ಗದಗ | ಅಭಿವೃದ್ಧಿ ಕಾಣದ ಗ್ರಾಮ; ಗ್ರಾ.ಪಂ ಅಧ್ಯಕ್ಷೆ ವಿರುದ್ಧ ದುರಾಡಳಿತದ ಆರೋಪ

Date:

ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, ಕಳೆದ 25 ದಿನಗಳಿಂದ ಕುಡಿಯುವ ನೀರಿಲ್ಲದೆ ಹಾಗೂ ಗ್ರಾಮದಲ್ಲಿ ಸ್ವಚ್ಚತೆಯನ್ನೇ ಕಾಣದೆ ಗಬ್ಬೆದ್ದು ನಾರುತ್ತಿರುವ ಚರಂಡಿಗಳಿಂದ ಗ್ರಾಮಸ್ಥರು ಸಿಟ್ಟಿಗೆದ್ದಿದ್ದು, ಗ್ರಾಮ ಪಂಚಾಯತಿಗೆ ಜಾನುವಾರುಗಳನ್ನು ಕಟ್ಟಿ ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನ ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ. ಆದರೆ, ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳು ಬೇಜವಾಬ್ದಾರಿ ಆಡಳಿತ ಎದ್ದುಕಾಣುತ್ತಿದ್ದರೂ, ಯಾವ ಒಬ್ಬ ಅಧಿಕಾರಿಯೂ ಕೂಡ ಜನರ ಗೋಳು ಕೇಳುತ್ತಿಲ್ಲ. ಅಧಿಕಾರಿಗಳು ಹಾಗೂ ಪ್ರತಿನಿಧಿಗಳು ಜನರ ಜೀವನದ ಜೊತೆ ಚಲ್ಲಾಟ ಆಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ ಅಧ್ಯಕ್ಷೆ ಗಂಗಮ್ಮ ಜಂಗಣ್ಣವರ ಅವರು, ಗ್ರಾಮದ ಅಭಿವೃದ್ಧಿ ಕೆಲಸ ಮಾಡಲು ಸಿಬ್ಬಂದಿ ಹಿಂದೇಟು ಹಾಕುತ್ತಿದ್ದು, ಗ್ರಾ.ಪಂ ಅಧ್ಯಕ್ಷರ ಮಾತು ಯಾರು ಯಾವ ಸಿಬ್ಬಂದಿಯೂ ಮಾತು ಕೇಳುವುದಿಲ್ಲ ಎಂದು ಉಡಾಫೆ ಉತ್ತರ ನೀಡುತ್ತಾರೆ ಹಾಗೂ ಗ್ರಾಮದ ಜನರ ಜೀವನದ ಜೊತೆ ಚೆಲ್ಲಾಟ ಆಡುತ್ತಿದ ಅಧ್ಯಕ್ಷರು ಹಾಗೂ ಸದಸ್ಯರು ರಾಜೀನಾಮೆ ನೀಡಬೇಕು ಎಂದು ಸಾರ್ವಜನಿಕರು ಪಟ್ಟು ಹಿಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದಲ್ಲಿ ಚುನಾಯಿತ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಖಾಸಗಿ ವಿಂಡ್ ಕಂಪನಿಯಲ್ಲಿ ಭ್ರಷ್ಟಾಚಾರಕ್ಕೆ ಕೈ ಹಾಕಿದ್ದೇವೆ.ಎನ್.ಓ.ಸಿ. ಕೊಟ್ಟಿಲ್ಲ 13 ಜನ ಜನಪ್ರತಿನಿದಿಗಳು ತಲಾ 25 ಸಾವಿರ ರೂ. ತಗೆದುಕೊಂಡಿದ್ದೇವೆ. ಗ್ರಾಮವನ್ನು ಬೇಕಾಬಿಟ್ಟಿ ಆಟವಾಡಿಸಿ ದುಡ್ಡು ಮಾಡಿದ  ಲಂಚಕೋರರು. 2 ದಿನದ  ಹಿಂದೆ 1 ಲಕ್ಷ ರೂ. ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ತಂದಿದ್ದೇನೆ ಎಂದು ಬಿಲ್ ಹಾಕಿದ್ದಾರೆ. ಪಂಚಾಯಿತಿಯಲ್ಲಿ ನಯ ಪೈಸೆ ಸಾಮಗ್ರಿ ಇಲ್ಲ. ಅಧ್ಯಕ್ಷೆಗೆ ಬೇಕಾಗಿರುವದು ದುಡ್ಡು. ನಾನು ಗ್ರಾ.ಪಂ ದುರಾಡಳಿತದಿಂದ ಬೇಸತ್ತು ರಾಜೀನಾಮೆ ನೀಡಲು ತಿರ್ಮಾನಿಸಿದ್ದೇನೆ ಎನ್ನುತ್ತಾರೆ ಗ್ರಾ.ಪಂ ಸದಸ್ಯೆ ನಿರ್ಮಲಾ ಆದಿ.

ಗ್ರಾಮ ಪಂಚಾಯತ ಅಧ್ಯಕ್ಷರ ಮಾತು ಯಾವೊಬ್ಬ ಸದಸ್ಯರು ಮಾತು ಕೇಳುವುದಿಲ್ಲ.ನನ್ನ ಅಧ್ಯಕ್ಷ ಅವಧಿಯಲ್ಲಿ ನನ್ನ ಮನೆಯ ಮುಂದೆ ಸಿ.ಸಿ‌.ರಸ್ತೆ ಮಾಡಿಸಿದಿನಿ.ಹಾಗೂ ಸಂತೋಷ ಕೋರಿ ಅವರ ಮನೆಯ ಹತ್ತಿರ ಸಿ.ಸಿ.ರಸ್ತೆಯ ಕಾಮಗಾರಿ ಮಾಡಿಸಿದ್ದೇನೆ ಎಂದು ಒಪ್ಪಿಕೊಂಡ ಅಧ್ಯಕ್ಷರು  ಎನ್ನುತ್ತಾರೆ ಗ್ರಾ.ಪಂ ಅಧ್ಯಕ್ಷೆ ಗಂಗವ್ವ ಜಂಗಣ್ಣವರ.

ಇನ್ನು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ಯಾಮ್ ಸುಂದರ್ ಇನಾಮದಾರ ಅವರು, ಗ್ರಾಮದ ಸಮಸ್ಯೆಯನ್ನು ಪರಿಗಣಿಸಿ 2 ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವೆ. ಗ್ರಾ‌.ಪಂ ಸಮಸ್ಯೆಗಳ ಕುರಿತು ಸಿಇಒ ಅವರ ಗಮನಕ್ಕೆ ತಂದು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಮುಂದಾಗುತ್ತೇನೆ ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಶೇಕಣ್ಣ ಮಾರನಬಸರಿ, ಕುಬೇರಪ್ಪ ಪಲ್ಲೆದ, ಮಲ್ಲಪ್ಪ ಪಲ್ಲೆದ, ಅಶೋಕ ಭಜಂತ್ರಿ, ವೀರಪ್ಪ ಕೋಣಪುರು, ಅನಿಲ್ ತಳವಾರ, ಮಂಜುನಾಥ್ ಭಜಂತ್ರಿ ಸೇರಿದಂತೆ ಗ್ರಾಮಸ್ಥರು ಹಾಗೂ ಮಹಿಳೆಯರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...