ಗದಗ | ಮಸೂದೆ ಖಾಸಗೀಕರಣ ಹಿಂಪಡೆಯಲು ಬಾಲು ರಾಠೋಡ ಒತ್ತಾಯ

Date:

ವಿದ್ಯುತ್ ಕ್ಷೇತ್ರದ “ಹೆಚ್ಚು ಆಕ್ರಮಣಕಾರಿ” ಖಾಸಗೀಕರಣದ ಗುರಿಯನ್ನು ಹೊಂದಿರುವ ಸರ್ಕಾರದ ಹೊಸ ಕರಡು ವಿದ್ಯುತ್ ಮಸೂದೆಯನ್ನು ತಕ್ಷಣವೇ ಹಿಂಪಡೆಯಬೇಕು. ಉತ್ಪಾದನೆ ಮತ್ತು ವಿತರಣೆಯಲ್ಲಿ ಎಲ್ಲಾ ರೀತಿಯ ಖಾಸಗೀಕರಣ ಮತ್ತು ಫ್ರ‍್ಯಾಂಚೈಸಿಂಗ್ ಅನ್ನು ಕೂಡಲೇ ನಿಲ್ಲಿಸಬೇಕು. ರೈತ ಕೃಷಿ ಕೂಲಿಕಾರರ ಹಿತವನ್ನು ಕಾಯುವ ಮೂಲಕ ಜನವಿರೋಧಿ ಮಸೂದೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವಂತೆ ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘಧ ಜಿಲ್ಲಾ ಮುಖಂಡ ಬಾಲು ರಾಠೋಡ ಒತ್ತಾಯಿಸಿದರು.

ಕೇಂದ್ರ ಸರ್ಕಾರದ ಸಂಹಿತೆಗಳ ರದ್ಧತಿಗೆ ಕಾರ್ಮಿಕ ಸಂಘಟನೆಗಳು ಫೆಬ್ರವರಿ ೧೨, ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದರ ಹಿನ್ನೆಲೆಯಲ್ಲಿ ನಗರದ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ನೇತೃತ್ವದಲ್ಲಿ ನಡೆದ ಮುಷ್ಕರವನ್ನು ಉದ್ದೇಶಿಸಿ ಮಾತನಾಡಿ, ರೈತರು ಬೆಳೆಯುವ ಬೆಳೆಗಳಿಗೆ ಬೆಂಬಲ ಬೆಲೆ ನೀಡದೇ, ಕಂಪನಿ ಕೃಷಿಯನ್ನು ಉತ್ತೇಜಿಸಿ ಬಲವಂತದ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದು ರೈತರ ಭೂಮಿಯನ್ನು ವಶಪಡಿಕೊಳ್ಳುತ್ತಿದೆ. ಇದರಿಂದ ರೈತರು ಕೂಲಿಕಾರರಾಗಿ ಮತ್ತು ನಿರುದ್ಯೋಗಸ್ಥರಾಗಿ ಮಾರ್ಪಾಡಾಗುತ್ತಿದ್ದಾರೆ. ಮೇಡ್ ಇನ್ ಇಂಡಿಯಾ ಹೆಸರಿನಲ್ಲಿ ಸ್ಟಾರ್ಟ್ ಅಪ್ ಯೋಜನೆಗಳನ್ನು ತಂದು ಮಾಲೀಕರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇವದಾಸಿ ಮಹಿಳೆಯರಿಗೆ ನಿವೇಶನ ವಸತಿ ಮಾಶಾಸನ ಹೆಚ್ಚಳ ಉಪಜೀವನಕ್ಕಾಗಿ ಭೂಮಿ ಸೇರಿದಂತೆ ಸರಕಾರದ ನೇಮಕಾತಿಯಲ್ಲಿ ವಿಶೇಷ ಆದ್ಯತೆ ಕಲ್ಪಿಸುವಂತೆ ದೇವದಾಸಿ ಪಟ್ಟಿಯಲ್ಲಿ ಹೊರಗೂಳಿದ 1 ಸೇರ್ಪಡೆಗೊಳಿಸುವುದು ಅಂತಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಉದ್ಯೋಗ ಕಲ್ಪಿಸುವುದು ಹಾಗೆ ದೇವದಾಸಿ ಮಕ್ಕಳ ವಿವಾಹಕ್ಕೆ ಮುಂದಾಗುವವರಿಗೆ ಪ್ರೋತ್ಸಾಹ ಧನ ನೀಡುವಿಕೆ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಪಂಚಾಯತ ನೌಕರರ ಸಂಘದ ಮುಖಂಡ ಬಸವರಾಜ ಮಂತೂರ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕಾರ್ಮಿಕರ ಹಿತಾಸಕ್ತಿ ರಕ್ಷಿಸಲು ಕೇಂದ್ರದ ಬಿಜೆಪಿ ಸರ್ಕಾರ ರೂಪಿಸಿರುವ 4 ಕಾರ್ಮಿಕ ಸಂಹಿತೆಗಳನ್ನು ತಿರಸ್ಕರಿಸುವ, ಮಾರ್ಪಡಿಸುವ, ಹೊಸದಾಗಿ ಪರ್ಯಾಯ ಕಾರ್ಮಿಕ ಕಾನೂನು ರೂಪಿಸುವ ಸಂವಿಧಾನಬದ್ಧ ಅಧಿಕಾರ ಬಳಸುವ ಹೊಣೆಗಾರಿಕೆ ಇದ್ಯಾವುದನ್ನು ಪ್ರದರ್ಶಿಸಿಲ್ಲ. ಬದಲಿಗೆ ರಾಜ್ಯದ ಸಿದ್ದರಾಮಯ್ಯ ಸರ್ಕಾರ ಕಾರ್ಮಿಕ ಸಂಹಿತೆಗಳ ಜಾರಿಗೆ ಕರಡು ನಿಯಮಗಳನ್ನು ಪ್ರಕಟಿಸುವ ಮೂಲಕ ಕಾರ್ಮಿಕ ವಿರೋಧಿ ನೀತಿಗಳಲ್ಲಿ ಬಿಜೆಪಿಗೂ ತನಗೂ ಯಾವುದೇ ವ್ಯತ್ಯಾಸವಿಲ್ಲ, ತಾನು ಸಹ ಮೋದಿ ಸರ್ಕಾರದಂತೆ ಬಂಡವಾಳಗಾರರ ಪರ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ ಎಂದು ಕಿಡಿಕಾರಿದರು.

ರೈತ ಮುಖಂಡರಾದ ಎಂ ಬಿ ಚೌಡರೆಡ್ಡಿ ಮಾತನಾಡಿ, ನರೇಗಾ ಕಾಯ್ದೆಯಡಿಯಲ್ಲಿ ಖಾತರಿ ಪಡಿಸಲಾದ ಕೆಲಸ, ಕೆಲಸದ ಹಕ್ಕನ್ನು ಕಸಿದುಕೊಳ್ಳುವುದರ ಜೊತೆಗೆ ಗ್ರಾಮೀಣ ಶ್ರಮ ಜೀವಿಗಳ ಕೊಂಡುಕೊಳ್ಳುವ ಸಾಮಾರ್ಥ್ಯ ಕಡಿಮೆ ಮಾಡುವುದು ಮತ್ತು ಕೃಷಿ ಕಾರ್ಮಿಕರ ಮತ್ತು ಇತರೆ ಗ್ರಾಮೀಣ ಕಾರ್ಮಿಕರ ವೇತನವನ್ನು ನಿಗ್ರಹಿಸುತ್ತಿದೆ. ವಿದ್ಯುತ್ಚಕ್ತಿಯನ್ನು ಖಾಸಗೀಕರಿಸಿ ವಿದ್ಯುತ್ ಪ್ರಸರಣ, ವಿತರಣಾ ವ್ಯವಸ್ಥೆಯ ಅನುಷ್ಠಾನ ಮತ್ತು ನಿರ್ವಹಣೆಯನ್ನು ಖಾಸಗಿ ಬಂಡವಾಳಗಾರರಿಗೆ ಕೊಡುವ ಮುಖಾಂತರ ಇದುವರೆಗೂ ವಿದ್ಯುತ್ ರೈತರಿಗೆ ಮತ್ತು ಜನಸಾಮಾನ್ಯರಿಗೆ ಸಬ್ಸಿಡಿ ದರದಲ್ಲಿ ಸಿಗುತ್ತಿದ್ದ ಪ್ರಮುಖ ಸೇವೆಯಿಂದ ಸರ್ಕಾರ ತನ್ನ ಸಾಮಾಜಿಕ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದರು.

ಇದನ್ನೂ ಓದಿ ಹಾವೇರಿ | ಅಖಿಲ ಭಾರತ ಮುಷ್ಕರ ಬೆಂಬಲಿಸಿ ಬೀದಿಗಿಳಿದು ಕಾರ್ಮಿಕರ ಬೃಹತ್ ಪ್ರತಿಭಟನೆ

ಮುಷ್ಕರದಲ್ಲಿ ಸಂಗಣ್ಣ ದಂಡಿನ್, ಸಾವಿತ್ರಿ ಸೋಮನಕಟ್ಟಿ, ಶರಣಪ್ಪ ಹುಲ್ಲೂರ್, ಅಶೋಕ್ ಸಜ್ಜನ್, ಸಿದ್ದು ಕಂಠಿ, ರುದ್ರಯ್ಯ ಸಾಲಿಮಠ, ಕಾರ್ಮಿಕ ಮುಖಂಡ ಗೂರಪ್ಪ ಕಣ್ಣೂರ್, ಹನುಮಂತ ತಾಳಿ, ನಿಂಗಪ್ಪ ಅರಹುಣಸಿ, ಮುತ್ತಪ್ಪ ಅರುಹುಣಸಿ, ಗಂಗಮ್ಮ ದ್ಯಾವರೆಡ್ಡಿ, ನೀಲಾಂಬಿಕಾ ಬೀರನೂರ ಸೇರಿದಂತೆ ಬಿಸಿಯೂಟ ನೌಕರರ ಸಂಘ, ಆಶಾ ನೌಕರರ ಸಂಘ, ಕಟ್ಟಡ ಕಾರ್ಮಿಕರ, ಗ್ರಾಪಂ ನೌಕರರು, ಅಂಗನವಾಡಿ, ವಿದ್ಯಾರ್ಥಿ-ಯುವಜನ ಸಂಘಟನೆ, ದೇವದಾಸಿ ಮಹಿಳಾ ಸಂಘಟನೆ, ಕೆ.ಪಿಆರ್‌ಎಸ್ ಸೇರಿದಂತೆ 500 ಕ್ಕೂ ಹೆಚ್ಚು ಸಾಮೂಹಿಕ ಸಂಘಟನೆ ಮುಖಂಡರು ಪಾಲ್ಗೊಂಡಿದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...