ಗದಗ | ಆತ್ಮಗೌರವ, ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ದ ಭೀಮಾ ಕೋರೆಗಾಂವ್: ಕವಿ ವೀರಪ್ಪ ತಾಳದವರ

Date:

ಸಾಮ್ರಾಜ್ಯ ವಿಸ್ತರಣೆಗಾಗಿ ಜಗತ್ತಿನಲ್ಲಿ ಅನೇಕ ಕದನಗಳು ನಡೆದು ಹೋಗಿವೆ. ಆದರೆ ಅಸಮಾನ ವ್ಯವಸ್ಥೆಯ ವಿರುದ್ಧ ಸಿಡಿದು, ಆತ್ಮಗೌರವ, ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ಧವೇ ಭೀಮಾ ಕೋರೆಗಾಂವ್ ವಿಜಯೋತ್ಸವ ಎಂದು ಕವಿ ವೀರಪ್ಪ ತಾಳದವರ ಹೇಳಿದರು.

ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದಲ್ಲಿ ಅಂಬೇಡ್ಕರ್ ಯುವ ತರುಣ ಸಂಘದಿಂದ ಹಮ್ಮಿಕೊಂಡಿದ್ದ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಕೋರೆಗಾಂವ್ ಯುದ್ಧವು ವೀರರ ಸಾಹಸ, ಧೈರ್ಯ, ಶಿಸ್ತು ಸಕಲ ಭಾರತೀಯರಿಗೆ ದೊಡ್ಡ ಮಾದರಿ. ಆದ್ದರಿಂದ ಬದುಕಿನ ಸವಾಲುಗಳನ್ನು ಎದುರಿಸಲು ನಾವೂ ಕೂಡಾ ಶಿಸ್ತಿನ ಸಿಪಾಯಿಗಳಾಗುತ್ತಲೇ ಮಹರ್ ಕಲಿಗಳ ಸ್ಮರಣೆಯನ್ನು ಪ್ರತಿ ವರ್ಷ ನಾವು ಮಾಡಬೇಕು” ಎಂದು ಕವಿ ವೀರಪ್ಪ ತಾಳದವರ ಅನಿಸಿಕೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜೆ ಮೇಣದ ಬೆಳಕಿನೊಂದಿಗೆ ಊರಿನ ಮುಖ್ಯ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಸಿದ ಗ್ರಾಮದ ಯುವಕರು, 1818ರ ಜನವರಿ 01ರ ರೋಚಕ ದಂಗೆಯನ್ನು ಮೆಲುಕು ಹಾಕುತ್ತಲೇ ಅಂಬೇಡ್ಕರರು ಕಟ್ಟಿಕೊಟ್ಟ ಇತಿಹಾಸವನ್ನು  ಉಳಿಸಲು ನಾವೆಲ್ಲರೂ ಸನ್ನದ್ದರಾಗೋಣ ಎಂದು ಪರಸ್ಪರ ಶಪಥ ಮಾಡಿಕೊಂಡರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾಣಂತಿಯರ ಸಾವು ಪ್ರಕರಣ; ಸಚಿವ ದಿನೇಶ್ ಗುಂಡೂರಾವ್ ವಜಾಕ್ಕೆ ಬಿಜೆಪಿ ಪ್ರತಿಭಟನೆ

ಭರಮಪ್ಪ ಕೊಳ್ಳಪ್ಪನವರ, ನಿಂಗರಾಜ ಕಡಿ ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಿದ್ದರು. ಯುವ ಮುಖಂಡರಾದ ರವಿ ಕಾಳಿ, ಅಶೋಕ ತಾಳದವರ, ನಿಂಗರಾಜ ಚಲವಾದಿ, ವಸಂತ ಹೆಬಸೂರು, ರಾಜು ಕೊಳ್ಳಪ್ಪನವರ, ವಿಶ್ವ ಕೊಳ್ಳಪ್ಪನವರ, ಹನುಮಂತ ಜೆ ಬಿ ದೇವಪ್ಪ ಕೊಳ್ಳಪ್ಪನವರ, ಮಂಜು ಹೆಬಸೂರು, ಮುತ್ತು ಕುರ್ತಕೋಟಿ, ಪುಂಡಲೀಕ ಕೆ, ಶರಣಪ್ಪ ಕೊಳ್ಳಪ್ಪನವರ, ಪ್ರಶಾಂತ ತಾಳದವರ ಸೇರಿದಂತೆ ಅನೇಕ ಸಂಘಟಕರಿದ್ದರು. ವಿದ್ಯಾರ್ಥಿಗಳು ಗೌರವ ವಂದನೆ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...