ಗದಗ | ಸಮುದಾಯದ ವಿರುದ್ಧ ಪ್ರಭುತ್ವದ ಸರ್ವಾಧಿಕಾರಿ ಧೋರಣೆ: ಕೂಡ್ಲೇಪ್ಪ ಗುಡಿಮನಿ

Date:

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯಿಂದ ಕಬ್ಬು ಬೆಳೆಗಾರರಿಗೆ ವರ್ಷಕ್ಕೆ ₹4,000 ಕೋಟಿ ವೆಚ್ಚವಾಗುತ್ತಿದೆ. ಈ ದೇಶದ ಬಂಡವಾಳ ಶಾಹಿಗಳು ಬೆಲೆ ನಿಗದಿಪಡಿಸುತ್ತಾರೆ. ಆದರೆ ರೈತರು ಬೆಳೆದ ಬೆಳೆಗೆ ನಿಜವಾದ ಬೆಲೆ ಸಿಗಬೇಕಾದರೆ ಸಂಘಟಿತರಾಗಿ ಸರ್ಕಾರದ ಈ ನೀತಿಯ ವಿರುದ್ದ ಬೀದಿಗಿಳಿಯಬೇಕು ಎಂದು ಹಿರಿಯ ರೈತ ಮುಖಂಡ ಬಿ ಎಸ್ ಸೊಪ್ಪಿನ ಕೂಡ್ಲೇಪ್ಪ ಗುಡಿಮನಿ ಹೇಳಿದರು.

ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಘಟಕದ ನೇತೃತ್ವದಲ್ಲಿ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ 43ನೇ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ದೊಡ್ಡದೊಡ್ಡ ಕಂಪನಿಗಳ ಮಾಲೀಕರ ಲಕ್ಷಗಟ್ಟಲೆ ಸಾಲವನ್ನು ಮನ್ನಾ ಮಾಡಿದ್ದಾರೆ. ಆದರೆ ರೈತರ ಸಾಲವನ್ನು ಮನ್ನಾ ಮಾಡಲು ಇವರಿಂದ ಸಾಧ್ಯವಾಗಿಲ್ಲ. ಹಾಗಾದ್ರೆ ಇವರು ಯಾರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ಕೇರಳದ ಎಡ ಸರ್ಕಾರ ನಿಜವಾಗಿಯೂ ರೈತರ ಹಿತಾಸಕ್ತಿ ಕಾಪಾಡುವಲ್ಲಿ ಸದಾ ಮುಂದಿದೆ. ನಮ್ಮ ಸರ್ಕಾರಗಳು ರೈತರ ಹಿತಾಸಕ್ತಿ ಕಾಪಾಡುವಲ್ಲಿ ಹಿಂದೆಮುಂದೆ ನೋಡುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದುಡಿಯುವ ಜನರ ಮೇಲೆಯೂ 4 ಬಿಲ್‌ಗಳನ್ನು ಪಾಸ್ ಮಾಡುವ ಮೂಲಕ ಕಾರ್ಮಿಕ ವಿರೋಧಿ ನೀತಿ, ಹಿಗೇ ಒಂದಲ್ಲಾ ಒಂದು ಸಮುದಾಯದ ಮೇಲೆ ಪ್ರಭುತ್ವ ತನ್ನ ಸರ್ವಾಧಿಕಾರಿ ಧೋರಣೆಯನ್ನು ಮಾಡುತ್ತಲೇ ಬಂದಿದೆ” ಎಂದು ಕೂಡ್ಲೇಪ್ಪ ಗುಡಿಮನಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಹಿರಿಯ ರೈತರಿಗೆ ಪಿಂಚಣಿ, ಸರ್ಕಾರಿ ಶಾಲಾ ಮಕ್ಕಳಿಗೆ ಕೃಪಾಂಕ ನೀಡಿ: ಶಾಸಕ ಬಿ ಆರ್ ಪಾಟೀಲ್

ಜಿಲ್ಲಾ ಸಂಚಾಲಕ ಎಂ ಎಸ್ ಹಡಪದ ಪ್ರಾಸ್ತಾವಿಕವಾಗಿ ಮಾತುನಾಡಿದರು. ನರಗುಂದ ನವಲಗುಂದ ರೈತ ಬಂಡಾಯದ ರುವಾರಿ ಬಿ ಎಸ್ ಸೊಪ್ಪಿನ ಅವರು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿ. ನಾಗರಾಜ, ರವೀಂದ್ರ, ಹೊನವಾಡ ಮಹೇಶ ಪತ್ತಾರ, ಶರಣು ಪೂಜಾರ, ಬಸವರಾಜ ಮಂತೂರ, ಫಯಾಜ್ ತೋಟದ, ಮಹೇಶ ಹಿರೇಮಠ, ಬಾಲು ರಾಠೋಡ, ಪೀರು ರಾಠೋಡ, ಮೇಘರಾಜ ಬಾವಿ ಸೇರಿದಂತೆ ರೈತರು, ಕಾರ್ಮಿಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...