ಗದಗ | ಮೌಢ್ಯತೆ ಆಚರಿಸುವ ದೇಶಗಳ ಅಭಿವೃದ್ಧಿ ಸಾಧ್ಯವಿಲ್ಲ: ಡಾ. ಜಯದೇವಿ ಗಾಯಕವಾಡ

Date:

ಯಾವ ದೇಶದಲ್ಲಿ ಮೌಢ್ಯ ಸಂಪ್ರದಾಯಗಳ ಆಚರಣೆ ಇರುತ್ತವೆಯೋ, ಅಂತಹ ದೇಶಗಳ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ. ಜಯದೇವಿ ಗಾಯಕವಾಡ ಹೇಳಿದರು.

ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ ಹಾಗೂ ಗದಗ ನಗರದ ಡಾ. ಎಂ ಎಂ ಕಲಬುರ್ಗಿ ಸಂಶೋಧನ ಕೇಂದ್ರ ಸಹಯೋಗದೊಂದಿಗೆ ತೋಂಟದಾರ್ಯ ಮಠದಲ್ಲಿ ಹಮ್ಮಿಕೊಂಡಿದ್ದ ದಸಾಪ ಪಯಣ 30ನೇ ವರ್ಷದ ಪ್ರಯುಕ್ತ ಪುಸ್ತಕ ಬಿಡುಗಡೆ ಹಾಗೂ ಕಾವ್ಯಯಾನ-1 ಕಾರ್ಯಕ್ರಮದಲ್ಲಿ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

“ಮೌಢ್ಯ ಸಂಪ್ರದಾಯಗಳನ್ನು ಕಡೆಗಣಿಸಿ, ವಿಜ್ಞಾನವನ್ನು ಅನುಸರಿಸಿದರೆ ಮಾತ್ರ ದೇಶ ಮುಂದುವರೆಯುತ್ತದೆ. ಯಾವ ದೇಶಗಳಲ್ಲಿ‌ ಮೌಢ್ಯಾಚರಣೆ ಆಚರಿಸಲಾಗುತ್ತಿಯೋ ಆ ದೇಶಗಳು ಮುಂದುವರೆಯಲು ಸಾಧ್ಯವಿಲ್ಲ. ಸಮಾಜ ಎದುರಿಸುತ್ತಿರುವ ತಳಮಳಗಳ ಕುರಿತು ಸಾಹಿತ್ಯ ಹುಟ್ಟಬೇಕು. ಬೇಂದ್ರೆ, ಕುವೆಂಪು ಸೇರಿದಂತೆ ಇನ್ನೂ ಅನೇಕರು ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದ್ದರು. ಬುದ್ಧ, ಬಸವ, ಅಂಬೇಡ್ಕರ್ ಚಿಂತನೆಗಳು ಇಂದಿನ ಯುವಕರ ಮೇಲೆ ಪ್ರಭಾವಿಸಬೇಕಿದೆ. 12ನೇ ಶತಮಾನದಲ್ಲಿ ಸಾಹಿತ್ಯ ಮತ್ತು ಚಳವಳಿ ಒಂದೇಯಾಗಿ ಜಾರಿಯಲ್ಲಿದ್ದವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಮರ್ಶಕ ಡಾ. ಎಚ್ ಬಿ ಕೋಲ್ಕಾರ ಮಾತನಾಡಿ, “ಪ್ರಗತಿಶೀಲ ಸಂದರ್ಭದಲ್ಲಿ ವಾಸ್ತವವನ್ನು ತಲೆಬರಹಗಳಲ್ಲಿ ಕಟ್ಟಿರುವುದನ್ನು ನೋಡಿದ್ದೇವೆ. ಹಾಗೆ ಕವಿಯ “ಇರುಳ ಬಾಗಿಲಿಗೆ ಕಣ್ಣದೀಪ” ಕವನ ಸಂಕಲನ ಇದೆ. ಇಲ್ಲಿ ಬದುಕಿನ ಶೈಲಿಗೆ, ತೀವ್ರತೆ ಕೊಡುವಲ್ಲಿ ಕವಿ ಅರಿವಿನಿಂದ ಪದಗಳಲ್ಲಿ ಕಟ್ಟುತ್ತಾನೆ. ಆದ್ಯಾತ್ಮಿಕ ಬದುಕನ್ನು ಲೌಕಿಕವಾಗಿ ಕವಿತೆಗಳಲ್ಲಿ ಕವಿ ಹೇಳುತ್ತಾನೆ. “ಎದೆಯಾಗಿನ ಮಾತು” ಕೃತಿಯು ಪ್ರೀತಿ ಪ್ರೇಮ, ವಿರಹಗಳೇ ಶಾಹಿರಿಗಳಾಗಿವೆ. ಓದುತ್ತಾ ಹೋದಂತೆ ಮನಸ್ಸಿಗೆ ಉಲ್ಲಾಸ ನೀಡುತ್ತವೆ” ಎಂದರು.

ಇದನ್ನು ಓದಿದ್ದೀರಾ? ಗದಗ | ಗೋವಿಂದ ಪೈ ಜಯಂತಿ ಸರ್ಕಾರದಿಂದ ಆಚರಿಸಲು ಮನೋಹರ್ ಮೆರವಾಡೆ ಒತ್ತಾಯ

ದಲಿತ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ಡಾ. ಅರ್ಜುನ ಗೋಳಸಂಗಿ ಅವರು ಅಧ್ಯಕ್ಷಿಯ ಮಾತುಗಳನ್ನಾಡಿದರು. ಡಾ. ಗವಿಸಿದ್ದಪ್ಪ ಪಾಟೀಲ, ಎಂ ಸಿ ಕಟ್ಟಿಮನಿ, ಕೃತಿಕರರಾದ ಡಾ. ಸದಾಶಿವ ದೊಡಮನಿ ಹಾಗೂ ಮರುಳುಸಿದ್ಧಪ್ಪ ದೊಡಮನಿ ಗೌರವ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...