ಕನ್ನಡ ಪರ ಅಭಿವೃದ್ಧಿ ಕಾರ್ಯಗಳಿಗೆ ಕರ್ನಾಟಕ ಸರ್ಕಾರದಿಂದ ಕನ್ನಡ ಜಾಗೃತಿ ಸಮಿತಿ ಜಿಲ್ಲಾ ಮಟ್ಟದ ಸಮಿತಿಗಳನ್ನು ಆಯ್ಕೆ ಮಾಡಲಾಗಿದೆ.
ಗದಗ ಜಿಲ್ಲೆಯಲ್ಲಿ ಒಟ್ಟು ಐದು ಜನರನ್ನು ಕನ್ನಡ ಜಾಗೃತಿ ಸಮಿತಿಗೆ ಆಯ್ಕೆ ಮಾಡಲಾಗಿದೆ. ಹಿರಿಯರು. ಬಸವ ಅನುಯಾಯಿಗಳು ಹಾಗೂ ಅಶೋಕ ನಿವೃತ್ತ ಇಂಜಿನಿಯರರಾದ ಬರಗುಂಡಿ, ಯುವ ಹೋರಾಟಗಾರ ಮುತ್ತು ಬೆಳೆಯಲಿ, ಪಿ.ಪಿ.ಜಿ ಕಲಾ ಕಾಲೇಜಿನ ಪಾಚಾರ್ಯ ರಾಜಶೇಖರ ದಾನರಡ್ಡಿ, ಸಾಮಾಜಿಕ ಹೋರಾಟಗಾರ ಮುತ್ತಣ್ಣ ಹಾಳಕೇರಿ ಮುಂಡರಗಿ, ಮಹಿಳಾ ಹೋರಾಟಗಾರ್ತಿ ಲಾಡಮಾ ನದಾಫ್ ಗದಗ ಇವರನ್ನು ಆಯ್ಕೆ ಮಾಡಿರುವ ಸರ್ಕಾರಕ್ಕೆ ಹಾಗೂ ಸಮಿತಿಯ ಎಲ್ಲ ಸದಸ್ಯರಿಗೆ ಆನಂದ ಶಿಂಗಾಡಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕುವೆಂಪು ಭಾಷಣ | ಕನ್ನಡ ನಾಡಿನ ರಾಜಧಾನಿಯಲ್ಲಿ ಕನ್ನಡವೇ ಸಾರ್ವಭೌಮ ಭಾಷೆ
ಕನ್ನಡ ಉಳಿವಿಗಾಗಿ, ಕನ್ನಡದ ಅಭಿವೃದ್ಧಿಗಾಗಿ ಸಮಿತಿಯ ಸದಸ್ಯರು ತಮ್ಮ ಸೇವೆಯನ್ನು ಮುಡಿಪಾಗಿಡಲಿ ಎಂದು ಗದಗ ಜಿಲ್ಲಾ ಛಲವಾದಿ ಮಹಾಸಭಾ ಆಶಿಸಿದೆ.





