ಗದಗ | ಆಯಾ ಜಿಲ್ಲೆಯ ಚರಿತ್ರೆ ಕಟ್ಟುವ ಕೆಲಸ ಆಗಬೇಕು : ಸಾಹಿತಿ ಬಸವರಾಜ್ ಸೂಳಿಬಾವಿ

Date:

ಆಯಾ ಜಿಲ್ಲೆಯ ಚರಿತ್ರೆ ಕಟ್ಟುವ ಕೆಲಸ ಆಗಬೇಕು ಎಂದು ಹಿರಿಯ ಸಾಹಿತಿ ಬಸವರಾಜ್ ಸೂಳಿಬಾವಿ ಅಭಿಪ್ರಾಯಿಸಿದರು.

ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಚಳುವಳಿ 50: ಅವಲೋಕನ ಮತ್ತು ಮುನ್ನೋಟ ಸಮಾವೇಶದ ಪೂರ್ವಭಾವಿಯಾಗಿ ನಡೆಸಲಾದ ಸಭೆಯಲ್ಲಿ ಅವರು ಮಾತನಾಡಿದರು.

“ಸಮಗ್ರವಾಗಿ ಆಯಾ ಜಿಲ್ಲೆಯಲ್ಲಿ ದಲಿತ ಚಳುವಳಿ ಕಟ್ಟಲು ಇಡೀ ಬದುಕನ್ನೇ ಕಳೆದವರ ದಾಖಲಾತಿ ಹಾಗೂ ಆಯಾ ಜಿಲ್ಲೆಯ ದಲಿತ ಚಳುವಳಿ ಚರಿತ್ರೆಯ ಅಧ್ಯಯನ ಜೊತೆಗೆ ದಲಿತ ಸಮುದಾಯಗಳ ಸಮಾಜೋ-ಆರ್ಥಿಕ ಸ್ಥಿತಿಗತಿ ಕಟ್ಟಿ ಕೊಡುವ ಕೆಲಸ ಆಗಬೇಕಿದೆ. ಈ ಚರಿತ್ರೆ ಕರ್ನಾಟಕದ ಆಯಾ ಜಿಲ್ಲೆಗಳ ಜಮೀನ್ದಾರಿ ಪಾಳೇಗಾರಿಕೆ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ದಬ್ಬಾಳಿಕೆಯ ಚರಿತ್ರೆಯಾಗಿ ನಿಲ್ಲಬೇಕಿದೆ. ಹಾಗೊಂದು ಐತಿಹಾಸಿಕವಾಗಿ ಚರಿತ್ರೆ ಕಟ್ಟುವ ಕೆಲಸಗಳಿಗೆ ದಲಿತ ಚಳುವಳಿ 50 ಸಮಾವೇಶ ಪ್ರೇರಕ ಶಕ್ತಿ ಆಗಲಿದೆ” ಎಂದು ಸಾಹಿತಿ ಬಸವರಾಜ್ ಸೂಳಿಬಾವಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಎಲ್ಲ ದಲಿತ ಸಮುದಾಯಗಳನ್ನು ಒಳಗೊಳಿಸುವಿಕೆಯ ಭಾಗ ಒಂದು ದಲಿತ ಶಕ್ತಿ ಉದಯಿಸಬೇಕು ಎನ್ನುವ ಸದಾಶಯದಲ್ಲಿ ಈ ಸಮಾವೇಶ ನಡೆಯಲಿದೆ. ಡಿ ಎಸ್ ಎಸ್ ಎಲ್ಲ ಘಟಕಗಳನ್ನು ಆಹ್ವಾನಿಸುತ್ತೇವೆ. ಇದು ಎಲ್ಲರೂ ಕೂಡಿ ಮಾಡುವ ಕೆಲಸ. ಭಾಗವಹಿಸುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಅದಕ್ಕಿಂತಲೂ ತಾತ್ವಿಕ ಸಿದ್ಧಾಂತ ಅಡಿಯಲ್ಲಿ ಎಲ್ಲರೂ ಒಗ್ಗೂಡುವ ಆಶಯಗಳನ್ನು ಈ ಸಮಾವೇಶ ಹೊಂದಿದೆ” ಎಂದ ಸೂಳಿಬಾವಿ, “ಈ ಸಮಾವೇಶಕ್ಕೆ ಹಿಂದಿನ ಚಳುವಳಿಯ ನಡೆದ ಬಂದ ದಾರಿಯ ಹಿನ್ನೋಟ ಮತ್ತು ಮುಂದೆ ಸಾಗಬೇಕಾದ ಚಳವಳಿಯ ಮುನ್ನೊಟದ ಕುರಿತು ಸ್ಪಷ್ಟತೆ ಇದೆ” ಎಂದರು.

ಗದಗ

ಕರ್ನಾಟಕದಲ್ಲಿ ಅಂಬೇಡ್ಕರ್ ಅವರು ಕರ್ನಾಟಕದಲ್ಲಿ ಯಾವ ಯಾವ ಸ್ಥಳಗಳಿಗೆ ಬಂದಿದ್ದರು, ಯಾಕೆ ಬಂದಿದ್ದರು, ಯಾವ ಸಂದರ್ಭದಲ್ಲಿ ಬಂದರು. ಜನ ಸಮುದಾಯದ ಜತೆ ಬೆರೆತಿದ್ದು, ಅದರ ಪರಿಣಾಮ, ಸಮುದಾಯದಲ್ಲಿ ಆದ ಬದಲಾವಣೆ, ಅವರ ನಡುವೆ ಆಗಿರುವ ಪತ್ರಗಳ ಹಂಚಿಕೆ ಕುರಿತು ಅಧ್ಯಯನ ನಡೆದು ಆ ಚರಿತ್ರೆಯನ್ನು ಕಟ್ಟಿಕೊಡುವ ಕೆಲಸ ಆದರೆ ಈ ಸಮಾವೇಶಕ್ಕೆ ಅರ್ಥ ಸಿಗುತ್ತದೆ ಎಂದು ಅಭಿಪ್ರಾಯಿಸಿದರು.

ಗದಗದಲ್ಲಿ ಕೂಡ ಅಂಬೇಡ್ಕರ್ ಬದುಕಿರುವ ಕಾಲದಲ್ಲಿಯೇ ಅವರ ಅಭಿಮಾನಿಗಳು ಇದ್ದರು. ಅವರ ನಡೆಸುವ ಚಳುವಳಿ ಚರ್ಚಿಸಲು ಸಭೆ ಸೇರುತ್ತಿದ್ದರು. ಅವರು ನಡೆಸುವ ಚಳಿವಳಿಗೆ ತಮ್ಮಿಂದ ಆದಷ್ಟು ಹಣಕಾಸಿನ ನೆರವು ನೀಡುತ್ತಿದ್ದರು. ಅದರಲ್ಲಿ ಮಹಿಳೆಯರು ದಲಿತೇತರು ಇದ್ದರು ಎಂಬುದನ್ನು ಅಂಬೇಡ್ಕರ್ ಅವರು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿದ ಮಾಹಿತಿ ಸಿಕ್ಕಿದೆ. ಆ ಚಾರಿತ್ರಿಕ ಸಂಗತಿಗಳನ್ನು ಸಂಶೋಧಿಸಿ ಬರೆಯಬೇಕಿದೆ. ಅಂಬೇಡ್ಕರ್ ಎಲ್ಲ ಪತ್ರ ವ್ಯವಹಾರಗಳನ್ನು ಐತಿಹಾಸಿಕ ದಾಖಲೆಯಾಗಿ ಕನ್ನಡಿಗರಿಗೆ ಕಟ್ಟಿಕೊಡುವ ಆಗಬೇಕು ಎಂದರು.

ಗದಗದಲ್ಲಿ ಬಸವಲಿಂಗಪ್ಪನವರು ಒಂದು ಪ್ರೌಢಶಾಲೆಯನ್ನು ಪ್ರಾರಂಭಿಸಿದ್ದರು. ನಾನಾ ಕಾರಣಗಳಿಂದ ಅದು ಈಗ ಮುಚ್ಚಿಕೊಂಡಿದೆ. ದಲಿತ ಸಂಘರ್ಷ ಸಮಿತಿ ಕಟ್ಟಿದ ಬಿ. ಕೃಷ್ಣಪ್ಪ ಅವರು ಕೊನೆಯುಸಿರೆಳೆದ ಗದಗ ನೆಲದಲ್ಲಿ ಅವರ ಹೆಸರಿನಲ್ಲಿ ಸ್ಮಾರಕ ಭವನ ಮಾಡಬೇಕು. ಇವೆರಡು ಸಂಗತಿಗಳು ಸಮಾವೇಶದ ನಿರ್ಣಯಗಳಲ್ಲಿ ಸೇರಿಸಬೇಕು. ಅವೆರಡು ನಿರ್ಣಯ ಜಾರಿಗೆ ತರಲು ಸರ್ಕಾರವನ್ನು ಈಗಿನಿಂದಲೇ ಒತ್ತಾಯಿಸಬೇಕು. ಅದಕ್ಕಾಗಿ ಸಂಬಂಧಪಟ್ಟವರನ್ನು ಭೇಟಿಯಾಗಿ ಒತ್ತಾಯಿಸಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ಸಭೆಯಲ್ಲಿ ಸಮಾವೇಶಕ್ಕೆ ಪೂರಕವಾದ ಸಂಗತಿಗಳ ಕುರಿತು ಸಭೆಯಲ್ಲಿ ಭಾಗವಹಿಸಿದವರು ಮಾತನಾಡಿದರು. ಮುಖ್ಯವಾಗಿ ಜಿಲ್ಲೆಯಲ್ಲಿ ಚಳುವಳಿ ಸಿದ್ದಾಂತ ಬದ್ದವಾಗಿ ಕಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ನೂರ ಜನ ಯುವಕರಿಗೆ ಅಧ್ಯಯನ ಶಿಬಿರ ಮಾಡಬೇಕು ಎನ್ನುವ ತೀರ್ಮಾನ ಈ ಸಭೆ ತಗೆದುಕೊಂಡಿತು.

ಈ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷರಾದ ಅರ್ಜುನ ಗೊಳಸಂಗಿ ಅವರು ಸೂಕ್ತ ಸಲಹೆಗಳನ್ನು ನೀಡಿದರು. ಗದಗ ಜಿಲ್ಲೆಯ ದಲಿತ ಚಳುವಳಿಯ ಕಟ್ಟಲು ಒಂದು ಉಪಸಮಿತಿಯನ್ನು ರಚಿಸಲಾಯಿತು. ಸಭೆಯಲ್ಲಿ ಮುತ್ತು ಬಿಳಿಯಲಿ, ಆನಂದ ಶಿಂಗಾಡಿ, ರಮೇಶ ಕೋಳೂರು, ಅಶೋಕ ಕಟ್ಟಿಮನಿ ಅವರನ್ನೊಳಗೊಂಡು ಧಾರವಾಡ ಕೊಪ್ಪಳ, ಕುಷ್ಟಗಿ ಗದಗ ದಲಿತ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...