ಗದಗ | ಮೆಣಸಿನಕಾಯಿ ಬೆಳೆ ಪರಿಶೀಲನೆ; ತೋಟಗಾರಿಕೆ ಅಧಿಕಾರಿಗಳಿಂದ ರೈತರಿಗೆ ಸಲಹೆ

Date:

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಸುಮಾರು 5,205 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆದಿದ್ದು, ಮಳೆಯ ಅಭಾವ, ಹಸಿಯ ಕೊರತೆಯಿಂದ ಹಲವಾರು ಕೀಟ ಮತ್ತು ರೋಗಗಳು ತಗುಲಿವೆ. ಈ ಹಿನ್ನೆಲೆಯಲ್ಲಿ ರೈತರ ಮೆಣಸಿನಕಾಯಿ ಬೆಳೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಲಕ್ಷ್ಮೇಶ್ವರ ತಾಲೂಕಿನ ಎಳವತ್ತಿ, ಮಾಡಳ್ಳಿ, ಯಳವತ್ತಿ ಗ್ರಾಮಗಳ ಮೆಣಸಿನಕಾಯಿ ಕ್ಷೇತ್ರಗಳಿಗೆ ಭೇಟಿ ಶನಿವಾರ ನೀಡಿ ಪರಿಶೀಲಿಸಿದರು.

ಪ್ರಮುಖ ರಸ ಹೀರುವ ಕೀಟಗಳಾದ ಥ್ರಿಪ್ಸ್ ನುಸಿ, ಸಸ್ಯ ಹೇನು ಕಾಯಿಕೋಶ ಮುಂತಾದವುಗಳು ಪ್ರಮುಖ ರೋಗಗಳಾದ ಎಲೆ ಮುಟುಗು ರೋಗ, ಎಲೆ ಚುಕ್ಕಿ ರೋಗ, ಕಾಯಿ ಕೊರಕ, ಬೇರು ಕೊಳೆ ರೋಗ, ಮುಂತಾದ ರೋಗಗಳು ಕಂಡು ಬಂದವು. ತೀವ್ರ ತರಹದ ತೇವಾಂಶದ ಕೊರತೆ, ಸರಿಯಾದ ವೇಳೆಗೆ ಮಳೆಯಾಗದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೆಣಸಿನಕಾಯಿ ಬೆಳೆದ ರೈತರು ಇವುಗಳ ನಿರ್ವಹಣೆಗಾಗಿ ಮುಂಜಾಗೃತೆ ಕೈಗೊಳ್ಳುವುದು ಅವಶ್ಯಕವಾಗಿದೆ. 3 ಗ್ರಾಂ ಡೈಯಾಮಿಥೋಕ್ಸಾಮ್ (ಅಕ್ಟರಾ), 10 ಗ್ರಾಂ ಪೆಗಾಸಿಸ್, 20 ಮಿ.ಲೀ ಬೇವಿನ ಎಣ್ಣೆಯನ್ನು 10 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸುವುದು. ಒಂದು ವಾರದ ನಂತರ 15 ಮಿ.ಲೀ ಬೆನೆಮಿಯಾ 10 ಗ್ರಾಂ ಸ್ಪೈರೋಮೆಸಿಪಿನ್ (ಓಜಿರಾನ್), 20 ಮಿ.ಲೀ ಬೇವಿನ ಎಣ್ಣೆಯೊಂದಿಗೆ 10 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸುವುದು 4ರಿಂದ 5 ದಿನಗಳ ನಳಿಕ 25 ಮಿ.ಲೀ ಡಿಕೋಫಾಲ್ 10 ಗ್ರಾಂ ಕಾರ್ಬನ್ ಡೈಜಿಂ, 20 ಮಿಲೀ ಬೇವಿನ ಎಣ್ಣೆಯೊಂದಿಗೆ 10 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು” ಎಂದು ರೈತರಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಮರ್ಪಕ ವಿದ್ಯುತ್, ನೀರು ಪೂರೈಕೆ ಮಾಡಿದರೆ ಸರ್ಕಾರವನ್ನು ನಾವೇ ಸಾಕುತ್ತೇವೆ: ರೈತ ಮುಖಂಡ

“ರಸ ಹೀರುವ ಕೀಟಗಳು, ಮುಟುಗು ರೋಗ ಕಂಡು ಬಂದಲ್ಲಿ 3 ಮಿಲೀ ಇಮಿಡಾಕ್ಲೋಪ್ರಿಡ್, 30 ಗ್ರಾಂ ನೀರಿನಲ್ಲಿ ಕರಗುವ ಗಂಧಕ, 20 ಮಿಲೀ ಬೇವಿನ ಎಣ್ಣೆಯಲ್ಲಿ 10 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸುವುದು. ಪೋಷಕಾಂಶಗಳ ಕೊರತೆ ಇರುವುದರಿಂದ ಕೂಡಲೇ 50 ಗ್ರಾಂ ಲಘುಕೋಶಗಳ ಮಿಶ್ರಣ ಅಥವಾ ತರಕಾರಿ ಸ್ಪೇಶಲನ್ನು 10 ಲೀಟರ್ ನೀರಿನಲ್ಲಿ ಬೆರೆಸಿ 2ರಿಂದ 3 ಬಾರಿ, 15 ದಿನಗಳ ನಂತರದಲ್ಲಿ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ” ಎಂದು ಸುರೇಶ ಕುಂಬಾರ ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...