ಗದಗ | ಮತಗಟ್ಟೆ ಮಟ್ಟದ ಚುನಾವಣಾ ಭಾಗದ ಕೆಲಸ ನೀಡದಂತೆ ಅಂಗನವಾಡಿ ನೌಕರರು ಜಿಲ್ಲಾಧಿಕಾರಿಗೆ ಮನವಿ

Date:

“ನಮ್ಮ ಇಲಾಖೆಯ ಕೆಲಸವನ್ನು ಹೊರತುಪಡಿಸಿ ಬೇರೆ ಇಲಾಖೆಯ ಕೆಲಸ ಮಾಡಬಾರದೆಂದು ಆದೇಶವಿದೆ. ನಮಗೆ ಅಂಗನವಾಡಿ ಕೆಲಸ ಹೆಚ್ಚೆ ಇದೆ. ಪೋಷಣೆ, ಎಫ್.ಆರ್‌.ಎಸ್, ಪಿ.ಎಂ.ಎ.ವಿ.ವಾಯ್, ಭಾಗ್ಯಲಕ್ಷ್ಮಿ , ಮಾತೃಪೂರ್ಣ ಯೋಜನೆ ಇಷ್ಟೆಲ್ಲಾ ಕೆಲಸಗಳನ್ನು ಮಾಡುತ್ತಿದ್ದೇವೆ. ಹೆಚ್ಚುವರಿಯಾಗಿ ಅಂಗನವಾಡಿ ನೌಕರರಿಗೆ ಬಿ.ಎಲ್.ಓ. ಕೆಲಸವನ್ನು ನೀಡಬಾರದು” ಎಂದು ಸಿಐಟಿಯು ಮುಖಂಡ ಮಹೇಶ ಹಿರೇಮಠ ಒತ್ತಾಯಿಸಿದರು.

“ಗದಗ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ವತಿಯಿಂದ ಮತಗಟ್ಟೆ ಮಟ್ಟದ (ಬಿ.ಎಲ್.ಓ) ಚುನಾವಣಾ ಭಾಗದ ಕೆಲಸ ನೀಡದಂತೆ ಜಿಲ್ಲಾ ಪಂಚಾಯತ ಸಿಇಒ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು. 

“ಈ ಎಲ್ಲ ಕೆಲಸದ ಮಧ್ಯೆ ಅಂಗನವಾಡಿ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ೧೦.೦೦ ರಿಂದ ೧.೩೦ ರವರೆಗೆ ಕೆಲಸವಿದೆ. ಇಷ್ಟೆಲ್ಲಾ ಕೆಲಸವಿದ್ದರೂ ಬಿ.ಎಲ್.ಓ. ಕೆಲಸ ಮಾಡಲು ಹೋದರೆ ನಮ್ಮ ಅಂಗನವಾಡಿ ಮಕ್ಕಳ ಶಾಲಾ ಪೂರ್ವ ಶಿಕ್ಷಣ ಕುಂಠಿತಗೊಳ್ಳುತ್ತದೆ. ಆದ ಕಾರಣ ನಮ್ಮ ಇಲಾಖೆಯ ಕೆಲಸ ಹೊರತುಪಡಿಸಿ ಬೇರೆ ಕೆಲಸಗಳನ್ನು ಮಾಡಲು ಆಗುವುದಿಲ್ಲ” ಎಂದು ವಿನಂತಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಪುಸ್ತಕಗಳು ನಮ್ಮ ವ್ಯಕ್ತಿತ್ವ ನಿರ್ಮಾಣದ ಶಿಲ್ಪಿಗಳು: ಡಾ.ವಿಜಯಮಹಾಂತೇಶ ದಾನಮ್ಮನವರ

ಈ ಸಂದರ್ಭದಲ್ಲಿ ಮಾರುತಿ ಚಿಟಗಿ, ಪೀರು ರಾಠೋಡ, ಅಧ್ಯಕ್ಷರಾದ ಸಾವಿತ್ರಿ ಸಬ್ನಿಸ್, ಶಾರದಾ ರೋಣದ, ಗಂಗಮ್ಮ ದೇವರಡ್ಡಿ, ಸುಶೀಲಾ ಚಲವಾದಿ, ಗಿರಿಜಾ ಮಾಚಕ್ಕನವರ, ಕವಿತಾ ಬಡಿಗೇರ, ನೀಲಮ್ಮ ಹಿರೇಮಠ, ಅನ್ನಪೂರ್ಣ ಸಾಲಿಮಠ, ಶಾರದಾ ಹಳೇಮನಿ, ಮಂಗಲಾ ಪಟ್ಟಣಶೆಟ್ಟಿ, ಕಮಲಾಕ್ಷಿ ಬೀಳಗಿ, ಗಂಗಮ್ಮ ಮಾದರ, ಜ್ಯೋತಿ, ಶರಣಮ್ಮ ವಾಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...