ಗದಗ | ನಟ ಕಮಲ್ ಹಾಸನ್ ಕನ್ನಡಿಗರಿಗೆ ಕ್ಷಮೆಯಾಚಿಸಬೇಕು: ಕರವೇ ಆಗ್ರಹ

Date:

“ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ ‘ತಮಿಳು ಭಾಷೆಯಿಂದ ಕನ್ನಡ ಭಾಷೆಯು ಉಗಮವಾಗಿದೆ’ ಎಂದು ಹೇಳಿಕೆ ನೀಡಿದ ತಮಿಳು ನಟ, ರಾಜಕಾರಣಿ ಕಮಲ್ ಹಾಸನ್ ಈ ಕೂಡಲೇ ಕರ್ನಾಟಕದ ಜನತೆಗೆ ಕ್ಷಮೆಯಾಚಿಸಬೇಕು” ಎಂದು ಕರವೇ ಎಚ್ ಅಬ್ಬಿಗೇರಿ ಆಗ್ರಹಿಸಿದರು.

ಗದಗ ಪಟ್ಟಣದ ಟಿಪ್ಪು ವೃತ್ತದಲ್ಲಿ ಕಮಲ್ ಹಾಸನ್ ಅವರ ಹೇಳಿಕೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹಣಮಂತಪ್ಪ ಎಚ್ ಅಬ್ಬಿಗೇರಿ ನೇತೃತ್ವದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿ ಪ್ರತಿಭಟನೆ ನಡೆಸಿ ಮಾತನಾಡಿದರು.

“ಥಗ್ ಲೈಫ್ ಚಲನಚಿತ್ರವನ್ನು ಕರ್ನಾಟಕ ರಾಜ್ಯಾದಲ್ಲಿ ಬಿಡುಗಡೆ ಮಾಡಬಾರದು. ಕರ್ನಾಟಕ ವಾಣಿಜ್ಯ ಚಿತ್ರಮಂಡಳಿಗೆ ಒತ್ತಾಯಿಸುತ್ತೇವೆ. ಒಂದು ವೇಳೆ ಗದಗ ಜಿಲ್ಲೆಯಲ್ಲಿ ಈ ಚಿತ್ರ ಬಿಡುಗಡೆಯಾದರೆ ಚಿತ್ರಮಂದಿರಕ್ಕೆ ಬೆಂಕಿ ಹಚ್ಚುತ್ತೇವೆ” ಎಂದು ಎಚ್ಚರಿಕೆಯನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡ ಭಾಷೆ ಎರಡು ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿರುವ ಭಾಷೆಯಾಗಿದೆ. ಕನ್ನಡ ಭಾಷೆಯಲ್ಲಿ ಅನೇಕ ಪ್ರಸಿದ್ಧ ಶರಣರು, ಸಂತರು, ದಾರ್ಶನಿಕರು, ರಾಜ ಮಹಾರಾಜರು, ಕವಿಗಳು, ಲೇಖಕರು, ಇತಿಹಾಸಕರರ ದೇಶದಲ್ಲಿಯೇ ಪ್ರಸಿದ್ಧಿಯನ್ನು ಪಡೆದಿದ್ದಾರೆ. ಕನ್ನಡ ಅನೇಕ ಕಲಾವಿದರು ಸಹ ದೇಶದಲ್ಲಿ ತಮ್ಮದೇ ಆದ ಪ್ರತಿಭೆಯನ್ನು ತೋರಿಸಿದ್ದಾರೆ. ಕನ್ನಡಕ್ಕೆ ಭಾರತ ದೇಶದಲ್ಲಿಯೇ ಅತಿ ಹೆಚ್ಚು ಎಂಟು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಇಂತಹ ಶ್ರೀಮಂತ ಭಾಷೆಯನ್ನು ಅವಮಾನಿಸಿರುವ ಕಮಲ್ ಹಾಸನ್ ಅವರ ಹೇಳಿಕೆ ಅತ್ಯಂತ ಕೀಳುಮಟ್ಟದ್ದಾಗಿದೆ. ಈ ಕೂಡಲೇ ಕನ್ನಡಿಗರ ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನಾನು ಸೌಮ್ಯ ವ್ಯಕ್ತಿಯಾಗಿದ್ದರೂ ನನ್ನೊಳಗೆ ಕ್ರಾಂತಿ, ಬಂಡಾಯ ಅಡಗಿತ್ತು: ಕವಿ ಸತೀಶ ಕುಲಕರ್ಣಿ

ಪ್ರತಿಭಟನೆಯಲ್ಲಿ ಕರವೇ ಮುಖಂಡರು ಬಸವರಾಜ ಹೊಗೆಸೊಪ್ಪಿನ, ನಿಂಗನಗೌಡ ಮಾಲಿಪಾಟೀಲ, ವಿನಾಯಕ ಬದಿ, ನಬೀಸಾಬ ಕಿಲ್ಲೇದಾರ, ಆಶಾ ಜೂಲಗುಡ್ಡ, ತೌಸಿಫ ಢಾಲಾಯತ, ಮುತ್ತಣ್ಣ ಚವಡಣ್ಣವರ, ದಾದಾಪೀರ ನದಾಫ, ದಾವಲಸಾಬ ತಹಶೀಲ್ದಾರ, ಯಲ್ಲಪ್ಪ ಭೋವಿ, ಲೋಕೇಶ ಸುತಾರ, ಪ್ರವೀಣ ಗಾಣಗೇರ, ಚನ್ನಬಸಯ್ಯ ಗಡ್ಡದೇವರಮಠ, ಸಿರಾಜ್ ಹೊಸಮನಿ, ರಜಾಕ್ ಢಾಲಾಯತ, ಬಸವರಾಜ ರಗಟಿ, ಗೌಸು ಶಿರಹಟ್ಟಿ, ಮಹಾದೇವಿ ದೊಡ್ಡಗೌಡ್ರ, ಪ್ರಕಾಶ ಹುಡೇದ, ರಾಮನಗೌಡ ಹಳೇಮನಿ, ಹುಸೇನಸಾಬ ಕುಂಡಾಲಿ, ಮಾರುತಿ ಈಳಗೇರ, ಕೊಂಚಿಗೇರಮಠ, ಸೇರಿದಂತೆ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...