ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

Date:

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ ಧಕ್ಕೆಯಾಗುತ್ತಿದೆ. ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದ ಬೆಳೆ ಹಾನಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಭಾನುವಾರ ಬೇಟಿ ನೀಡಿ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಿದರು.

ಬಿಂಕದಕಟ್ಟಿ ರೈತ ಶ್ರೀನಿವಾಸ್ ಇಟಗಿ ಅವರ 10 ಎಕರೆಯ ಹೊಲದಲ್ಲಿನ ಹೆಸರು ಬೆಳೆ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ ಸಚಿವರು ಬೆಳೆಹಾನಿ ವೀಕ್ಷಣೆ ನಡೆಸಿ ಪರಿಹಾರದ ಬರವಸೆ‌ ನೀಡಿದರು.

ಈ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ನಿಖರ ಸಮೀಕ್ಷೆ ನಡೆಸಿ ಹಾನಿಗೊಳಗಾದ ಪ್ರತಿ ಎಕರೆಯ ಲೆಕ್ಕವನ್ನು ದಾಖಲಿಸುವಂತೆ ಸೂಚನೆ ನೀಡಿದರು. ರೈತರ ಕಷ್ಟವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ದೊರೆಯಬೇಕು ಎಂದು ಸಚಿವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಹಾನಿ ಅಂಕಿ-ಅಂಶಗಳನ್ನು ಸರಿಯಾಗಿ ಸಂಗ್ರಹಿಸುವಂತೆ ಹಾಗೂ ರೈತರಿಗೆ ಶೀಘ್ರ ಪರಿಹಾರ ಒದಗಿಸಲು ತುರ್ತು ಕ್ರಮ ಕೈಗೊಳ್ಳುವಂತೆ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಸೂಚಿಸಿದರು.

 ಬೆಳೆ ಹಾನಿ : ಗದಗ ಜಿಲ್ಲೆಯಲ್ಲಿ ಆ.1 ರಿಂದ 18 ವರೆಗೆ ವಾಡಿಕೆ‌ಮಳೆ 46.9 ಎಂ ಎಂ ಇತ್ತು, 140.2 ರಷ್ಟು ಮಳೆ ಆಗುವ ಮುಲಕ ಶೇ.198.9 ರಷ್ಟು ಅಧಿಕವಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 292826 ಹೆಕ್ಟರ್ ಬಿತ್ತನೆ ಮಾಡಲಾಗಿತ್ತು, 94884 ಹೆಕ್ಟೇರ್ ಬೆಳೆ ಹಾನಿಗೀಡಾಗಿದೆ. ಇದರಲ್ಲಿ ಹೆಸರು ಬೆಳೆ 67533 ಹೆ ಹಾನಿಯಾಗಿದೆ ಎಂದು ಪ್ರಾಥಮಿಕ ಸಮೀಕ್ಷೆ ಮೂಲಕ ಅಂದಾಜಿಸಲಾಗಿದೆ. ಇನ್ನು ಸಮೀಕ್ಷಾಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಹಾಗೂ ಮೆಣಸಿನಕಾಯಿ ಜಿಲ್ಲೆಯಲ್ಲಿ 24000 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಈವರೆಗೆ 9800 ಹೆಕ್ಟೇರ ಪ್ರದೇಶ ಹಾನಿಯಾಗಿದೆ. ಸಮೀಕ್ಷೆ ಕಾರ್ಯ ಮುಂದುವರಿದಿದೆ. 

ಗದಗ ತಾಲೂಕಿನಲ್ಲಿ ಈರುಳ್ಳಿ 802 ಹೆಕ್ಟರ್, ಮೆಣಸಿನಕಾಯಿ 3273 ಹೆಕ್ಟರ್ ಹಾನಿಗೊಳಗಾಗಿದ್ದು, ಗದಗ ತಾಲೂಕ್ ಒಂದರಲ್ಲಿಯೇ 4075 ಹೆಕ್ಟರ್ ಪ್ರದೇಶ ಹಾನಿಗೊಳದಾಗಿದೆ ಎಂದು ಪ್ರಾಥಮಿಕ ಸಮೀಕ್ಷೆ ಮೂಲಕ ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ವರದಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನಿರಂತರ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾನಿ: ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ‌ ಸಂತ್ರಸ್ತ ರೈತರು

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಸಹಾಯಕ ಆಯುಕ್ತ ಗಂಗಪ್ಪ ಎಂ., ತಹಶೀಲ್ದಾರ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಶೈಲೇಂದ್ರ ಬಿರಾದಾರ ಸೇರಿದಂತೆ ಅಧಿಕಾರಿಗಳು, ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...