಿ ಸಮ್ಮೇಳನ ನಡೆಯುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ಸಂಘಟಿತರಾಗಿ ಜನಜಾಗೃತಿ ಮೂಡಿಸುವ ಕಾರ್ಯ ಮತ್ತು ಹೋರಾಟ ಮಾಡಿ ಹಕ್ಕುಗಳನ್ನು ಪಡೆದುಕೊಳ್ಳವ ಕಾರ್ಯಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಎಫ್ಐನಂತಹ ನಮ್ಮ ಸಂಘಟನೆ ಒಂದು ವಿಶ್ವವಿದ್ಯಾಲಯ ಇದ್ದ ಹಾಗೆ. ಇಲ್ಲಿನ ವಿದ್ಯಾರ್ಥಿ ನಾಯಕರು ಯಾವಾಗಲೂ ಪರಿಪೂರ್ಣ ವಿದ್ಯಾರ್ಥಿಗಳಾಗಿ ಹೋರಹೊಮ್ಮುತ್ತಾರೆ. ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಮಾಜವಾದದ ಆಶಯ ಹೊತ್ತು ನಡೆಯುತ್ತಿರುವ ಎಸ್‌ಎಫ್ಐ ಸಂಘಟನೆಯ ಸಮ್ಮೇಳನಕ್ಕೆ ಬಹಳ ಮಹತ್ವ ಇದೆ. ಗದಗ ಜಿಲ್ಲೆಯ ಶೈಕ್ಷಣಿಕ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಈ ಸಮ್ಮೇಳನ ನಿರ್ಣಯ ತೆಗೆದುಕೊಂಡು ಕಾರ್ಯ ರೂಪಿಸಲಿದೆ ಎಂದರು.

ನಂತರ ಸಮ್ಮೇಳನದ ಕಾರ್ಯ ಕಲಾಪ ನಡೆಯಿತು ಜಿಲ್ಲೆಯ ಕರಡು ವರದಿ ಮಂಡನೆ ನಂತರ ಅದರ ಮೇಲೆ ತಾಲೂಕುವಾರು ಚರ್ಚೆ ಆನಂತರ ಜಿಲ್ಲೆಯ ಹೊಸ ಸಮಿತಿ ರಚನೆ ಮಾಡಲಾಯಿತು.

ಸಮ್ಮೇಳನದಲ್ಲಿ ಆಯ್ಕೆಯಾದ ನೂತನ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಚಂದ್ರು ರಾಠೋಡ, ಕಾರ್ಯದರ್ಶಿಯಾಗಿ ಸುದೀಪ್ ಹೂಗಾರ್, ಉಪಾಧ್ಯಕ್ಷರಾಗಿ ಗಣೇಶ ಛಲವಾದಿ, ಅನೀಲ್ ರಾಠೋಡ, ಸಹಕಾರ್ಯಾದರ್ಶಿಗಳಾಗಿ ಕಿರಣ, ಪ್ರದೀಪ್ ಎಂ. ಸದಸ್ಯರು: ಶರಣು ಎಂ, ಮಾಂತೇಶ ಪೂಜಾರ, ರಾಜು, ವಿನೋದ ಮುಂಡರಗಿ, ಮಂಜುನಾಥ್ ಗದಗ, ಕಾರ್ತಿಕ ಲಕ್ಷ್ಮೇಶ್ವರ, ದೇವರಾಜು, ಡೇನಿಷ, ನವೀನ, ಕವಿತಾ ಮೇಟಿ ಒಟ್ಟು 17 ಜನರ ಜಿಲ್ಲಾ ಸಮಿತಿಯನ್ನು ರಚನೆ ಮಾಡಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಡಿದ ಸಿಡಿಲು: ನಾಲ್ವರ ಸಾವು

ಈ ಸಂದರ್ಭದಲ್ಲಿ ಎಸ್‌ಎಫ್ಐನ ಗಜೇಂದ್ರಗಡ ತಾಲೂಕು ಅಧ್ಯಕ್ಷರಾದ ಅನಿಲ್ ರಾಠೋಡ, ಮುಂಡರಗಿ ತಾಲೂಕು ಮುಖಂಡರಾದ ಗಣೇಶ ಛಲವಾದಿ, ರೋಣ ತಾಲೂಕು ಮುಖಂಡರಾದ ಸುದೀಪ್ ಹೂಗಾರ್ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರತಿನಿಧಿಗಳಾದ ಸುದೀಪ್ ಹುಬ್ಬಳ್ಳಿ, ಮುಪ್ಪಯ್ಯ, ಶರಣು, ಮಾಂತೇಶ, ರಾಜು, ವಿನೋದ, ಮಂಜುನಾಥ, ಕಾರ್ತಿಕ, ದೇವರಾಜ, ಅಪ್ಪು, ಡೆನೀಷ, ನವೀನ, ಕವಿತಾ, ಕಿರಣ, ಆಕಾಶ, ಪ್ರವೀಣ್ ಹಾಗೂ ಇತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...