ಗದಗ | ನ್ಯಾಯಾಲಯ ಐತಿಹಾಸಿಕ ತೀರ್ಪು ಸ್ವಾಗತ : ಹಣಮಂತ ಮಾದರ

Date:

“ರಾಜ್ಯದಲ್ಲಿ ಇರುವ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೆ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಕಾರ್ಮಿಕರು ವಿದ್ಯಾರ್ಥಿಗಳು ಈ ತೀರ್ಪುನ್ನು ಸ್ವಾಗತಿಸುತ್ತೇವೆ” ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರೋಣ ತಾಲೂಕು ಸಂಚಾಲಕರಾದ ಹಣಮಂತ ಮಾದರ ಹೇಳಿದರು.

ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೇಡರೇಷನ್  ವತಿಯಿಂದ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೆ ಬಿಡುಗಡೆ ಮಾಡಿ ಎಂಬ ತೀರ್ಪುನ್ನು ಸ್ವಾಗತಿಸಿ ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ವಿಜಯೋತ್ಸವ ಆಚರಿಸಿ ಮಾತನಾಡಿದರು.

“ಈ ಗೆಲುವಿಗೆ ಕಾರಣರಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಮಹಾಂತೇಶ್ ಕೆ ಅವರಿಗೆ ಮತ್ತು ರಾಜ್ಯ ಅಧ್ಯಕ್ಷರು ಕಾಮ್ರೆಡ್ ಬಾಲಕೃಷ್ಣ ಶೆಟ್ಟಿ ಅವರಿಗೆ ಹಾಗೂ ವಕೀಲರಾದ ಅಕ್ಷಿತಾ ಗೋಯಲ್ ಮತ್ತು ಆದಿತ್ಯ ಚಟರ್ಜಿ ಅವರಿಗೆ ಸಲ್ಲುತ್ತದೆ. ಕಾರ್ಮಿಕರು, ವಿದ್ಯಾರ್ಥಿಗಳು ರೋಣ ತಾಲೂಕ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸುವು ಮೂಲಕ ಕರ್ನಾಟಕ ರಾಜ್ಯ ಹೈಕೋರ್ಟ್ ಐತಿಹಾಸಿಕ ತೀರ್ಪನ್ನು ಸ್ವಾಗತ ಮಾಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ಸಂಕಪ್ಪ ಕುರಹಟ್ಟಿ ಅವರು ಮಾತನಾಡಿ, 2021 ರಿಂದ 2023 ರ ವರೆಗೆ ಬಾಕಿ ಇರುವ ಕಾರ್ಮಿಕ ಮಕ್ಕಳ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಆದಷ್ಟು ಬೇಗನೆ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ ಕಾರ್ಮಿಕರಿಗೆ ವಂಚನೆ ಮಾಡಿದೆ ಶೈಕ್ಷಣಿಕ ಸಹಾಯಧನ ನೀಡದೆ ಸತಾಯಿಸುತ್ತಿದ್ದಾರೆ. ಇದನ್ನು ವಿರೋಧಿಸಿ ನ್ಯಾಯಾಲಯದ ಮೊರೆ ಹೋಗಿ ದಾವೆಯನ್ನು ಹೂಡಿ ಇವತ್ತು ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿದೆ. ಅದಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಸ್ವಾಗತಿಸುತ್ತದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬೀದಿಬದಿ ವ್ಯಾಪಾರಸ್ಥರ ಸಭೆ; ಸ್ಥಳೀಯ ವ್ಯಾಪಾರಿಗಳ ರಕ್ಷಣೆಗೆ ಆಗ್ರಹ

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರು ಹನಮಂತ ತಾಳಿ,ಚಾಂದಸಾಬ್ ಕೌಜಗೇರಿ , ಮುಸ್ತಾಕ್ ಯಲಿಗಾರ, ಪ್ರವೀಣ್ ದಾನಿ, ಖಾಜೇಸಾಬ್ ಮುಲ್ಲಾ , ಹುಸೇನ್ ಸಾಬ್ ಮುಲ್ಲಾ, ಶೇಖಪ್ಪ ಬಡಿಗೇರ್, ಮಂಜುನಾಥ ಮಾದರ, ಷಣ್ಮುಖ ಕುರಿ, ಮಹಾಲಿಂಗಪ್ಪ ಬಡಿಗೇರ್ , ಬೆಳ್ಳಪ್ಪ ಕಿರಟಗೇರಿ , ದ್ಯಾಮಣ್ಣ ಬಡಿಗೇರ್, ಮಮ್ಮದಸಾಬ್ ಮುಲ್ಲಾ, ವಿಜಯ ಕಮ್ಮಾರ್,ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...