ಗದಗ | ಪ್ರಾಮಾಣಿಕ ಪ್ರಯತ್ನದೊಂದಿಗೆ ಸಾಧನೆ ಸಾಧ್ಯ: ಮುಕ್ತಾ ಉಡುಪಿ 

Date:

“ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಆರಂಭದಿಂದಲೂ ಪ್ರಾಮಾಣಿಕ ಪ್ರಯತ್ನ, ಸತತ ಪರಿಶ್ರಮ, ಕಠಿಣ ಅಭ್ಯಾಸದೊಂದಿಗೆ ಸಾಧನೆಯ ಒಂದೊಂದು ಮೆಟ್ಟಿಲು ಏರುತ್ತಾ ಹೋದಾಗ ಮಾತ್ರ ಸಾಧನೆಯ ಉತ್ತುಂಗಕ್ಕೆರಲು ಸಾಧ್ಯವೆಂದು ನಿವೃತ್ತ ಪ್ರಾಚಾರ್ಯರಾದ ಮುಕ್ತಾ ಉಡುಪಿ ಅಭಿಪ್ರಾಯವನ್ನು ವ್ಯಕ್ತಪಡಿಸಿದರು” ಎಂದು ಮುಖ್ಯ ಅತಿಥಿ ಮುಕ್ತಾ ಉಡುಪಿ ಹೇಳಿದರು.

ಗದಗ ಪಟ್ಟಣದ ವಿದ್ಯಾದಾನ ಶಿಕ್ಷಣ ಸಮಿತಿ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೫-೨೬ ನೇ ಸಾಲಿನ ವಿದ್ಯಾರ್ಥಿ ಸಂಘದ ಮತದಾರರ ಜಾಗೃತಿ ಕ್ಲಬ್,  ಪ್ರಥಮ ಪಿಯುಸಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮತನಾಡಿದರು.

 “ಈ ಕಲಿಕಾ ಹಂತದಲ್ಲಿ ವಿದ್ಯಾರ್ಥಿಗಳು ಒಂದು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು, ಆ ಗುರಿಯನ್ನು ಸಾಧಿಸಲು ನಿರಂತರ ಪ್ರಯತ್ನವನ್ನು ಮಾಡುವುದು ಅವಶ್ಯ. ಈ ಹಂತದಲ್ಲಿ ತಮ್ಮ ಏಕಾಗ್ರತೆಯನ್ನು ಬೇರೆ ಕಡೆಗೆ ಸೆಳೆಯಲು ಹಲವಾರು ಆಕರ್ಷಣೆ ನಿಮ್ಮ ಸುತ್ತಲೂ ಇರುತ್ತವೆ. ಎಲ್ಲವುಗಳನ್ನು ಮೆಟ್ಟಿನಿಂತು ಸಾಧನೆ ಮಾಡಿದಾಗ ನಿಮ್ಮ ತಂದೆ ತಾಯಿ ಗುರುಗಳ ಪರಿಶ್ರಮ ಸಾರ್ಥಕವಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜಿನ ಪ್ರಾಚಾರ್ಯರು ಎಂ. ಸಿ. ಕಟ್ಟಿಮನಿ ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಕಿಶೋರಬಾಬು ಜೆ. ನಾಗರಕಟ್ಟಿ ಅತಿಥಿ ಅಧ್ಯಕ್ಷರನ್ನು ಪರಿಚಯಿಸಿದರು. ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸುವದರ ಜೊತೆಗೆ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಿಗೆ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿ. ಬಿ. ಹುಯಿಲಗೋಳ ಮಾತನಾಡಿ, “ಪ್ರತಿಯೊಬ್ಬ ವ್ಯಕ್ತಿಗಳಲ್ಲಿ ಒಂದೊಂದು ಸಾಮರ್ಥ್ಯವಿದೆ. ಅದನ್ನು ಅರಿಯಲು ಕಾಲೇಜಿನ ಹಂತ ಒಂದು ಸುವರ್ಣಕಾಲ. ತಮ್ಮ ಉಪನ್ಯಾಸಕರ ಮಾರ್ಗದರ್ಶನದೊಂದಿಗೆ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯುವದರೊಂದಿಗೆ ಅಧ್ಯಯನಗೈದ ಸಂಸ್ಥೆಗೆ, ಗುರುಗಳಿಗೆ, ತಂದೆ ತಾಯಿಗಳಿಗೆ ಕೀರ್ತಿಯನ್ನು ತರಬೇಕು” ಎಂದು ಆಶಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಲೋಕರ್ಪಾಣೆ

ಕಾರ್ಯಕ್ರಮದ ಕೊನೆಗೆ ಉಪನ್ಯಾಸಕರಾದ ಜೆ. ಡಿ. ಸಂಶಿ ವಂದಿಸಿದರು. ವೇದಿಕೆಯ ಮೇಲೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ಬಿ. ತೊಂಡಿಹಾಳ, ಮಹಿಳಾ ಪ್ರಧಾನ ಕಾರ್ಯದರ್ಶಿ ನಗೀನಾ ಜೆ. ಕದರಳ್ಳಿ, ಸಂಜನಾ ಹಂಚಿನಾಳ ಹಾಗೂ ಸಂಜನಾ ಲಮಾಣಿ, ಉಪನ್ಯಾಸಕರಾದ ಟಿ. ಎಮ್. ನದಾಫ, ಎಸ್. ಪಿ. ಪಮ್ಮಾರ, ಪಿ. ಜೆ. ಕಟ್ಟಿಮನಿ ಹಾಗೂ ಸಿಬ್ಬಂದಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...