ಗದಗ | ಕರ್ನಾಟಕ 50ರ ಸಂಭ್ರಮ; ಮಕ್ಕಳಿಗೆ ಗಾಳಿಪಟ ತಯಾರಿಸಿ-ಹಾರಿಸುವ ಸ್ಪರ್ಧೆ

Date:

ಕರ್ನಾಟಕ 50ರ ಸಂಭ್ರಮದ ಅಂಗವಾಗಿ ಮೆಣಸಗಿ ಹಾಗೂ ಹೊಳೆಮಣ್ಣೂರು ಗ್ರಾಮ ಪಂಚಾಯತಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳಿಗೆ ಗಾಳಿಪಟ ತಯಾರಿಸುವ ಹಾಗೂ ಹಾರಿಸುವ ಸ್ಪರ್ಧೆಯನ್ನು ಆಯೋಜಿಸಿತ್ತು. ಸ್ಪರ್ಧೆಯಲ್ಲಿ 500 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು, ಸ್ವತಃ ಗಾಳಿಪಟ ತಯಾರಿಸಿ, ಹಾರಿಸಿ ಸಂಭ್ರಮಿಸಿದ್ದಾರೆ.

ಈ ಎರಡೂ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸಿಬ್ಬಂದಿ ಕೆಂಪು ಮತ್ತು ಹಳದಿ ಬಣ್ಣದ ಹಾಳೆಗಳನ್ನು ಪೂರೈಸಿ, ಮಕ್ಕಳಿಗೆ ಗಾಳಿಪಟ ತಯಾರಿಸುವ ಕುರಿತು ತರಬೇತಿ ನೀಡಿದರು.

ಮಕ್ಕಳು ತಮ್ಮ ಸುತ್ತಮುತ್ತ ಸಿಕ್ಕ ಬಿದಿರು ಹಾಗೂ ತೆಂಗಿನ ಗರಿಗಳ ಕಡ್ಡಿಗಳಿಂದ ಗಾಳಿಪಟಗಳನ್ನು ತಯಾರಿಸಿ, ಸೂತ್ರ ಜೋಡಿಸಿ, ಬಾಲಂಗೋಚಿ ಕಟ್ಟಿ, ಒಬ್ಬರಿಗಿಂತ ಒಬ್ಬರು ಅಂದವಾದ ಗಾಳಿಪಟ ತಯಾರಿಸಿದ್ದರು. ಮಕ್ಕಳು ಗಾಳಿಪಟ ತಯಾರಿಸಿ ಹಾರಿಸುತ್ತಿರುವುದನ್ನು ಕಂಡು ಪೋಷಕರೂ ಸಹ ಮಕ್ಕಳಿಗೆ ಗಾಳಿಪಟ ತಯಾರಿಸುವಲ್ಲಿ ನೆರವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲೆಗಳ ಮುಖ್ಯೋಪಾಧ್ಯಾಯರ  ಉತ್ತಮವಾಗಿ ಗಾಳಿಪಟ ತಯಾರಿಸಿ, ಹಾರಿಸಿದ ವಿದ್ಯಾರ್ಥಿಗಳ ಪೈಕಿ ತರಗತಿವಾರು ಪ್ರಥಮ, ದ್ವಿತೀಯ ಹಾಗೂ ಸಮಾಧಾನಕರ ಬಹುಮಾನಕ್ಕೆ ಮಕ್ಕಳ ಹೆಸರು ಅಂತಿಮಗೊಳಿಸಿದರು.

ಹೊಳೆ ಮಣ್ಣೂರು  ಗ್ರಾಮ ಪಂಚಾಯತಿ ಅಧ್ಯಕ್ಷರಾಗಿರುವ ಸುಜಾತ ಮಠಪತಿ, ಗ್ರಾಮೀಣ ಕ್ರೀಡೆಗಳು ಮಹತ್ವ ಕಳೆದುಕೊಳ್ಳುತ್ತಿರುವ ಈ ದಿನಮಾನಗಳಲ್ಲಿ, ನಮ್ಮ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಮಕ್ಕಳಿಗೆ ಗಾಳಿಪಟ ತಯಾರಿಸುವ ತರಬೇತಿ ನೀಡಿ ಅಗತ್ಯ ಪರಿಕರಗಳನ್ನು ಒದಗಿಸುವ  ಮೂಲಕ ಮಕ್ಕಳು ವಿನೂತನವಾಗಿ ಯೋಚಿಸುವಂತೆ, ಸಂಭ್ರಮಿಸುವಂತೆ ಮಾಡಿರುವುದು ನಮಗೆ ಹೆಮ್ಮೆಯ ವಿಷಯ ಎಂದರು.

ಕರ್ನಾಟಕ 50ರ ಸಂಭ್ರಮದ ನಿಮಿತ್ಯ ನಮ್ಮ ಶಾಲೆಯ ಮಕ್ಕಳು ಗಾಳಿಪಟ ತಯಾರಿಸಿ ಹಾರಿಸಿ ಸಂಭ್ರಮಿಸುತ್ತಿರುವುದು ನಮಗೆ ಖುಷಿ ತಂದಿದೆ ಎಂದು ಮೆಣಸಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಈಶ್ವರಪ್ಪ ಮುದೇನೂರು ಅಭಿಪ್ರಾಯ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...