ಗದಗ | ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯನ್ನು ಈ ದೇಶದಿಂದ ಓಡಿಸಲು ಚಳುವಳಿ, ಹೋರಾಟಗಳನ್ನು ಮಾಡಿದರು: ಡಿ. ಎಚ್ ಪೂಜಾರ

Date:

“ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯನ್ನು ಈ ದೇಶದಿಂದ ಓಡಿಸಲು ಅನೇಕ ಚಳುವಳಿ ಹೋರಾಟಗಳನ್ನು ಮಾಡಿದರು. ಶೋಷಿತರಗೆ ನ್ಯಾಯ ಕೊಡಿಸುವಲ್ಲಿ ಶ್ರಮಿಸಿದರು” ಎಂದು ಶೋಷಿತರ ಸಂಘರ್ಷ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ. ಎಸ್. ಎಸ್. ತಾಲ್ಲೂಕು ಸಂಚಾಲಕ ಡಿ ಎಚ್ ಪೂಜಾರ ಹೇಳಿದರು.

ಗದಗ ಪಟ್ಟಣದ ಲಯನ್ಸ್ ಕ್ಲಬ್ ಭವನದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ‘ಭಾರತದ ಅಸ್ಪೃಶ್ಯತೆ ಮೊದಲ ಪ್ರತಿರೋಧ ಚಳವಳಿ ಮಹಾಡ್ ಸತ್ಯಾಗ್ರಹ ನೆನಪಿನಲ್ಲಿ ಶೋಷಿತರ ಸಂಘರ್ಷ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

“ಭಾರತದ ಇತಿಹಾಸ ಪುಟಗಳನ್ನು ತಿರುವಿ ಹಾಕಿದಾಗ ನಮ್ಮ ಬದುಕು ಹೇಗಿತೆಂದು ಅಂಬೇಡ್ಕರ್ ಅವರು ಬರೆದಿದ್ದಾರೆ. ಸಾಕಷ್ಟು ನೋವು, ಅವಮಾನಗಳನ್ನು ಅನುಭವಿಸುದ್ದನ್ನು ಬರೆದಿದ್ದಾರೆ. ಈ ನಾಡಿಗೆ ಬ್ಬುದ್ಧ ಬಂದು ಅನೇಕ ಉಪದೇಶಗಳನ್ನು ಸಾರಿದ. ಬಸವನ್ನ ಬ್ರಾಹ್ಮಣ ಜಾತಿಯನ್ನು ತೇಜಿಸಿ ಲಿಂಗಾಯತ ಧರ್ಮವನ್ನು ಸ್ಥಾಪಿಸಿ, ಮೇಲು-ಕೀಳು ಅಸಮಾನತೆಯನ್ನು ತೊಡೆದು ಹಾಕಲು ಅಂತರ್ ಜಾತಿ ಮದುವೆಗಳನ್ನು ಮಾಡುವುದರ ಮೂಲಕ ಸಮ ಸಮಾಜವನ್ನು ಕಟ್ಟಲು ಶ್ರಮಿಸಿದರು” ಎಂದು ಹೇಳುದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಡಳಿತಾಧಿಕಾರಿ ತೊಂಟದಾರ್ಯ ಮಠ ಎಸ್ ಎಸ್ ಪಟ್ಟಣಶೆಟ್ಟಿ ಉದ್ಘಾಟಿಸಿ ಮಾತನಾಡಿ, “ಅಂಬೇಡ್ಕರ್ ಅವರು ಆಧುನಿಕ ಅರ್ಥ ಶಾಸ್ತ್ರಜ್ಞರು ಕೂಡ ಆಗಿದ್ದರು. 62 ಪದವಿಗಳನ್ನು ಪಡೆದಿದ್ದರು.” ಎಂದು ಹೇಳಿದರು.

“ತೊಂಟಾದರ್ಯ ಮಠ ಸಿದ್ದಲಿಂಗ ಸ್ವಾಮೀಜಿ ಅವರು ರಾಮಣ್ಣ ಬ್ಯಾಟಿ ಅವರಿಂದ ಅಂಬೇಡ್ಕರ್ ಪುರಾಣ ಬರೆಸಿ, ಮಠದಲ್ಲಿ ಪ್ರವಚನ ಮಾಡಿಸಿದರು” ಎಂದು ಹೇಳಿದರು.

ಕಾರ್ಯಕ್ರಮ ಮುಖ್ಯ ಅತಿಥಿಗಳಾಗಿ ಡಿ ಎಸ್ ಎಸ್ ರಾಜ್ಯ ಸಂಘಟನಾ ಸಂಚಾಲಕರು ರಾಮಣ್ಣ ಕಲ್ಲದೇವನಳ್ಳಿ ಮಾತನಾಡಿ, ಅಂಬೇಡ್ಕರ್ ಅವರು ಸಾವಿರಾರು ಜನರೊಂದಿಗೆ ಚೌಡಾರ ಕೆರೆ ಪ್ರವೇಶ ಮಾಡಿ ನೀರು ಮುಟ್ಟಿ ಕುಡಿದರು. ದಲಿತರಿಗೆ ಸ್ವಾಭಿಮಾನದಿಂದ ಬದುಕಲು ಮೊದಲ ಅಡಿಯಿಟ್ಟ ಚಳುವಳಿ ಆಗಿತ್ತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಹುಣಸೂರಿನ ಹಾಡಿಗಳಿಗೆ ಭೇಟಿ ನೀಡಿದ ಸಿಇಓ ; ಸಮಸ್ಯೆಗಳ ಆಲಿಕೆ

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಡಿ. ಎಸ್. ಎಸ್. ಜಿಲ್ಲಾ ಸಂಚಾಲಕರು ಬಾಲರಾಜ್ ಅರಬರ್ ವಹಿಸಿದ್ದರು. ಮುಖ್ಯ ಅತಿಥಿಗಳು ಪೊಲೀಸ್ ಅಧಿಕಾರಿ ಡಿ. ವಿ ಪಾಟೀಲ್, ಎಸ್ ಎಸ್ ಮುಖಂಡರು ಬಸವರಾಜ ಕಡೆಮನಿ, ಆನಂದ ಶಿಂಗಾಡಿ, ಶರೀಫ ಬಿಳಿಯಲಿ, ಪೂಜಾ ಬೇವುರು, ನಾಗರಾಜ್ ಗೋಕಾವಿ, ಹಣಮಂತ ಛಲವಾದಿ, ಮೋಹನ್ ಅಲ್ಮೇಲಕರ, ಸತೀಶ್ ಪಾಸಿ, ಹಾಗೂ ಡಿ ಎಸ್ ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಮುತ್ತು ಬಿಳಿಯಲಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...