ಗದಗ | ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Date:

ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಶಾಸಕ ಜಿ ಎಸ್ ಪಾಟೀಲ ಅವರ ವಿರುದ್ದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಸಾಂವಿಧಾನಿಕ ಸಂಸ್ಥೆ ಮತ್ತು ವ್ಯಕ್ತಿಗಳ ವಿರುದ್ಧ ಅಪಪ್ರಚಾರ ಹಾಗೂ ಕಾನೂನು ಸುವ್ಯವಸ್ಥೆ ವಿಫಲಗೊಳಿಸುವ ಮೂಲಕ ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣದ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಬಳಿಕ ರಾಜ್ಯಾದ್ಯಂತ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನೆಪದಲ್ಲಿ ಪ್ರಧಾನಿ, ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಾಕಾರಿ ಮಾತುಗಳ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ” ಎಂದು ಹರಿಹಾಯ್ದರು.

“ಅನುಮತಿ ನೀಡಿರುವುದನ್ನು ವಿರೋಧಿಸಿ ಇತ್ತೀಚೆಗೆ ಗಜೇಂದ್ರಗಡದಲ್ಲಿ ಅಹಿಂದ್‌ ಸಮುದಾಯಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ರೋಣ ಶಾಸಕ ಜಿ ಎಸ್ ಪಾಟೀಲ ಅವರು, ‘ಸಿದ್ದರಾಮಯ್ಯ ಅವರ ಅಧಿಕಾರ ಮೊಟಕುಗೊಳಿಸಲು ಮುಂದಾದರೆ ಬಾಂಗ್ಲಾ ದೇಶದಲ್ಲಿ ಪ್ರಧಾನಿ ಮನೆಗೆ ನುಗ್ಗಿದಂತೆ ನಮ್ಮಲ್ಲೂ ಜನರು ಪ್ರಧಾನಿ ಮೋದಿ ಅವರ ಮನೆಗೆ ನುಗ್ಗುವ ದಿನಗಳು ದೂರವಿಲ್ಲ’ವೆಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಅಕ್ಷಮ್ಯ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿ ಎಸ್ ಪಾಟೀಲರು ಪ್ರಚೋದನಾತ್ಮಕ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಸರ್ಕಾರವೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡಲು ಬಯಸಿದೆ ಎಂಬುದು ಸಹಜವಾಗಿ ಕಂಡು ಬರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

“ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಜಿ ಎಸ್ ಪಾಟೀಲ ಅವರ ವಿರುದ್ದ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು” ಎಂದು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಮನವಿ ಸ್ವೀಕರಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ನಮ್ಮ ಗ್ರಾಮಗಳನ್ನು ಕಸ್ತೂರಿರಂಗನ್ ವರದಿಯಿಂದ ಕೈಬಿಡಬೇಕು: ರೈತ, ಕಾರ್ಮಿಕ ಹಿತರಕ್ಷಣಾ ಸಮಿತಿ

ವಿಧಾನ ಪರಿಷತ್‌ ಸದಸ್ಯ ಎಸ್ ವಿ ಸಂಕನೂರ, ಮುಖಂಡ ಜಗನ್ನಾಥಸಾ ಭಾಂಡಗೆ, ಎಂ ಎಸ್ ಕರಿಗೌಡ್ರು, ರವಿ ದಂಡಿನ, ನಗರಸಭೆ ಸದಸ್ಯರಾದ ಪ್ರಕಾಶ ಅಂಗಡಿ, ಮುತ್ತು ಮುಶಿಗೇರಿ, ಮಹಾಂತೇಶ ನಲವಡಿ, ಮಾಧೂಸಾ ಮೇರವಾಡೆ, ಅನಿಲ ಅಬ್ಬಿಗೇರಿ, ಗದಗ ಶಹರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯಲಕ್ಷ್ಮಿ ಮಾನ್ವಿ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...