ಗದಗ | ಜಿಲ್ಲೆಯಲ್ಲಿ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿ; 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ : ಸಚಿವ ಎಚ್ ಕೆ ಪಾಟೀಲ

Date:

ಗದಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರ ಕುರಿತು ಈಗಾಗಲೇ ಜಂಟಿ ಸಮೀಕ್ಷೆ ಕಾರ್ಯ ನಡೆಸಲಾಗಿದೆ. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್ ಪ್ರಕಾರ 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು ಶೀಘ್ರವೇ ಸರಕಾರಕ್ಕೆ ಸಲ್ಲಿಸಲಾಗುವುದು” ಎಂದು ಜಿಲ್ಲಾ ಉಸ್ತುವಾರಿ ಎಚ್.ಕೆ.ಪಾಟೀಲ ತಿಳಿಸಿದರು.

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸೋಮವಾರ ಬೆಳೆ ಹಾನಿ ಸಮೀಕ್ಷೆ ಹಾಗೂ ಜನತಾ ದರ್ಶನ , ಪ್ರಗತಿ ಪರಿಶೀಲನೆ ಸಭೆ ಜರುಗಿಸಿ ನಂತರ ಪತ್ರಿಕಾಗೋಷ್ಟಿಯನ್ನುದ್ದೆಶಿಸಿ ಅವರು ಮಾತನಾಡಿದರು.

ತೋಟಗಾರಿಕೆ ಇಲಾಖೆಗೆ ಸಂಬAಧಿಸಿದAತೆ 11,348 ಹೆಕ್ಟೇರ್ ಪ್ರದೇಶ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್. ಪ್ರಕಾರ 10.36 ಕೋಟಿ ರೂ. ಪರಿಹಾರಕ್ಕಾಗಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಕೃಷಿ ಬೆಳೆ ಹಾನಿಗೆ ಸಂಬಂಧಿಸಿದಂತೆ 4337 ರೈತರಿಂದ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಅವುಗಳನ್ನು ಪರಿಶೀಲಿಸಿ ವರದಿಯಲ್ಲಿ ಅಳವಡಿಸಲಾಗುವುದು. ಕೃಷಿಗೆ ಸಂಬಂಧಿಸಿದಂತೆ 4.36 ಕೋಟಿ ರೂ ಹಾಗೂ ತೋಟಗಾರಿಕೆ ಸಂಬಂಧಿಸಿದಂತೆ ಹೆಚ್ಚುವರಿಯಾಗಿ 1 ಕೋಟಿ ರೂ. ಪರಿಹಾರ ನೀಡಲು ಪ್ರಸ್ತಾವನೆಯಲ್ಲಿ ಸೇರಿಸಿ ಸಲ್ಲಿಸಲಾಗುವುದು” ಸಚಿವ ಎಚ್.ಕೆ.ಪಾಟೀಲ ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...