ಗದಗ | ಪ್ರಬುದ್ಧ ರಾಷ್ಟ್ರ ನಿರ್ಮಾಣದಲ್ಲಿ ಅಂಬೇಡ್ಕ‌ರ್ ಪಾತ್ರ ಅವಿಸ್ಮರಣೀಯ: ಮಹೇಶ ಪೋತದಾರ

Date:

“ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡುವಲ್ಲಿ ಹಾಗೂ ಪ್ರಬುದ್ಧ ರಾಷ್ಟ್ರ ನಿರ್ಮಾಣದಲ್ಲಿ ಅಂಬೇಡ್ಕ‌ರ್ ಪಾತ್ರ ಅವಿಸ್ಮರಣೀಯ. ತಮ್ಮೆಲ್ಲರಿಗೂ ವಿದ್ಯಾಭ್ಯಾಸ, ಶಿಕ್ಷಣ ಓದು ಎಷ್ಟು ಮುಖ್ಯ ಎಂಬುದನ್ನು ಡಾ. ಅಂಬೇಡ್ಕರ್‌ನೋಡಿ ಅರಿಯಬೇಕಿದೆ” ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಹೇಳಿದರು.

ಗದಗ ಪಟ್ಟಣದ ಬುಧವಾರ ಆದರ್ಶ ಶಿಕ್ಷಣ ಸಂಸ್ಥೆಯ ವಾಣಿಜ್ಯ ಮಹಾವಿದ್ಯಾಲಯದ ಸಿಲ್ವರ್‌ಜುಬ್ಲಿ ಸಭಾಂಗಣದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ, ಆದರ್ಶ ಶಿಕ್ಷಣ ಸಂಸ್ಥೆಯ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮನುಷ್ಯರನ್ನು ಗುಲಾಮರನ್ನಾಗಿ ಮಾಡಿದವರನ್ನು ನಾವು ನೋಡಿದ್ದೇವೆ. ಆದರೆ ಗುಲಾಮರನ್ನು ರಾಜ ಮಹಾರಾಜರನ್ನಾಗಿಸಿದವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ವಾರ್ತಾಧಿಕಾರಿ ವಸಂತ ಮತ್ತೂರ ಮಾತನಾಡಿ, ಸ್ವಾಭಿಮಾನ ನಮ್ಮತನ ಜೀವನದಲ್ಲಿ ಅಳವಡಿಕೊಳ್ಳುವ ಮೂಲಕ ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗೋಣ ಎಂದರು.

ಹುಲಕೋಟಿ ಜಿಸಿಟಿಎಂ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಅರ್ಜುನ್ ಗೋಳಸಂಗಿ ವಿಶೇಷ ಉಪನ್ಯಾಸ ನೀಡಿದರು. ಆದರ್ಶ ಶಿಕ್ಷಣ ಸಮಿತಿ ಅಧ್ಯಕ್ಷ ಕೆ.ವಿ.ಕುಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಆದರ್ಶ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಕೆ.ಗಿರಿರಾಜಕುಮಾರ್ ಸಂವಿಧಾನದ ಪ್ರಸ್ತಾವನೆ ಓದಿಸಿದರು. ಉಪಪ್ರಾಚಾರ್ಯ ಡಾ.ವಿ.ಟಿ.ನಾಯ್ಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ. ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ವಿವಿಧ ಬೇಡಿಕೆಗಳ ಈಡೇರಿಸುವಂತೆ ಶಾಸಕ ಶ್ರೀನಿವಾಸ ಮಾನೆಗೆ ಮನವಿ

ಗದಗ ದಲಿತ ಕಲಾ ಮಂಡಳಿ ಅಧ್ಯಕ್ಷ ಶರೀಫ್ ಬೆಳೆಯಲಿ ಹಾಗೂ ಸಂಗಡಿಗರು ಅಂಬೇಡ್ಕರ್‌ಕುರಿತು ಗೀತೆ ಪ್ರಸ್ತುತ ಪಡಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ಕುರಿತು ರಸಪ್ರಶ್ನೆ ಪ್ರಬಂಧ ಸ್ಪರ್ಧೆ, ಆಶುಭಾಷಣ, ಕವನ ವಾಚನ ಸ್ಪರ್ಧೆಯಲ್ಲಿ ವಿಜೇತರಾದವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಆದರ್ಶ ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಬಿ.ಪಿ. ಜೈನರ್ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...