ಗದಗ | ಛಲವಾದಿ ಸಮಾಜಕ್ಕೆ ಭೂಮಿ ಮಂಜೂರು ಮಾಡಲು ಜಿಲ್ಲಾಧಿಕಾರಿಗೆ ಮನವಿ

Date:

“ಅನೇಕ ದಶಕಗಳಿಂದ ಸಮಾಜದ ಒಳಿತಿಗಾಗಿ ಮತ್ತು ಸಮಾಜದ ಅಭಿವೃದ್ಧಿಗಾಗಿ ಅನೇಕ ಜನ ಹಿರಿಯರು ತಮ್ಮ ಜೀವನವನ್ನೇ ಸವೆಸಿದ್ದಾರೆ. ಇಂತಹ ಸದೃಢ ಸಮಾಜ ಕಟ್ಟುವಲ್ಲಿ ಶ್ರಮಿಸಿದ. ಸಮಾಜದ ಹಿರಿಯರನ್ನು ಮತ್ತು ನಾಯಕರ ಸ್ಮರಣೆಗೆ ಭೂಮಿ ಮಂಜೂರು ಮಾಡಬೇಕು” ಎಂದು ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಆನಂದ ಶಿಂಗಾಡಿ ಒತ್ತಾಯಿಸಿದರು.

ಛಲವಾದಿ ಮಹಾಸಭಾ ಜಿಲ್ಲಾ ಸಮಿತಿಗೆ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಗದಗ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಗದಗ ಜಿಲ್ಲೆಯಲ್ಲಿ ನಮ್ಮ ಛಲವಾದಿ ಸಮಾಜವು ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಅತೀ ಹಿಂದುಳಿದಿದೆ. ಇತ್ತೀಚಿನ ವರ್ಷಗಳಲ್ಲಿ ಸಾಮಾಜಿಕ ನ್ಯಾಯದ ಪರ ನಿಲ್ಲುವ ಸರ್ಕಾರಗಳು ಬಂದ ನಂತರ ಭಲವಾದಿ ಸಮಾಜ ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಸಮಾಜದ ಮುಖ್ಯವಾಹಿನಿಗೆ ಬಂದಿದೆ. ಆದರೂ ‘ಸಮಾಜದಲ್ಲಿ ಇನ್ನೂ ಕೂಡಾ ಹೇಳಿಕೊಳ್ಳುವಷ್ಟು ಬದಲಾವಣೆಗಳು ಆಗಿಲ್ಲ’ ಎನ್ನುವ ಬೇಸರವನ್ನು ವ್ಯಕ್ತಪಡಿಸುತ್ತಾ, ಇಂತಹ ಸಮಾಜವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಸಮಾಜದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಹಕಾರಿಯಾಗಲು ನಮಗೆ ಬಂದು ಶೈಕ್ಷಣಿಕ ಭವನದ ಅವಶ್ಯಕತೆ ಇದೆ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಛಲವಾದಿ ಸಮಾಜಕ್ಕೆ ಕನಿಷ್ಠ ಐದು ಎಕರೆ ಭೂಮಿಯನ್ನು ಮಂಜೂರು ಮಾಡಬೇಕು. ಅಲ್ಲಿ ಸಮಾಜದ ಅಭಿವೃದ್ಧಿಗಾಗಿ ಚಿಂತನೆ ನಡೆಸುವ ಭವ್ಯವಾದ ಕಟ್ಟಡ ಕಟ್ಟಲು ಮತ್ತು ಮಹಿಳೆಯರ ಮಕ್ಕಳ ಹಾಗೂ ವಿದ್ಯಾರ್ಥಿ ಯುವಜನರ ಆಶೋತ್ತರಗಳಿಗೆ ಪೂರಕವಾಗುವ ಯೋಜನೆಗಳನ್ನು ರೂಪಿಸಲಾಗುವುದು. ನಮ್ಮ ಜಿಲ್ಲೆಯಲ್ಲಿ ಸಮಾಜದ ಶೈಕ್ಷಣಿಕ ಸಾಮರ್ಥ್ಯ ಹೆಚ್ಚಿದ್ದು ಅದನ್ನು ಮತ್ತಷ್ಟು ಪ್ರೋತ್ಸಾಹಿಸಲು ನಮಗೆ ಮಕ್ಕಳ ಯುವಜನರ ವಿಧ್ಯಾಭ್ಯಾಸಕ್ಕಾಗಿ ಕಟ್ಟಡವನ್ನು ನಿರ್ಮಿಸಲು ಅವಕಾಶ ಕಲ್ಪಿಸಿಕೊಡಬೇಕು” ಎಂದು ಆನಂದ ಶಿಂಗಾಡಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೈಬರ್ ವಂಚನೆ ಬಗ್ಗೆ ಎಚ್ಚರವಹಿಸಿ : ಪ್ರೊ.ಬಿ.ಎಸ್.ಬಿರಾದಾರ್

ಮನವಿ ಸಂದರ್ಭದಲ್ಲಿ ಮುಖಂಡರು ಬಾಲರಾಜ್ ಅರಬರ್, ಶಿವಾನಂದ ತಮ್ಮಣ್ಣವರ, ಮುತ್ತು ಚೌಡಣ್ಣವರ, ಪರಶು ಕಾಳೆ, ಅನಿಲ್ ಕಾಳೆ, ರಮೇಶ್ ಛಲವಾದಿ ಇನ್ನೂ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...