ಗದಗ | ಅಂಬೇಡ್ಕರ್ ಆಶಯದಂತೆ ಬೌದ್ಧ ಧಮ್ಮ ಸ್ವೀಕರಿಸಿದ ಜಿಲ್ಲೆಯ ದಲಿತ ಕುಟುಂಬಗಳು

Date:

ಡಾ.ಬಿ.ಆರ್. ಅಂಬೇಡ್ಕರ್ ಅವರ‌ ಆಶಯದಂತೆ ಗದಗ ಜಿಲ್ಲೆಯ ಸುಮಾರು 160 ಜನ ನಾಗಪುರದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.

ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರು ತಮ್ಮ ಇಡೀ ಜೀವಿತಾವಧಿಯಲ್ಲಿ ಹಿಂದೂ ಧರ್ಮದಲ್ಲಿನ ಜಾತೀಯತೆ, ಮೇಲು ಕೀಳು, ವರ್ಣಾಶ್ರಮ ವ್ಯವಸ್ಥೆಯನ್ನು ಕಟುವಾಗಿ ಖಂಡಿಸಿ, ಕೊನೆಗೆ “ಹಿಂದೂವಾಗಿ ಹುಟ್ಟಿದ್ದೇನೆ. ಆದರೆ, ಹಿಂದೂವಾಗಿ ಸಾಯಲಾರೆ” ಎಂದು ಆಡಿದ ಮಾತಿನಂತೆ 1956 ಅಕ್ಟೋಬರ್ 14 ರ ವಿಜಯ ದಶಮಿಯದಿನ ತಮ್ಮ ಐದು ಲಕ್ಷ ಅನುಯಾಯಿಗಳೊಂದಿಗೆ ನಾಗಪುರದಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದ್ದರು.

1956 ಅಕ್ಟೋಬರ್ 14 ರ ನಂತರ ಪ್ರತಿ ವರ್ಷ ವಿಜಯ ದಶಮಿಯದಿನ ನಾಗಪುರದಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚಿನ ಸಂಖ್ಯೆಯಲ್ಲಿ ದೇಶ, ವಿದೇಶಗಳಿಂದ ಅಂಬೇಡ್ಕರ್ ಅವರ ಅನುಯಾಯಿಗಳು ಆವತ್ತಿನ ದಿನ ನಾಗಪುರದಲ್ಲಿ ಸೇರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ವರ್ಷವೂ ಗದಗ ಜಿಲ್ಲೆಯಿಂದ ನೂರಾರು ಜನ ನಾಗಪುರದ ಧಮ್ಮ ದೀಕ್ಷಾ ಭೂಮಿಗೆ ಭೇಟಿ ನೀಡುತ್ತಾರೆ. ಈ ಬಾರಿ 58ನೇ ವರ್ಷದ ಧಮ್ಮ ಪರಿವರ್ತನಾ ದಿನಾಚರಣೆಗೆ ಗದಗ ಜಿಲ್ಲೆಯಿಂದ ಸುಮಾರು 160 ಜನ ನಾಲ್ಕು ಬಸ್ ಗಳ ಮೂಲಕ ಭಾಗವಹಿಸಿ, ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.

IMG 20241014 WA2122

58 ನೇ ವರ್ಷದ ಧಮ್ಮ ಪರಿವರ್ತನಾ ದಿನದಂದು ಡಾ.ಬಾಬಾ ಸಾಹೇಬರ ಆಶಯದಂತೆ ಗದಗ ಜಿಲ್ಲೆಯ ದಲಿತ ಮುಖಂಡರಾದ ಶರೀಫ್ ಬಿಳೆಯಲಿ, ಡಾ.ರಾಮಚಂದ್ರ ಹಂಸನೂರ ಅವರ ಕುಟುಂಬ ಮುಂಡರಗಿ ತಾಲೂಕಿನ ಡೋಣಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲೇಶ್ ಹೊಸಮನಿ, ಬಾಲೆಹೊಸೂರಿನ ಕೇಶವ ಕಟ್ಟಿಮನಿ, ಮಂಜುನಾಥ ಛಲವಾದಿ, ಸಂಜಯ್ ಅಂಬೇಡ್ಕರ್ ಅವರು ದೇಶದ ವಿವಿಧ ಬೌದ್ಧ ಭಿಕ್ಕುಗಳ ಸಮ್ಮುಖದಲ್ಲಿ ಬೌದ್ಧ ಧಮ್ಮವನ್ನು ಸ್ವೀಕಾರ ಮಾಡಿದರು.

ಈ ಧಮ್ಮ ದೀಕ್ಷಾ ಸ್ವೀಕಾರ ಸಮಾರಂಭಕ್ಕೆ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಅವರು ಉಪಸ್ಥಿತರಿದ್ದರು. ಅವರು ಧಮ್ಮ ದೀಕ್ಷಾ ಸ್ವೀಕರಿಸಿದ ಗದಗ ಜಿಲ್ಲೆಯವರಿಗೆ ಧಮ್ಮ ದೀಕ್ಷಾ ಪ್ರಮಾಣ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ಗದಗ ಜಿಲ್ಲೆಯ ದಲಿತ ಮುಖಂಡರಾದ ಆನಂದ ಶಿಂಗಾಡಿ, ಮುತ್ತು ಬಿಳೆಯಲಿ, ಯಲ್ಲಪ್ಪ ರಾಮಗಿರಿ, ಮಂಜುನಾಥ ಗೊಂದಿಯವರ, ಅನಂತ ಕಟ್ಟಿಮನಿ, ರಮೇಶ್ ಕೋಳೂರು, ಬಸವರಾಜ ಛಲವಾದಿ, ಹುಚ್ಚಪ್ಪ ಛಲವಾದಿ, ಸತ್ಯಪ್ಪ ಛಲವಾದಿ ಸೇರಿದಂತೆ ಗದಗ ಜಿಲ್ಲೆಯ ಹಲವಾರು ಮಂದಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...