ಗದಗ | ಸಿ ಸಿ ಪಾಟೀಲ ಅಭಿಮಾನಿ ಬಳಗದಿಂದ ಬಡವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ನುಗಳ ವಿತರಣೆ

Date:

ಅಭಿವೃದ್ಧಿಯ ಹರಿಕಾರ, ಶಿಕ್ಷಣ ಪ್ರೇಮಿ, ಗದಗ ಜಿಲ್ಲೆ ಕಂಡ ಶ್ರೇಷ್ಠ ನಾಯಕ ಸಿ ಸಿ.ಪಾಟೀಲರವರ 66ನೇ ಜನ್ಮದಿನದ ಪ್ರಯುಕ್ತ ಸಿ ಸಿ ಪಾಟೀಲ ಅಭಿಮಾನಿ ಬಳಗದಿಂದ ಬಳಗಾನೂರ ಗ್ರಾಮದ ಸರ್ಕಾರಿ ಕನ್ನಡ ಗಂಡು ಹಾಗೂ ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ಹಾಗೂ ಪೆನ್ನು ವಿತರ‌ಣೆ ಮಾಡಿದರು.

ಗ್ರಾಮದ ಬಿಜೆಪಿ ಮುಖಂಡ ಶರಣಪ್ಪ ಚಟ್ರಿ ಪ್ರಾಸ್ತಾವಿಕವಾಗಿ ಮಾತನಾಡಿ, “ಸಿ ಸಿ ಪಾಟೀಲ ಅವರು ಬಡವರ ದೀನ ದಲಿತರ ಪರವಾಗಿ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಅಷ್ಟೇ ಅಲ್ಲದೆ ಲೋಕೋಪಯೋಗಿ ಇಲಾಖೆ ಸಚಿವರಿದ್ದಾಗ ನರಗುಂದ ಮತಕ್ಷೇತ್ರವನ್ನು ಸಂಪೂರ್ಣ ಅಭಿವೃದ್ಧಿಗೊಳಿಸುವುದರ ಜತೆಗೆ ಸಾಕಷ್ಟು ಶಾಲೆ, ವಸತಿನಿಲಯಗಳನ್ನು ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ” ಎಂದು ಸ್ಮರಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ತಾ ಪಂ ಮಾಜಿ ಸದಸ್ಯ ಶೇಖಣ್ಣ ಎಸ್ ಅಗಸಿಮನಿ ಮಾತನಾಡಿ, “ಸಿ ಸಿ ಪಾಟೀಲ ಸಾಹೇಬರು ದೂರದೃಷ್ಠಿಯುಳ್ಳ ನಾಯಕರು. ಅಧಿಕಾರ ಇರಲಿ ಬಿಡಲಿ ಸದಾಕಾಲ ಕ್ಷೇತ್ರದ ಅಭಿವೃದ್ಧಿಗಾಗಿ ಚಿಂತನೆ ನಡೆಸಿರುವ ನಾಯಕ. ಸಿಕ್ಕಂತಹ ಅಧಿಕಾರವಧಿಯಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡುವುದರ ಜತೆಗೆ ಇತರೆ ರಾಜ್ಯಕೀಯ ನಾಯಕರಿಗೆ ಮಾದರಿಯಾಗಿದ್ದಾರೆ. ಅವರು ಶಿಕ್ಷಣ ಪ್ರೇಮಿಗಳಾಗಿದ್ದು, ತಾವೇ ಲಯನ್ಸ್ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಸಾಕಷ್ಟು ವಿದ್ಯಾರ್ಥಿಗಳಿಗೆ ಅನುಕೂಲ‌ ಕಲ್ಪಿಸಿದ್ದಾರೆ. ಅಲ್ಲದೆ ಬಡ ಮಕ್ಕಳ ಬಗ್ಗೆ ಅಪಾರವಾದ ಕಾಳಜಿಯುಳ್ಳ ಸಹೃದಯವನ್ನು ಹೊಂದಿರುವವರು. ಅವರ ಹುಟ್ಟು ಹಬ್ಬದ ಶುಭದಿನದಂದು ಸಿ ಸಿ ಪಾಟೀಲ‌ ಅಭಿಮಾನಿ ಬಳಗದಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ಹಾಗೂ ಪೆನ್ನು ವಿತರಿಸುತ್ತಿರುವುದು ಉತ್ತಮವಾದ ಕಾರ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಯುವ ಮುಖಂಡ ಕುಮಾರ ಮಳ್ಳಿಮಠ ಮಾತನಾಡಿ, “ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣವಾಗಿ ಮಾರ್ಪಟ್ಟಿವೆ. ಸರ್ಕಾರ ಸರ್ಕಾರಿ ಶಾಲೆಗಳಿಗೆ ಸಾಕಷ್ಟು ಅನುದಾನ ಒದಗಿಸುತ್ತಿದ್ದು‌, ಅದನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಲು ಶಿಕ್ಷಕರು ಪ್ರೋತ್ಸಾಹಿಸಬೇಕು. ಅಲ್ಲದೆ ಸನ್ಮಾನ್ಯ ಸಿ ಸಿ ಪಾಟೀಲರ ಅಭಿಮಾನಿಗಳು ಕೊಡುತ್ತಿರುವ ನೋಟ್‌ಬುಕ್ ತಮ್ಮ ಜೀವನ ರೂಪಿಸಿಕೊಳ್ಳುವ ಮೈಲುಗಲ್ಲುಗಳಾಗಿ ಪರಿವರ್ತನೆಯಾಗಲಿ” ಎಂದು ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಕೇರಳ ಮೂಲದ ಹಣಕಾಸು ಸಂಸ್ಥೆಯಿಂದ ಗ್ರಾಹಕರಿಗೆ ವಂಚನೆ; ಆರೋಪಿ ಬಂಧನ

ಮುಖ್ಯ ಅತಿಥಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಭುರಾಜ ಗೂಳರಡ್ಡಿ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಳಗಾನೂರ ಎಸ್‌ಡಿ‌ಎಂ‌ಸಿ ಅಧ್ಯಕ್ಷ ಬಸವರಾಜ ಚಲವಾದಿ, ಅತಿಥಿ ಆರ್ ಎನ್ ಪಾಟೀಲ, ಗ್ರಾ ಪಂ ಸದಸ್ಯ ಬಳಗಾನೂರ ಹನಮಪ್ಪ ಕಮಲದಿನ್ನಿ, ಬಿಜೆಪಿ ಮುಖಂಡ ಶರಣಪ್ಪ ಚಟ್ರಿ, ಬಿಜೆಪಿ ಯುವ ಮುಖಂಡ ಕುಮಾರ ಮಳ್ಳಿಮಠ, ಹಿರಿಯರಾದ ಹನುಮರಡ್ಡೆಪ್ಪ ಕರಡ್ಡಿ, ಯುವ ಮುಖಂಡರಾದ ಈಶ್ವರಗೌಡ್ರ, ಕಾಶೀಗೌಡ್ರ, ಶಶಿಧರ ಗೂಳರಡಗ್ಡಿ, ಮಕ್ತುಮಹುಸೇನ ಮುಲ್ಲಾ, ಮಂಜುನಾಥ ಆರಬಳ್ಳಿನ, ಪ್ರದೀಪ ಗಾಣಿಗೇರ, ಬಸವರಾಜ, ಚವಡಿ, ಶರಣಪ್ಪ ಬಿಂಗಿ, ಬಸವರಾಜ ಕರಡ್ಡಿ, ಪ್ರಶಾಂತ ಶಟವಾಜಿ, ತಿಪ್ಪಣ್ಣ ಕರಿಭರಮಣ್ಣವರ, ಮಂಜುನಾಥ ದೊಡ್ಡಮನಿ, ಹನಮಂತ ನಡುವಿನಮನಿ, ಸುನೀಲ ಬೇವಿನಮರದ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಮಕ್ಕಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...