ಗದಗ | ಚಂದ್ರು ಲಮಾಣಿ ‘ಲೋಕಾ’ ಪ್ರಕರಣ; ಕಾಂಗ್ರೆಸ್ ಕೈವಾಡ: ಬಿಜೆಪಿ ಕಾರ್ಯಕರ್ತರ ಆರೋಪ

Date:

‘ಶಿರಹಟ್ಟಿ ಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಅವರ ಮೇಲೆ ಲೋಕಾಯುಕ್ತರ ದಾಳಿ ಕಾಂಗ್ರೆಸ್ ಪ್ರಬಲ ನಾಯಕರ ಷಡ್ಯಂತ್ರ. ಶಾಸಕರ ಅಭಿವೃದ್ಧಿ ಕೆಲಸ ಅವರ ಮುಗ್ಧತೆಯನ್ನ ಹಾಗೂ ಅವರ ಜನಮೆಚ್ವುಗೆ ಕಾರ್ಯ ಸರಕಾರ ಸಹಿಸದೇ ಉದ್ದೇಶಪೂರ್ವಕವಾಗಿ ಲೋಕಾಯುಕ್ತ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರ ಮೇಲೆ ಲೋಕಾ ದಾಳಿ ಹಿಂದೆ ಕಾಂಗ್ರೆಸ್ ಪ್ರಬಲ ರಾಜಕಾರಣಿಗಳ ಕೈವಾಡ ಮತ್ತು ಷಡ್ಯಂತ್ರ ಅಡಗಿದೆ” ಎಂಬುದನ್ನು ಖಂಡಿಸಿ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದರು. 

ಪ್ರತಿಬಟನೆಯಲ್ಲಿ ಬಂಜಾರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ತುಳಸಿಮನಿ ಮಾತನಾಡಿ, “ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರ ಮೇಲೆ ನಡೆದಿರುವ ಲೋಕಾ ದಾಳಿ ಹಿಂದೆ ಷಡ್ಯಂತ್ರ ಅಡಗಿದೆ. ದಾಳಿಗೂ ಮುನ್ನ ದೊಡ್ಡ ಸಂಚು ನಡೆಸಿ, ಅವರನ್ನು ವ್ಯವಸ್ಥಿತ ರೀತಿಯಲ್ಲಿ ಪ್ರಕರಣದಲ್ಲಿ ಸಿಲುಕಿಸಿ, ಜೈಲಿಗೆ ಕಳುಹಿಸಿದ್ದಾರೆ’ ಎಂದು ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಬ್ಬ ದಲಿತ ಶಾಸಕನ ಏಳ್ಗೆ ಸಹಿಸದ ಕಾಂಗ್ರೆಸ್ ನಾಯಕರು  ಶಾಸಕರ ವಿರುದ್ಧ ಸಂಚು ಹೆಣೆದಿದ್ದಾರೆ. ಆದರೆ, ದಲಿತ ಶಾಸಕರ ಜನಪರ ಏಳ್ಗೆ ಸಹಿಸದವರ ಬಗ್ಗೆ ಡಾ. ಚಂದ್ರು ಲಮಾಣಿಯವರು ಹೆದರುವ ಜರೂರು ಇಲ್ಲ. ಅವರ ಬೆನ್ನಿಗೆ ಕರ್ನಾಟಕ ಬಂಜಾರ ಸಮಾಜ ಸದಾ ಇರಲಿದೆ” ಎಂದು ಹೇಳಿದರು.

“ಶಾಸಕ ಚಂದ್ರು ಅವರು ಬಡತನದಿಂದ ಮೇಲೆ ಬಂದ ವ್ಯಕ್ತಿ. ಇದನ್ನು ಕೆಲವರಿಗೆ ಸಹಿಸಲು ಆಗಲಿಲ್ಲ. ಹಾಗಾಗಿ, ಅವರನ್ನು ರಾಜಕೀಯವಾಗಿ ಮುಗಿಸಬೇಕು ಎಂಬ ಉದ್ದೇಶದಿಂದ ದುಷ್ಟರೆಲ್ಲಾ ಒಂದಾಗಿ ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ”ಎಂದು ಕಿಡಿಕಾರಿದರು.

“ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ ಗುತ್ತಿಗೆದಾರ ವಿಜಯ್ ಪೂಜಾರ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ. ಆತ ಕೂಡ ದಲಿತ ಸಮಾಜಕ್ಕೆ ಸೇರಿದ ವ್ಯಕ್ತಿ. ಒಬ್ಬ ದಲಿತ ಶಾಸಕನನ್ನು ಹಣಿಯಲು ದಲಿತ ಗುತ್ತಿಗೆದಾರ, ಸ್ವಾಮೀಜಿಯನ್ನೇ ಬಳಕೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

“ಆದರಹಳ್ಳಿ ಮಠದ ಕುಮಾರ ಮಹಾರಾಜರು ಡಾ. ಚಂದ್ರು ಲಮಾಣಿ ಅವರನ್ನು ಶಾಸಕ ಸ್ಥಾನದಿಂದ ಇಳಿಸುವವರೆಗೆ ಹೋರಾಟ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಒಬ್ಬ ಸ್ವಾಮೀಜಿಯಾಗಿ ಈ ರೀತಿ ಹೇಳಿಕೆ ಕೊಡಬಹುದೇ? ನಮ್ಮಲ್ಲಿ ಮಠ ಪರಂಪರೆ ಇಲ್ಲ. ಆ ವ್ಯಕ್ತಿ ತಾನು ಬಂಜಾರ ಸಮಾಜದ ಸ್ವಾಮೀಜಿ ಎಂದು ಅವರೇ ಹೇಳಿಕೊಂಡು ಅಡ್ಡಾಡುತ್ತಿದ್ದಾರೆ. ಜನರು ಆರಿಸಿ ಕಳಿಸಿದ ಜನಪ್ರತಿನಿಧಿ ವಿರುದ್ಧ ದ್ವೇಷ ಕಾರುತ್ತಿದ್ದಾರೆ” ಎಂದು ಕಿಡಿಕಾರಿದರು.

ಪಿಜೆಪಿ ಕಾರ್ಯಕರ್ತ ಶಿವಾನಂದ ಮಾತನಾಡಿ “ಶಾಸಕ ಚಂದ್ರು ಲಮಾಣಿ ಅವರ ತೇಜೋವಧೆ ಮಾಡಲು ದಲಿತ ಶಾಸಕರಿಗೆ ತೊಂದರೆ ಕೊಡಬೇಕು ಅಂತಲೇ ಕೆಲವರು ಷಡ್ಯಂತ್ರ ನಡೆಸಿ ಲೋಕಾಯುಕ್ತ ಬಲೆಗೆ ಸಿಕ್ಕಿಸಿದ್ದಾರೆ” ಎಂದು ದೂರಿದರು. 

ಈ ಪ್ರಕಣದಲ್ಲಿ ಬಂಜಾರ ಸಮುದಾಯ ಸ್ವಾಮೀಜಿ ಕುಮಾರ ಮಹಾರಾಜ ಹಾಗೂ ಬೇರೆ ಪಕ್ಷದ ನಾಯಕರ ಕೈವಾಡವೂ ಇದೆ. ಗುತ್ತಿಗೆದಾರ ವಿಜಯ್ ಪೂಜಾರ ಕಾಮಗಾರಿಗೆ ಡಿಸೆಂಬರ್‌ನಲ್ಲಿ ಪೂಜೆ ಮಾಡಿದ್ದು ಫೆಬ್ರವರಿವರೆಗೂ ಕೆಲಸ ಆರಂಭಿಸಲಿಲ್ಲ. ಕೆಲಸ ವಿಳಂಬ ಆಗಿದ್ದಕ್ಕೆ ಶಾಸಕರು ಪ್ರಶ್ನಿಸಿದ್ದರು. ಅದಕ್ಕೆ ಷಡ್ಯಂತ್ರ ಮಾಡಿ ಲೋಕಾ ಬಲೆಗೆ ಬೀಳಿಸಿದ್ದಾರೆ” ಎಂದು ಆಪಾದಿಸಿದರು.

ಕರ್ನಾಟಕ ಬಂಜಾರ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶಿವಪ್ಪ ನಾಯ್ಕ, ಪದಾಧಿಕಾರಿಗಳು, ಶಾಸಕ ಚಂದ್ರು ಲಮಾಣಿ ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...