ಗದಗ | ಹಳ್ಳಿರಂಗ ಶಾಲೆಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ

Date:

ದೇಶದ ಕಟ್ಟ ಕಡೆಯ ಪ್ರತಿ ಪ್ರಜೆಯ ಹಿತಕ್ಕಾಗಿ ಬೇರೆ ಬೇರೆ ದೇಶಗಳಲ್ಲಿ ಶಿಕ್ಷಣ ಪಡೆದು, ಮರಳಿ ತನ್ನ ಜನಗಳ ಹತ್ತಿರ ಬಂದು ಅವರಿಗೆ ಸಮಾನತೆ, ಹಕ್ಕುಗಳು, ಶಿಕ್ಷಣ ಸಿಗಲೆಂದು ಹಗಲಿರುಳು ಶ್ರಮಿಸಿದವರು ಡಾ. ಬಿ ಆರ್ ಅಂಬೇಡ್ಕರ್ ಎಂದು ಉಪನ್ಯಾಸಕ ಸೋಮಶೇಖರ್ ಕನಕಾಚಲ ಹೇಳಿದರು.

ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ಗ್ರಾಮದ ಹಳ್ಳಿರಂಗ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ನಡೆಸಿ ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳು ಉಪನ್ಯಾಸಕರು ಸೋಮಶೇಖರ್ ಕನಕಾಚಲ ಮಾತನಾಡಿ, “ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು, ಅವರು ಸಂಕಟ, ಕಷ್ಟ, ನೋವುಗಳನ್ನೆಲ್ಲವನ್ನು ಓದಬೇಕು. ಅಂಬೇಡ್ಕರ್ ಅವರು ಶಿಕ್ಷಣ ಸಾಕಷ್ಟು ಮಹತ್ವವನ್ನು ಕೊಟ್ಟಿದ್ದರು, ಅದಕ್ಕಾಗಿಯೇ ಓದಿನ ಮೂಲಕವೇ ನಾವೆಲ್ಲರೂ ಜ್ಞಾನವನ್ನು ಕಟ್ಟಿಕೊಳ್ಳಬೇಕ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಬೇಡ್ಕರ್ ಅವರ ಪರಿನಿಬ್ಬಾಣದ ನಂತರ ಅವರ ಪುಸ್ತಕಗಳು ಮೂಲೆ ಗುಂಪುಗಳಾಗಿ ಸೇರಿದ್ದವು. ಎಷ್ಟೋ ವರ್ಷಗಳ ವರೆಗೆ ಅವುಗಳು ಪ್ರಕಟಣೆ ಕಾಣದೆ, ಓದುಗರಿಂದ ದೂರ ಉಳಿದಿದ್ದವು. ಅಂಬೇಡ್ಕರ್ ಅವರ ಪುಸ್ತಕಗಳನ್ನು ಪ್ರಕಟಿಸಬೇಕೆಂದು ಅನೇಕ ಹೋರಾಟಗಳು ನಡೆದ ನಂತರದಲ್ಲಿ ಅಂಬೇಡ್ಕರ್ ‌ಅವರ ಪುಸ್ತಕಗಳನ್ನು ಪ್ರಕಟಿಸಿದರು. ಬಳಿಕ ಅಂಬೇಡ್ಕರ್ ಅವರ ಜ್ಞಾನವನ್ನು ಎಲ್ಲರೂ ಅರಿಯುವಂತಾಯಿತು. ಅಂದರೆ, ಎಲ್ಲರಿಗೂ ಓದವ ಅವಕಾಶ ಸಿಕ್ಕಿತು. ಅಂಬೇಡ್ಕರ್ ಅವರ ವಿಚಾರಗಳು, ಚಿಂತನೆಗಳನ್ನು ತಿಳಿಯಲು ಸಾಧ್ಯವಾಯಿತು. ಹಾಗಾಗಿ ನೀವು ಅವರ ಬರಹಗಳನ್ನು ಓದಿ ಅಂಬೇಡ್ಕರ್ ವಿಚಾರಗಳನ್ನು ತಿಳಿದುಕೊಳ್ಳಬೇಕು” ಎಂದು ಸೋಮಶೇಖರ್ ಕನಕಾಚಲ ಹೇಳಿದರು.

ಕವಿಗಾರ್ತಿ ಪೂಜಾ ಶಿಂಗೆ ಮಾತನಾಡಿ, “ಅಂಬೇಡ್ಕರ್ ವಿಚಾರಗಳನ್ನು ಯಾರು ಪ್ರಭುದ್ದವಾಗಿ ಜಾರಿಗೆ ತರುತ್ತಾರೋ ಅವರು ನಿಜವಾದ ಅನುಯಾಯಿಗಳು. ಅಂತಹ ಕೆಲಸವನ್ನು ಈ ಹಳ್ಳಿರಂಗ ಶಾಲೆ ಮಾಡುತ್ತಿದೆ. ಒಂದು‌ ಕಾಲದಲ್ಲಿ ಮನು ಗ್ರಂಥದಲ್ಲಿ ಮಹಿಳೆ ಸ್ವತಂತ್ರವಾಗಿರಲು ಅನರ್ಹಳೆಂದು ಹೇಳಿದೆ. ಆದರೆ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಮಹಿಳೆ ಸ್ವತಂತ್ರಳು, ಸ್ವತಂತ್ರವಾಗಿ ಬದುಕಲು ಹಕ್ಕು ಕೊಟ್ಟಿದೆ” ಎಂದು ಹೇಳಿದರು.

ರಾಘವೇಂದ್ರ ಬಿನ್ನಾಳ ಅಥಿತಿ ಭಾಷಣ ಮಾಡಿ, “ಹಳ್ಳಿರಂಗ ಶಾಲೆಯ ವಿದ್ಯಾರ್ಥಿಗಳು ಪಠ್ಯೇತರ ವಿಷಯಗಳ ಜತೆಗೆ ಇಂತಹ ಒಳ್ಳೆಯ ವಾತಾವರಣದಲ್ಲಿ ಬೆಳೆಯುತ್ತಿದ್ದು, ಈ ಸಮಾಜದ ಬಗ್ಗೆ ದುಡಿದ ಜ್ಯೋತಿ ಬಾ ಫುಲೆ, ಅಂಬೇಡ್ಕರ್ ಅವರಂತಹ ಅನೇಕ ಮಹಿನೀಯರ ಜೀವನ ಮೌಲ್ಯಗಳನ್ನು ಸಶಕ್ತವಾಗಿ ಹೇಳುವಂತ ಸಾಮರ್ಥ್ಯವನ್ನು ನಿಮ್ಮಲ್ಲಿ ನಾನು ಕಂಡಿರುವೆ. ಶಿಕ್ಷಣ ವಂಚಿತರಾಗದಂತೆ ಮಕ್ಕಳ ಶಿಕ್ಷಣವನ್ನು ಹಳ್ಳಿರಂಗ ಶಾಲೆ ಮಾಡುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಹೊಳೆ ಮಣ್ಣೂರಲ್ಲಿ ಮನರೇಗಾ ಕೂಲಿ ಕಾರ್ಮಿಕರೊಂದಿಗೆ ಅಂಬೇಡ್ಕರ್ ಜಯಂತಿ ಆಚರಣೆ 

ಕಾರ್ಯಕ್ರಮದಲ್ಲಿ ಅಜರುದ್ದೀನ ಕುಸುಗಲ್, ಬಿ ಎಮ್ ಮುಳ್ಳೂರ, ರೂಪಾ ಅಗಸಿಮನಿ,  ಶಿಕ್ಷರು, ಹಿರಿಯರು ಗದಿಗೆಪ್ಪ ಕಡಿಯವರು, ವಿದ್ಯಾರ್ಥಿಗಳು, ಪಾಲಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...