ಗದಗ | ನಿರಂತರ ಪ್ರಕಾಶನ ಮುಡಿಗೆ ರಾಜ್ಯಮಟ್ಟದ ಪ್ರಕಾಶಕ ಪ್ರಶಸ್ತಿ ಗರಿ

Date:

ಕಳೆದ ಎರಡೂ ವರೆ ದಶಕಗಳಿಂದ ಪುಸ್ತಕ ಪ್ರಕಾಶನ ಸಂಸ್ಥೆಯಲ್ಲಿ ತನ್ನದೇ ಆದ ಹಿರಿಮೆಗಳಿಸಿ ಮೌಲಿಕ ಕೃತಿಗಳನ್ನು  ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಿಸಿ ಅಕ್ಷರ ಸಂಸ್ಕೃತಿ ಉಳಿಸಿ, ಪುಸ್ತಕ ಸಂಸ್ಕೃತಿ ಬೆಳೆಸಲು ಪಣ ತೊಟ್ಟಿರುವ ಗದಗಿನ ನಿರಂತರ ಪ್ರಕಾಶನದ ಪ್ರಕಾಶಕ, ಹಿರಿಯ ಸಾಹಿತಿ ಎ.ಎಸ್. ಮಕಾನದಾರ ಅವರು ರಾಜ್ಯಮಟ್ಟದ ಪ್ರಕಾಶನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಫೆಬ್ರವರಿ 7-8ರಂದು ಎರಡು ದಿನಗಳ ಕಾಲ ಬೀದರ್ ಜಿಲ್ಲೆಯ ಬೇಲೂರಿನ ಶರಣ ಉರಿಲಿಂಗ ಪೆದ್ದಿ, ಶರಣೆ ಕಾಳವ್ವೆ ಉತ್ಸವ, ಲಿಂಗೈಕ್ಯ  ಶಿವಲಿಂಗೇಶ್ವರ ಶಿವಯೋಗಿಗಳ 57 ಪುಣ್ಯ ಸ್ಮರಣೆ ನಿಮಿತ್ಯ ಉರಿಲಿಂಗ ಪೆದ್ದಿ ಮಠದಲ್ಲಿ ಕರ್ನಾಟಕ ರಾಜ್ಯ ಮಟ್ಟದ ಪ್ರಥಮ ಪ್ರಕಾಶಕರ ಸಮ್ಮೇಳನದಲ್ಲಿ ಸಮಗ್ರ ಯೋಜನೆ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ ಸತೀಶ್ ಹೊಸಮನಿ ಯವರು ಪ್ರಶಸ್ತಿ ಪ್ರದಾನ ಮಾಡುವರು.

ಪುಸ್ತಕೋದ್ಯಮಿ ಬಸವರಾಜ್ ಜಿ ಕೊನೆಕ್ ಸಮ್ಮೇಳನ ದ ಸರ್ವಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಶರಣು ಸಲಗರ ಸಮಾರಂಭದ ಅಧ್ಯಕ್ಷತೆ  ವಹಿಸುವರು. ಲೋಕಸಭಾ ಸದಸ್ಯ ಸಾಗರ ಖಂಡ್ರೆ ಪುಸ್ತಕ ವ್ಯಾಪಾರಿ ಮತ್ತು ಪ್ರಕಾಶಕರ ಸಂಘದ ಜಿಯಾ ಉದ್ದಿತ್ ಮುಖ್ಯ ಅತಿಥಿ ಗಳಾಗಿ ಪಾಲ್ಗೊಳ್ಳ ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉರಿಲಿಂಗ ಪೆದ್ದಿ ಸಂಸ್ಥಾನ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಸಾನಿಧ್ಯ ವಹಿಸುವರು. ಖ್ಯಾತ ಕವಿ ಡಾ ರಾಜಶೇಖರ್ ಮಠಪತಿ ಇವರಿಂದ ಸಮಾರೋಪ ನುಡಿ ನಡೆಯಲಿದೆ.

ಇದೇ ಸಂದರ್ಭದಲ್ಲಿ ನಿರಂತರ ಪ್ರಕಾಶನ ದ ಜೊತೆಗೆ ವಿದ್ಯಾನಿಧಿ ಪ್ರಕಾಶನ, ಅಭಿನವ ಪ್ರಕಾಶನ, ಶಾರದಾ ಪ್ರಕಾಶನ, ಅಮರ ಪ್ರಕಾಶನ ಶಿರಪುರ ಪ್ರಕಾಶನ, ಧರಿನಾಡು ಪ್ರಕಾಶನ, ಪೂಜಾ ಪ್ರಕಾಶನ ಸಂಸ್ಥೆ ಗಳ ಪ್ರಕಾಶಕರೂ ಪ್ರಕಾಶನ ಪ್ರಶಸ್ತಿ ಸ್ವೀಕರಿಸಲಿದ್ದಾರೆ 

ನಿರಂತರ ಪ್ರಕಾಶನ ಪ್ರಕಟಿಸಿದ  ವಿವಿಧ ಲೇಖಕರ  ಪುಸ್ತಕಗಳು ನಾಡಿನ ಹಲವು ದತ್ತಿ ಪ್ರಶಸ್ತಿ ಮತ್ತು ಪುರಸ್ಕಾರಗಳು ಲಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...