ಗದಗ | ಗುಳೆ ತಪ್ಪಿಸಲು ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ ಪ್ರಾರಂಭ: ವಿ.ಎಸ್ ಸಜ್ಜನ

Date:

ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ. ಅದನ್ನು ತಪ್ಪಿಸಲು ಮನರೇಗಾ ಕಾಯಕ ಬಂಧುಗಳ ಸಹಕಾರ ಬಹಳ ಮುಖ್ಯ. ಪ್ರತಿ ಮನೆಗೆ ಹೋಗಿ ಮನರೇಗಾ ಅಡಿಯಲ್ಲಿ ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ ಪ್ರಾರಂಭವಾಗುತ್ತದೆ ಎಂಬುದನ್ನು ಮನವರಿಕೆ ಮಾಡಿ ಗುಳೆ ತಪ್ಪಿಸಿ ಎಂದು ಜಿಲ್ಲಾ ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕ ವಿ.ಎಸ್ ಸಜ್ಜನ ಹೇಳಿದರು.

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯ ಕಾಯಕ ಬಂಧುಗಳ ಸಭೆ ಜರುಗಿಸಿದ ಬಳಿಕ ಮತದಾನ ಪ್ರತಿಜ್ಞಾವಿಧಿ ಭೋದಿಸಲಾಯಿತು.

ನಂತರ ಜಿಲ್ಲಾ ಮಾಹಿತಿ ಶಿಕ್ಷಣ & ಸಂವಹನ ಸಂಯೋಜಕ ವಿ.ಎಸ್. ಸಜ್ಜನ ಗ್ರಾಮ ಪಂಚಾಯತಿಯಲ್ಲಿ ʼವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿʼ ಅಭಿಯಾನದಡಿ ಕಾಯಕ ಬಂಧುಗಳ, ಸ್ವಸಹಾಯ ಸಂಘಗಳ ಸದಸ್ಯರ ಕೂಲಿಕಾರರ ಸಭೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮಾತನಾಡಿದ ಅವರು, ಎಪ್ರಿಲ್  1ರಿಂದ ನಿಮ್ಮ ಗ್ರಾಮದಲ್ಲಿ ಸಮುದಾಯ ಕಾಮಗಾರಿ ಪ್ರಾರಂಭಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಎಲ್ಲಾ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಜಿ.ಪಂ ಸಿಇo ಅವರು ತಿಳಿಸಿದ್ದಾರೆ. ಹಾಗಾಗಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೆಲಸ ಪ್ರಾರಂಭವಾಗುತ್ತದೆ.

ಕಾಯಕ ಬಂಧುಗಳಾದ ತಾವೆಲ್ಲರೂ ಕೂಲಿಕಾರರ  ಆರ್ಥಿಕ ಸಬಲತೆಗಾಗಿ ದುಡಿಯಬೇಕು. ಬಂಧು ಅಂದರೆ ಜನರಿಗೆ ಹತ್ತಿರ ಇದ್ದವರು ಅಂತಾ ಅರ್ಥ ಹಾಗಾಗಿ ದುಡಿಯುವ ವರ್ಗಕ್ಕೆ ಹತ್ತಿರ ಇರುವ ತಮಗೆ ಕಾಯಕ ಬಂಧುಗಳು ಎನ್ನಲಾಗುತ್ತದೆ. ಕೆಲಸದ ಸ್ಥಳದಲ್ಲಿ ನೀರು, ನೆರಳು ಸೇರಿದಂತೆ ಮಕ್ಕಳಿಗಾಗಿಯೇ ಗ್ರಾಮದಲ್ಲಿ ಕೂಸಿನ ಮನೆ ಸಹ ತೆರಯಲಾಗಿದ್ದು ಪಾಲಕರು ಮಕ್ಕಳನ್ನು ಅಲ್ಲಿ ಬಿಟ್ಟು ಹೋಗಬೇಕು ಅದನ್ನು ನೀವು ಜನರಿಗೆ ತಿಳಿಸಬೇಕು ಎಂದರು. ಮುಖ್ಯವಾಗಿ ಕೆಲಸಕ್ಕೆ ಬಂದವರಿಗೆ ಅಳತೆ ತಕ್ಕ ಹಾಗೆ ಕಡೆಯುವದು ಕಡ್ಡಾಯ, ಒಬ್ಬರಿಗೆ ಒಂದು ಅಳತೆ ಮತ್ತೊಬ್ಬರಿಗೆ ಒಂದು ಅಳತೆ ಹೀಗೆ ತಾರತಮ್ಯ ಮಾಡದ ಹಾಗೆ ಕೆಲಸ ಮಾಡುವದು ತಮ್ಮ ಕರ್ತವ್ಯ ದಯವಿಟ್ಟು ಪಾಲಿಸಿ ಅಂತಾ ಮನವಿ ಮಾಡಿದರು.

ಕೊನೆಯಲ್ಲಿ ಕಡ್ಡಾಯವಾಗಿ ಈಬಾರಿ ಗ್ರಾಮ ಪಂಚಾಯತಿ ಯಿಂದ ನೊಂದಾಯಿಸಲ್ಪಟ್ಟ ಕುಟುಂಬ ಗಳಲ್ಲಿ  ನರೇಗಾ ಯೋಜನೆಯಡಿ ಸಕ್ರಿಯವಲ್ಲದ ಇರುವವರನ್ನು ಗುರುತಿಸಿ ಸದರಿಯವರನ್ನು ಪಾಲ್ಗೊಳ್ಳುವಂತೆ ಮಾಡಲು ಮನೆ ಮನೆಗೆ ತೆರಳಿ ಯೋಜನೆಯಡಿ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಶೃಂಗೇರಿ, ತಾಲೂಕ ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕ ಮಂಜುನಾಥ, ಬಿಎಫ್‌ಟಿ ಈರಣ್ಣ ಬೆಲೇರಿ, ಜಿಕೆಎಮ್ ಚಾಂದಬಿ ಕರ್ನಾಚಿ ಗ್ರಾಮ ಪಂಚಾಯತಿ ಸದಸ್ಯರು, DIEC, IEC, BFT, GKM ಸೇರಿದಂತೆ ಕಾಯಕ ಬಂಧುಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...