ಗದಗ | ಮಕ್ಕಳು ನೋಡಿ ಕಲಿಕೆಯನ್ನು ಅನುಭವವಾಗಿಸಿಕೊಳ್ಳಬೇಕು: ಸಾಹಿತಿ ಯಲ್ಲಪ್ಪ ಹಂದ್ರಾಳ

Date:

“ನೋಡಿದ್ದು ಬಹುಕಾಲ ಉಳಿಯುವುದರಿಂದ ಮಕ್ಕಳು ಪಾಠ ಕೇಳುವುದಲ್ಲ, ನೋಡಿ ಕಲಿಯುವಂತಿರಬೇಕು. ಪ್ರಾತ್ಯಕ್ಷಿಕೆಗಳನ್ನು ನೋಡಿ ಕೇಳಿಸಿಕೊಳ್ಳುತ್ತಿರುವ ಕಥೆ, ಘಟನೆ, ದೃಶ್ಯಗಳನ್ನು ಕಲ್ಪಿಸಿಕೊಳ್ಳುತ್ತಲೇ ಮನೋರಂಗದಲ್ಲಿ ನೋಡಿ ಕಲಿಕೆಯನ್ನು ಅನುಭವವಾಗಿಸಿಕೊಳ್ಳಬೇಕು” ಎಂದು ಡಯಟ್ನ ಉಪನ್ಯಾಸಕ  ಸಾಹಿತಿ ಯಲ್ಲಪ್ಪ ಹಂದ್ರಾಳ ಹೇಳಿದರು.

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ರಾಮೇನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಬೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

“ರಾಮೇನಹಳ್ಳಿ ಶಾಲೆ ಸುಂದರ ಆಕರ್ಷಕ ಕಲಿಕಾ ಪರಿಸರವನ್ನು ಹೊಂದಿದೆ. ಮಕ್ಕಳು ಸ್ವಯಂ ಕಲಿಕೆಯಲ್ಲಿ ತೊಡಗಲು ಪ್ರೇರೇಪಿಸುವಂತಿದೆ. ಶಾಲಾ ಅಭಿವೃದ್ಧಿಯಲ್ಲಿ ಸಮುದಾಯದ ಸಹಭಾಗಿತ್ವ ಚೆನ್ನಾಗಿರುವುದು ಇತರರಿಗೆ ಮಾದರಿಯಾಗಿದೆ. ಮಕ್ಕಳಿಗೆ ಶಾಲಾಶಿಕ್ಷಣದಲ್ಲಿ ಹಿಂದೆಂದಿಗಿಂತಲೂ ಇಂದು ಸಾಕಷ್ಟು ಅವಕಾಶಗಳಿದ್ದು, ಹಲವು ಸೌಲಭ್ಯಗಳಿದ್ದು, ಅವುಗಳನ್ನು ಬಳಸಿಕೊಂಡು ಎಲ್ಲರೂ ಉತ್ತಮ ಶಿಕ್ಷಣ ಪಡೆದು ಬೆಳೆಯಬೇಕು” ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುರಸಭೆಯ ಸದಸ್ಯೆ ಶ್ರೀಮತಿ ದೇವಕ್ಕ ದಂಡಿನ ಸಸಿಗೆ ನೀರೆರೆಯುವ ಮೂಲಕ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿದರು. 

2025-26 ನೇ ಸಾಲಿನ ಕ್ರೀಡಾ ಚಟುವಟಿಕೆ ಉದ್ಘಾಟಿಸಿದ, ಶಾಲಾ ತರಗತಿ ಕೋಣೆಗಳನ್ನು ಕಲಿಕಾಸ್ನೇಹಿ ಚಿತ್ತಾರಗಳೊಂದಿಗೆ ಆಕರ್ಷಕಗೊಳಿಸುವಲ್ಲಿ ಸಹಕರಿಸಿದ ದಾನಿಗಳು ಆನಂದಗೌಡ ಪಾಟೀಲ ಮಾತನಾಡಿ, “ಸರಕಾರಿ ಶಾಲೆಗಳು ಉಳಿದರೆ ಸಾಮಾನ್ಯ ಜನರಿಗೆ ಗುಣಾತ್ಮಕ ಶಿಕ್ಷಣ ಸಿಗುತ್ತದೆ. ಸಮುದಾಯದ ಸಹಕಾರ ಹಾಗೂ ನೆರವಿನಿಂದ ಸರಕಾರಿ ಶಾಲೆಗಳು ಉಳಿದು ಬೆಳೆಯಬಲ್ಲವು” ಎಂದರು.

ಅತಿಥಿಗಳು ತಾಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಹನಮರಡ್ಡಿ ಇಟಗಿ ಮಾತನಾಡಿ, “ಮಕ್ಕಳು ನಿರಂತರ ಉತ್ಸಾಹದಿಂದ ಇದ್ದು ಚಟುವಟಿಕೆಯಿಂದ ತೊಡಗಿಸಿಕೊಂಡರೆ ಕಲಿಕೆ ಯಶಸ್ವಿಯಾಗಿ ಆಗುತ್ತದೆ. ಶಾಲೆಯಲ್ಲಿ ಹಾಗೂ ಮನೆಯಲ್ಲಿ ಮಕ್ಕಳು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು” ಎಂದರು. 

ಬೇಸಿಗೆ ರಜಾ ಅವದಿಯಲ್ಲಿ  ನಾಲ್ಕು ಮತ್ತು ಐದನೇ ತರಗತಿ ಮಕ್ಕಳಿಗೆ ನಡೆದ ಪ್ರವೇಶ ಪರೀಕ್ಷೆಗಳ ಉಚಿತ ತರಬೇತಿಯಲ್ಲಿ ಉತ್ತಮ ಸಾಧನೆ ತೋರಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನಾನು ಸೌಮ್ಯ ವ್ಯಕ್ತಿಯಾಗಿದ್ದರೂ ನನ್ನೊಳಗೆ ಕ್ರಾಂತಿ, ಬಂಡಾಯ ಅಡಗಿತ್ತು: ಕವಿ ಸತೀಶ ಕುಲಕರ್ಣಿ

ಎಸ್.ಡಿ.ಎಂ.ಸಿ ಅಧ್ಯಕ್ಷ ಮಹೇಶ ಬಾಗಳಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಲಿಂಗರಾಜ. ಡಾವಣಗೇರಿ,  ಉಮೇಶರಡ್ಡಿ ಮೇಟಿ, ಎಸ್.ಡಿ. ಎಂ.ಸಿ ಸದಸ್ಯರಾದ ಉಮೇಶ ದಂಡೀನ, ರಾಮಣ್ಣ ತಿಗರಿ, ಪಾಲಕರಾದ ಪರಮೇಶ್ ದಂಡಿನ, ವಿಠಲ ಜಂಬಗಿ, ಬಸವರಾಜ ಅಂಗಡಿ, ಅಶೋಕ ಕೋಳಿ, ಸಂತೋಷ ಚೌಟಗಿ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಡಾ. ನಿಂಗು ಸೊಲಗಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಂ.ಆರ್. ಗುಗ್ಗರಿ ಸ್ವಾಗತಿಸಿದರು. ಬಿ.ಎಚ್. ಹಲವಾಗಲಿ ವಂದಿಸಿದರು. ಪಿ.ಎಂ. ಲಾಂಡೆ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...