ಗದಗ | ದಲಿತ ಮುಖಂಡರ ವಿರುದ್ಧ ದೂರು ದಾಖಲು; ಹಿಂಪಡೆಯುವಂತೆ ದಸಂಸ ಆಗ್ರಹ

Date:

ದಲಿತ ಮುಖಂಡರ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಗದಗ ಜಿಲ್ಲಾ ಘಟಕವು ಜಿಲ್ಲಾಧಿಕಾರಿ‌ಗೆ ಮನವಿ ಸಲ್ಲಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ ವಾದ) ಗದಗ ಜಿಲ್ಲಾ ಘಟಕ ಪ್ರಧಾನ ಸಂಚಾಲಕ ಬಾಲರಾಜ ಅರಬರ ಮಾತನಾಡಿ, “ದಂಡ ಪ್ರಕ್ರಿಯೆ ಸಂಹಿತೆ ಕಲಂ 107ನ್ನು ಗದಗ ಶಹರ ಸಿಪಿಐ ಹಾಗೂ ಪಿಎಸ್‌ಐ ಇವರುಗಳು ದಲಿತ ಮುಖಂಡರುಗಳ ವಿರುದ್ಧ ಜೂನ್‌ 15ರಂದು ದೂರು ದಾಖಲಿಸಿ ದಲಿತ ದೌರ್ಜನ್ಯ ಎಸಗಿದ್ದಾರೆ. ಕಾರಣ ತೋಂಟದಾರ್ಯ ಮಠ ಗದಗ ಈ ಮಠದ ಜಾಗದಲ್ಲಿ ಟೆಂಡ‌ರ್ ಮುಖಾಂತರ ವ್ಯಾಪಾರಸ್ಥರಿಗೆ ಸ್ಥಳವನ್ನು ಒದಗಿಸಿದ್ದಾರೆ” ಎಂದು ಆರೋಪಿಸಿದರು.

“ದಲಿತ ಮುಖಂಡರು ಸೇರಿ ಮಳೆ ಬಂದು ವ್ಯಾಪಾರಸ್ಥರಿಗೆ ತೊಂದರೆಯಾಗಿ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದಾರೆ. ವ್ಯಾಪಾರಸ್ಥರಲ್ಲಿ ಅನೇಕ ದಲಿತ ಕುಟುಂಬಸ್ಥರು. ಅಲ್ಪಸಂಖ್ಯಾತ ಹಾಗೂ ಕಡುಬಡವರು ಇರುವುದರಿಂದ ದಲಿತ ಮುಖಂಡರು ಅವರ ನಷ್ಟದ ಕುರಿತು ಇನ್ನೂ ನಾಲ್ಕು ದಿನ ವ್ಯಾಪಾರ ಮಾಡಲು ಮಂಡಳಿಯವರಿಗೂ ಹಾಗೂ ಪೊಲೀಸ್‌ ಇಲಾಖೆಯವರಿಗೂ ನಮ್ರತೆಯಿಂದ ವಿನಂತಿಸಿಕೊಂಡಿದ್ದಾರೆ. ಇದೇ ಕಾರಣ ಇಟ್ಟುಕೊಂಡು ಪೊಲೀಸ್ ಇಲಾಖೆಯವರು ದಲಿತರ ವಿರುದ್ಧ ದೂರು ದಾಖಲಿಸಿ ಒತ್ತಾಯಪೂರ್ವಕವಾಗಿ ಪೊಲೀಸ್‌ ನೋಟಿಸ್‌ಗೆ ಸಹಿಗಳನ್ನು ಮಾಡಿಸಿಕೊಂಡಿದ್ದಾರೆ  ಮತ್ತು ದಲಿತ ಚಳುವಳಿಯನ್ನು ಮೊಟಕುಗೊಳಿಸಿ ದಲಿತ ಮುಖಂಡರು ಯಾವುದೇ ರೀತಿ ಅನ್ಯಾಯದ ವಿರುದ್ಧ ಧ್ವನಿ ಎತ್ತದಂತೆ ಹುನ್ನಾರ ನಡೆಸಿದ್ದಾರೆ ಹಾಗೂ ಕೋಮುವಾದಿ ಸಂಘಟನೆಗಳೊಂದಿಗೆ ದಲಿತರಿಗೆ, ಅಲ್ಪಸಂಖ್ಯಾತರಿಗೆ, ಬಡವರಿಗೆ ಅನ್ಯಾಯ ಮಾಡಿ. ಪೊಲೀಸ್‌ ಇಲಾಖೆಯವರು ದಲಿತರ ಮೇಲೆ ಪದೇಪದೆ ದೌರ್ಜನ್ಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪೆಟ್ರೋಲ್ ಡಿಸೇಲ್ ದರ ಹೆಚ್ಚಳ; ದರ ಇಳಿಕೆಗೆ ಡಿವೈಎಫ್‌ಐ ಆಗ್ರಹ

ಪೊಲೀಸ್‌ ಇಲಾಖೆಯೇ ದಲಿತ ಮುಖಂಡರ ವಿರುದ್ಧ ದಾಖಲಿಸಿದ ದೂರನ್ನು ಹಿಂಪಡೆಯಬೇಕು. ಒಂದು ವೇಳೆ ಹಿಂಪಡೆಯದೇ ಇದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತ ಹಾಗೂ ಅಲ್ಪಸಂಖ್ಯಾತರ ಸಂಘಟನೆಯ ಮುಖಾಂತರವಾಗಿ ಹೋರಾಟ ಮಾಡುತ್ತೇವೆ” ಎಂದು ಗದಗ ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದಾರೆ.

ಈ ಸಂದರ್ಭದಲ್ಲಿ ವಿಜಯ ಕಲ್ಮನಿ, ಗಣೇಶ ಹುಬ್ಬಳ್ಳಿ, ನಾರಾಯಣ ದೊಡ್ಡಮನಿ ಸೇರಿದಂತೆ ಇನ್ನೂ ಮುಂತಾದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...