ಗದಗ | ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಅಭಿಯಾನ: ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್

Date:

ಗದಗ ಜಿಲ್ಲೆಯ ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣದ ಪಟ್ಟಿ ಸೇರಿಸುವ ಉದ್ದೇಶದಿಂದ ಅಲ್ಲಿನ ಪ್ರಾಚ್ಯ ವಸ್ತುಗಳು, ಶಾಸನಗಳು, ಮೂರ್ತಿಗಳು, ತಾಳೆಗರಿಗಳನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ನವೆಂಬರ್ 24ರಿಂದ ವಿಶೇಷ ಅಭಿಯಾನ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

ಪ್ರತಿಮೆಗಳು, ಶಿಲ್ಪಗಳು, ಕೆತ್ತೆನೆಯಿಂದ ಕೂಡಿದ ಕಂಬಗಳು ,ಶಿಲಾ ಶಾಸನಗಳು, ನಾಣ್ಯಗಳನ್ನು ಕಳೆದುಕೊಂಡಿದ್ದೇವೆ. ಕೆಲವು ಬಟ್ಟೆ ಒಗೆಯುವ ಕಲ್ಲಾಗಿದ್ದರೆ, ಮತ್ತೆ ಕೆಲವು ಜಾನುವಾರು ಕಟ್ಟು ತಾಣಗಳಾಗಿವೆ. ಆದ್ದರಿಂದ ಸ್ಥಳೀಯರಿಗೆ ಅವುಗಳ ಕುರಿತು ಮನವರಿಕೆ ಮಾಡಿ ಅವರಿಂದ ಅವೆಲ್ಲವನ್ನು ಪಡೆಯಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪಲ್ಲಕ್ಕಿ ಹೊತ್ತು ಗ್ರಾಮಸ್ಥರ ಮನೆ ಮನೆಗೆ ಹೋಗಿ ತಮ್ಮ ಬಳಿ ಇರುವ ಪ್ರಾಚ್ಯ ವಸ್ತುಗಳನ್ನು ಸರ್ಕಾರಕ್ಕೆ ನೀಡುವಂತೆ ಮನವಿ ಮಾಡುತ್ತೇವೆ. ಕೆಲವು ಗುಡಿಗಳು ಮತ್ತು ದೇವಸ್ಥಾನಗಳು ಒತ್ತುವರಿ ಆಗಿವೆ. ಅವುಗಳನ್ನು ಪಡೆಯಲು ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಮನವರಿಕೆ ಮಾಡುತ್ತೇವೆ ಎಂದು ಪಾಟೀಲ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಕ್ಕುಂಡಿಯಲ್ಲಿ 101 ಗುಡಿಗಳು, 101 ಬಾವಿಗಳು, ಟಂಕಸಾಲೆ ಇರುವುದು ಗಮನಕ್ಕೆ ಬಂದಿದೆ. ಒತ್ತುವರಿ, ನಿರ್ಲಕ್ಷ್ಯ ಮುಂತಾದ ಕಾರಣಗಳಿಂದ ಅವುಗಳನ್ನು ಕಳೆದುಕೊಂಡಿದ್ದೇವೆ. ಅವೆಲ್ಲವನ್ನು ಪಡೆದುಕೊಂಡು ಅಭಿವೃದ್ಧಿಪಡಿಸಿದಾಗಲೇ ವಿಶ್ವ ಪಾರಂಪರಿಕ ತಾಣದ ಪಟ್ಟ ಪಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ? ಕುಂದಾಪುರ | ರಿವರ್ಸ್‌ ಬರುತ್ತಿದ್ದ ಇನ್ನೋವಾ ಕಾರಿಗೆ ಮೀನಿನ ಲಾರಿ ಡಿಕ್ಕಿ: ಚಾಲಕನ ಸಹಿತ 8 ಮಂದಿ ಗಂಭೀರ

ಐಹೊಳೆಯಲ್ಲಿ ಒತ್ತುವರಿ ಆಗಿದ್ದ ಎಂಟು ದೇವಾಲಯಗಳನ್ನು ಬಿಡಿಸಿಕೊಳ್ಳಲು ಅವರಿಗೆ ಪರ್ಯಾಯವಾಗಿ 13 ಎಕರೆಯಲ್ಲಿ ವ್ಯವಸ್ಥೆ ಮಾಡಲಾಯಿತು, ಎಷ್ಟೋ ಶಾಸನಗಳು ಮತ್ತು ಮೂರ್ತಿಗಳು ತಿಪ್ಪೆ ಗುಂಡಿಯಲ್ಲಿವೆ. ಅವುಗಳ ಐತಿಹಾಸಿಕ ಮಹತ್ವವನ್ನು ಜನರಿಗೆ ತಿಳಿಸಿ ಹೇಳಬೇಕಾಗಿದೆ. ಪ್ರವಾಸೋದ್ಯಮ ಇಲಾಖೆ, ಪ್ರಾಚ್ಯ ಇಲಾಖೆ ಮತ್ತು ಜಿಲ್ಲಾ ಆಡಳಿತ ಸೇರಿ ಒಟ್ಟಿಗೆ ಕೆಲಸ ಮಾಡಲಿವೆ ಎಂದು ಪಾಟೀಲ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...