ಗದಗ | ಮನರೇಗಾ ಸಿಬ್ಬಂದಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅಭಿನಂದನಾ ಕಾರ್ಯಕ್ರಮ

Date:

ಪ್ರತಿಯೊಬ್ಬರು ತಮ್ಮ ಕರ್ತವ್ಯಗಳನ್ನು ಅರ್ಥ ಮಾಡಿಕೊಂಡು ಉತ್ತಮ ಕೆಲಸ ಮಾಡುವ ಮೂಲಕ ತಾಲೂಕಿನ ಪ್ರಗತಿ ಹಾಗೂ ಕೀರ್ತಿಗೆ ನಿಮ್ಮದೇ ಆದ ಕೊಡುಗೆಯನ್ನು ನೀಡಿ ಎಂದು ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ರವಿ.ಎ.ಎನ್ ಹೇಳಿದರು.

ರೋಣ ಪಟ್ಟಣದ ಗುರು ಭವನದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಹಾಗೂ ಮನರೇಗಾ ಸಿಬ್ಬಂದಿಗಳಿಗಾಗಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ವಿವಿಧ ಸಿಬ್ಬಂದಿಗಳಿಗೆ ಅಭಿನಂದಿಸಿ ಸನ್ಮಾನಿಸಿ ಅವರು ಮಾತನಾಡಿದರು. ರೋಣ ತಾಲೂಕಿನ ಪ್ರಗತಿ ಉತ್ತಮಗೊಳಿಸಲು ನಿಮ್ಮದೆ ಆದ ಕೊಡುಗೆಯನ್ನು ನೀಡುವ ಮೂಲಕ ತಾಲೂಕನ್ನು ಉನ್ನತ ಸ್ಥಾನದಲ್ಲಿ ಇರಿಸಿದ್ದಿರಿ ಎಂದರು.

ನಿಮ್ಮೆಲ್ಲರ ಶ್ರಮ ಮತ್ತು ದುಡಿಮೆಯಿಂದ ನಮ್ಮ ತಾಲೂಕು ಮೇಲ್ಮಟ್ಟದಲ್ಲಿ ಇದೆ. ಹಾಗಾಗಿ ನಿಮ್ಮನ್ನು ಗೌರವಿಸುವದು ನಮ್ಮ ಕರ್ತವ್ಯ ಎಂದರು. ಇನ್ನೊಂದು ದೃಷ್ಟಿಯಿಂದ ನೋಡಿದಾಗ ಈ ರೀತಿಯ ಸಮಾಗಮದಿಂದ ಸಂಬಂಧಗಳು ಗಟ್ಟಿ ಆಗುವುದರ ಜೊತೆಗೆ ನಂಬಿಕೆ, ಪ್ರೀತಿ, ವಿಶ್ವಾಸ ಹೆಚ್ಚಾಗಿ ಕೆಲಸ ವೃದ್ದಿಯಾಗುತ್ತದೆ ನಿಮ್ಮೆಲ್ಲರ ಒಗ್ಗಟ್ಟಿನಿಂದ ಈ ಕಾರ್ಯಕ್ರಮ ಯಶಸ್ವಿ ಆಯಿತು. ಪ್ರತೀ ವರ್ಷವೂ ಇಂತಹ  ಕಾರ್ಯಕ್ರಮವನ್ನು ಮಾಡೋಣ ಉತ್ತಮ ಕೆಲಸ ಮಾಡಿದವರ ಕಾರ್ಯವನ್ನು ಮೆಚ್ಚಿ ಶಬಾಶ್ ಅಂದಾಗ ಆಗುವ ತೃಪ್ತಿಯೇ ಬೇರೆ ಅದರಿಂದ ಹುಮ್ಮಸ್ಸು ಮೂಡಿ ಇನ್ನು ಹತ್ತಾರು ಕೆಲಸವನ್ನು ಮಾಡಲಿಕ್ಕೆ ಪ್ರೇರಣೆ ಬರುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಒತ್ತಡ ಇರುತ್ತದೆ, ಎಷ್ಟೇ ಒತ್ತಡ ಇದ್ದರು ಸಹ ಅದನ್ನು ಬದಿಗೊತ್ತಿ ಒಗ್ಗಟ್ಟಾಗಿ ಕೆಲಸ ಮಾಡಿ ಜಿಲ್ಲೆಯ ಹಿತ ದೃಷ್ಟಿಯಿಂದ ತಾಲೂಕಿನ ಹಿತ ದೃಷ್ಟಿಯಿಂದ ಹೊಸ ಆರ್ಥಿಕ ವರ್ಷದಲ್ಲಿ ತಮ್ಮ ಸೇವೆ ಹಾಗೂ ಕಾರ್ಯ ಅವಶ್ಯ ಎಂದರು.

ರೋಣ ತಹಸೀಲ್ದಾರ ನಾಗರಜ್.ಕೆ ಮಾತನಾಡಿ, ಇಲಾಖೆಯ ಆಧಿನದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ವಾರ್ಷಿಕವಾಗಿ ವಿಶೇಷವಾಗಿ ಕಾರ್ಯ ನಿರ್ವಹಿಸಿದವರನ್ನು ಗರುತಿಸಿ ಅವರಿಗೆ ಶಬಾಷ್ ಅನ್ನುವುದು ಒಂದು ಉತ್ತಮ ಕಾರ್ಯ. ಇದನ್ನು ತಾಲೂಕ ಪಂಚಾಯತ ಅಧಿಕಾರಿಗಳು ಮಾಡಿದ್ದಾರೆ. ಇದನ್ನು ಮಾಡುವುದರಿಂದ ಮುಂದಿನ ದಿನಗಳಲ್ಲಿ ಉಳಿದ ಸಿಬ್ಬಂದಿಗಳಿಗೆ ಪ್ರೇರಣೆ ಬರುವ ಹಾಗೆ ಮಾಡಿದ್ದಾರೆ. ಇದು ನಿಜವಾಗಿಯೂ ಒಳ್ಳೆಯ ನಡೆ. ಆಡಳಿತಾತ್ಮಕ ದೃಷ್ಟಿಯಿಂದ ಇದು ಸ್ಪೂರ್ತಿ ನೀಡುತ್ತದೆ ಎಂದರು.

ಅಭಿನಂದನಾ ಪತ್ರ: ನರೇಗಾ ಯೋಜನೆ ಹಾಗೂ ಪಂಚಾಯತ ರಾಜ್ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿದ ಪಿಡಿಒ, ಟಿಎಇ, ಡಿಇಒ, ಬಿಎಫ್‌ಟಿ, ಜೆಕೆಎಂ, ಸಿಪಾಯಿ, ಬಿಲ್ ಕಲೆಕ್ಟರ್, ವಾಟರಮನ್‌ಗಳಿಗೆ ಇಬ್ಬರಂತೆ ಹಾಗೂ ತಾಲೂಕ ಪಂಚಾಯತಿಯ ನಾಲ್ಕು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಪ್ರಾಸ್ತಾವಿಕವಾಗಿ ಸಹಾಯಕ ನಿರ್ಧೇಶಕರಾದ ರಿಯಾಜ ಖತೀಬ್ ( ಗ್ರಾಮೀಣ ಉದ್ಯೋಗ) ಮಾತನಾಡಿದರು. ಸಹಾಯಕ ನಿರ್ದೇಶಕರಾದ (ಪಂಚಾಯತ ರಾಜ್) ಶಿವಯೋಗಿ ರಿತ್ತಿ ಸ್ವಾಗತಿಸಿದರು. ಪಿಡಿಒ ಶಿವನಗೌಡ ಮೆಣಸಗಿ ಹಾಗೂ ಕಾವೇರಿ ಅಸೂಟಿ ಅನಿಸಿಕೆ ವ್ಯಕ್ತಪಡಿಸಿದರು. ಮೇಘರಾಜ ಸಿಂಗ್ರಿ ನಿರೂಪಿಸಿ ವಂದಿಸಿದರು.

ಈ ಸಂದರ್ಭದಲ್ಲಿ ತಾಲೂಕ ಯೋಜನಾಧಿಕಾರಿ ಸಿ.ಎಸ್. ನಿಲಗುಂದ, ತಾಲೂಕ ಪಂಚಾಯತಿ ವ್ಯವಸ್ಥಾಪಕರಾದ ದೇವರಾಜ ಸಜ್ಜನಶೆಟ್ಟರ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗೀತಾ, ಪಿಡಿಒ ಸಂಘದ ತಾಲೂಕ ಅಧ್ಯಕ್ಷರಾದ ಲೋಹಿತ ಪೂಜಾರ ಸೇರಿದಂತೆ ಪಿಡಿಒಗಳು, ತಾಂತ್ರಿಕ ಸಹಾಯಕರು, ಡಿಇಒಗಳು, ಬಿಎಫ್‌ಟಿ, ಗ್ರಾಮ ಕಾಯಕ ಮಿತ್ರರು, ಗ್ರಾಮ ಪಂಚಾಯತಿ ಸಿಬ್ಬಂದಿ, ತಾಲೂಕ ಪಂಚಾಯತ ಸಿಬ್ಬಂದಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...