ಗದಗ | ಭೀಷ್ಮಕೆರೆಯಲ್ಲಿ ಶೀಘ್ರ ಸೈಕ್ಲೀಂಗ್ ವ್ಯವಸ್ಥೆ : ಸಚಿವ ಎಚ್ ಕೆ ಪಾಟೀಲ

Date:

“ಐತಿಹಾಸಿಕ ಭೀಷ್ಮ ಕೆರೆ ಪರಿಸರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸುಂದರ ವಿಹಾರ ಧಾಮ ಮಾಡಲಾಗಿದೆ. ಭೀಷ್ಮಕೆರೆಯಲ್ಲಿ ಶೀಘ್ರ ಸೈಕ್ಲೀಂಗ್ ವ್ಯವಸ್ಥೆ ಕೂಡ ಮಾಡಲಾಗುವುದು” ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಹೇಳಿದರು.

ಗದಗ ಪಟ್ಟಣದ ಭೀಷ್ಮ ವಿಹಾರ ಧಾಮದ ನಡುಗಡ್ಡೆಯಲ್ಲಿ ಇಂದು ಬಸವ ಜಯಂತಿ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ-ಬೆಟಗೇರಿ ನಗರಸಭೆ ಸಹಯೋಗದಲ್ಲಿ ಬಸವ ಜಯಂತಿ ಅಂಗವಾಗಿ ಸಂಗೀತಗಾರ ರಾಮಚಂದ್ರ ಹಡಪದ, ಸ್ಪರ್ಶ ಇವರ ತಂಡದಿಂದ ಆಯೋಜಿಸಲಾದ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು.

“ಭೀಷ್ಮ ಕೆರೆ ಆವರಣದಲ್ಲಿ ಈಗಾಗಲೇ ಬೋಟಿಂಗ್ ಆರಂಭವಾಗಿದ್ದು, ಪ್ರತಿನಿತ್ಯ 15 ಸಾವಿರ ಆದಾಯ ಸೃಷ್ಟಿಯಾಗುತ್ತಿದೆ. ಹೀಗಾಗಿ ಭೀಷ್ಮ ವಿಹಾರ ಧಾಮವನ್ನು ಮತ್ತಷ್ಟು ಆಕರ್ಷಣೀಯವಾಗಿಸಲು ಮೇ 20ರಂದು ಕೆರೆ ನೀರಿನ ಮೇಲೆ ಓಡುವ ಸೈಕಲ್ ಸವಾರಿ ಆರಂಭಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐತಿಹಾಸಿಕ 63 ಎಕರೆ ಕೆರೆ ಅಭಿವೃದ್ಧಿ ಮಾಡಲು ಅವಕಾಶವಿದೆ. ಸದ್ಯ 33 ಎಕರೆ ಮಾತ್ರ ಅಭಿವೃದ್ಧಿ ಮಾಡಲಾಗಿದೆ. ಸರಕಾರದ ವಿವಿಧ ಇಲಾಖೆಗಳ ಜೊತೆಗೆ ಸಾರ್ವಜನಿಕರೂ ಅಭಿವೃದ್ಧಿಗೆ ಕೈ ಜೋಡಿಸಬೇಕು. ಅಂದಾಗ ಮಾತ್ರ ವಿಹಾರಧಾಮ ಮತ್ತಷ್ಟು ಸುಂದರವಾಗಲು ಸಾಧ್ಯ” ಎಂದರು.

“ಬಸವ ಜಯಂತಿಯಂದು ಭೀಷ್ಮ ಕೆರೆ ಆವರಣ ಇಷ್ಟೊಂದು ಸುಂದರವಾಗಲು ಪ್ರಭು ಬುರಬುರೆ, ಬಿ ಬಿ ಅಸೂಟಿ, ಗುರಣ್ಣ ಬಳಗಾನೂರ ಸೇರಿದಂತೆ ಹಲವರ ಆಸಕ್ತಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಸೇರಿದಂತೆ ಹಲವಾರು ಅಧಿಕಾರಿಗಳ ಅವಿರತ ಶ್ರಮ ಅಡಗಿದೆ. ಅವರ ಜೊತೆಗೆ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳಿಗೆ” ಅಭಿನಂಧನೆ ತಿಳಿಸಿದರು.

ಜಿಲ್ಲಾಧಿಕಾರಿ ಸಿಎನ್ ಶ್ರೀಧರ ಅವರು ಪ್ರಾಸ್ತಾವಿಕ ಮಾತನಾಡಿ,  “116 ಅಡಿ ಎತ್ತರದ ಬಸವ ಪುತ್ಥಳಿ ಆವರಣದಲ್ಲಿ ಬಸವ ಜಯಂತಿ ಅಂಗವಾಗಿ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸುವ ಮೂಲಕ ಬಸವ ಜಯಂತಿಯನ್ನು  ಅರ್ಥಪೂರ್ಣವಾಗಿ ಆಚರಿಸಲಾಗಿದೆ” ಎಂದರು.

ಸಮಾರಂಭದಲ್ಲಿ  ಹೆಸರಾಂತ ಕಲಾವಿದ ರಾಮಚಂದ್ರ ಹಡಪದ್ ಅವರನ್ನು ಸಚಿವ ಎಚ್ ಕೆ ಪಾಟೀಲ ಅವರು ಜಿಲ್ಲಾಡಳಿತದಿಂದ ಸತ್ಕರಿಸಿ ಗೌರವಿಸಿದರು. ಜೊತೆಗೆ ಸ್ಪರ್ಶ ಕಲಾತಂಡದ ಸರ್ವ ಸದಸ್ಯರನ್ನು ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಗದಗ | ಸೂಪರ್ ಮಾರುಕಟ್ಟೆ ಕಾಂಪೌಂಡ್‌, ಪಿಲ್ಲರುಗಳಲ್ಲಿ ಬಿರುಕು: ಕಳಪೆ ಕಾಮಗಾರಿ ಆರೋಪ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಡಿ. ಆರ್ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ,  ತಾಲೂಕ ಅಧ್ಯಕ್ಷ ಅಶೋಕ ಮಂದಾಲಿ , ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಬಸವರಾಜ ಕಡೇಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಪ್ರೊ. ಬಾಹುಬಲಿ ಜೈಜರ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...