ಗದಗ | ಸಮಾಜವನ್ನು ವ್ಯಸನಮುಕ್ತ ಮಾಡುವಲ್ಲಿ ಶಿವಯೋಗಿಗಳ ಕೊಡುಗೆ ಅಪಾರ: ರಾಘವೇಂದ್ರ ಪಾಟೀಲ

Date:

ವ್ಯಸನ ಮುಕ್ತ ಸಮಾಜವನ್ನು ದುಶ್ಚಟಗಳು ಮತ್ತು ವ್ಯಸನ ಮುಕ್ತವಾಗಿಸುವಲ್ಲಿ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರವಾಗಿದೆ. ಅವರು ಜೋಳಿಗೆ ಹಿಡಿದುಕೊಂಡು ಬಿಕ್ಷೆ ಬೇಡುತ್ತಿದ್ದರು. ಕೆಟ್ಟ ಹವ್ಯಾಸ, ಕೆಟ್ಟ ಚಟಗಳನ್ನು ಜೋಳಿಗೆಯಲ್ಲಿ ಹಾಕಿ ನಂತರ ಅವುಗಳನ್ನು ತ್ಯಜಿಸಬೇಕೆಂದು ಸಾರ್ವಜನಿಕರಿಗೆ ತಿಳುವಳಿಕೆ ನೀಡುತ್ತಾ ಬಹಳ ಶ್ರಮಿಸಿದ್ದಾರೆ ಎಂದು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ರಾಘವೇಂದ್ರ ಪಾಟೀಲ ಹೇಳಿದ್ದಾರೆ.

ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಗದಗ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ರಾಜ್ಯ ಸರ್ಕಾರ ಪ್ರತಿ ವರ್ಷ ಅಗಸ್ಟ 1 ರಂದು ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ‘ವ್ಯಸನ ಮುಕ್ತ ದಿನಾಚರಣೆ’ ಆಚರಿಸುವ ಮೂಲಕ ವ್ಯಸನದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ” ಎಂದು ತಿಳಿಸಿದರು.

“ಇಂದಿನ ಯುವಶಕ್ತಿ ದುಶ್ಚಟಗಳ ವ್ಯಸನಕ್ಕೆ ಒಳಗಾಗಿ ಸಾಮಾಜಿಕ ಜವಾಬ್ದಾರಿ ಪೂರೈಸುವಲ್ಲಿ ವಿಫಲರಾಗುತ್ತಿದ್ದಾರೆ. ತಂಬಾಕು, ಅಲ್ಕೋಹಾಲ್, ಹೆರಾಯಿನ್, ಗಾಂಜಾ, ಅಫೀಮು, ಚರಸ್ ಮುಂತಾದ ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮಕ್ಕೆ ಕಾರಣವಾಗುತ್ತದೆ. ಇದರ ಅತಿಯಾದ ಸೇವನೆಯಿಂದ ಅಥವಾ ಬಳಕೆಯಿಂದ ವ್ಯಕ್ತಿಯು ವ್ಯಸನಕ್ಕೆ ಒಳಗಾಗಿ ತನ್ನ ದೈನಂದಿನ ಕರ್ತವ್ಯಗಳನ್ನು ಮರೆತು ಕಳ್ಳತನ, ಮೋಸ, ವಂಚನೆಗಳನ್ನು ಮಾಡಿ ಮಾದಕ ವಸ್ತುಗಳ ದಾಸನಾಗುತ್ತಾನೆ. ಇದರಿಂದ ವ್ಯಕ್ತಿಯ ಮೆದುಳಿನ ಸವಕಳಿ, ನರದೌರ್ಬಲ್ಯ ಉಂಟಾಗುತ್ತದೆ. ದೂಮಪಾನ ಮಾಡುವುದರಿಂದ ವ್ಯಕ್ತಿಯ ಸುತ್ತಮುತ್ತಲನವರಿಗೂ ಸಹ ದೈಹಿಕ ದುಷ್ಪರಿಣಾಮ ಉಂಟಾಗುತ್ತದೆ. ಪಾಲಕರು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾದರೆ ಮಕ್ಕಳೂ ಸಹ ವ್ಯಸನಕ್ಕೆ ಒಳಗಾಗುವ ಸಾಧ್ಯತೆಗಳಿರುತ್ತವೆ ಹಾಗೂ ವ್ಯಕ್ತಿಗಳು ಹಲವಾರು ತಪ್ಪು ತಿಳುವಳಿಕೆಯಿಂದ ಮಾದಕ ವಸ್ತುಗಳ ವ್ಯಸನಿಗಳಾಗುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ದೇಶದಲ್ಲಿ 26 ಕೋಟಿ ಜನ ತಂಬಾಕು ಸೇವನೆ ಮಾಡುತ್ತಿದ್ದಾರೆ. 16 ಕೋಟಿ ಜನ ಮದ್ಯ ವ್ಯಸನಿಯಾಗಿದ್ದಾರೆ. 3 ಕೋಟಿ ಜನ ಗಾಂಜಾ ಉಪಯೋಗಿಸುತ್ತಿದ್ದಾರೆ. 51 ಲಕ್ಷ ಜನರು ಮಾದಕ ದ್ರವ್ಯ ವಸ್ತು ಉಪಯೋಗಿಸುತ್ತಿದ್ದಾರೆ. ಆ ಪೈಕಿ 26 ಲಕ್ಷ ಜನ ಮಕ್ಕಳು ವ್ಯಸನಕ್ಕೆ ಒಳಗಾಗಿದ್ದಾರೆ. ತಂಬಾಕು ಸೇವನೆಯಿಂದ ಶೇಕಡ 90 ರಷ್ಟು ಕ್ಯಾನ್ಸರ್ ಬರುವ ಸಂಭವವಿರುತ್ತದೆ. ವ್ಯಸನಿಗಳ ಚಿಕಿತ್ಸೆಗಾಗಿ ಪ್ರತಿ ವರ್ಷ ದೇಶದಲ್ಲಿ 2 ಸಾವಿರ ಬಿಲಿಯನನ್ನಷ್ಟು ಖರ್ಚು ಮಾಡಲಾಗುತ್ತಿದೆ. ವಿಶ್ವದಲ್ಲಿನ ಮಾದಕ ವಸ್ತುಗಳ ವ್ಯಸನಿಗಳ ಪೈಕಿ ಶೇ 17 ರಷ್ಟು ಭಾರತದಲ್ಲಿದ್ದಾರೆ. ಮಾದಕ ವ್ಯಸನಿಗಳು ವೈದ್ಯರ ಸಲಹೆಯೊಂದಿಗೆ ಸೂಕ್ತ ಚಿಕಿತ್ಸೆ ಪಡೆದರೆ ವ್ಯಸನತೆಯಿಂದ ಹೊರಬರಬಹುದಾಗಿದೆ. ಭಾರತ ಸರ್ಕಾರದ ಟೆಲಿಮಾನಸ ಕಾರ್ಯಕ್ರಮದಲ್ಲಿ ಆನ್‌ಲೈನ್ ಮುಖಾಂತರ ಭಾಗವಹಿಸಿ ವ್ಯಸನ ಮುಕ್ತತೆಗಾಗಿ ವೈದ್ಯರ ಸಲಹೆಗಳನ್ನು ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ವ್ಯಸನ ಮುಕ್ತತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ ನುಚ್ಚಿನ್, ಆರ್.ಸಿ.ಎಚ್. ಅಧಿಕಾರಿ ಡಾ.ಬಿ.ಎಂ.ಗೊಜನೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ. ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳಿ, ಡಿಡಿಪಿಐ ಜಿ.ಎಲ್.ಬಾರಾಟಕ್ಕೆ,ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಹುಲಗಣ್ಣವರ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಶಿವಾನಂದ ಗಿಡ್ನಂದಿ ಕಾರ್ಯಕ್ರಮ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...