ಗದಗ | ಬಾಗಿದ ವಿದ್ಯುತ್ ಕಂಬದಿಂದ ಅಪಾಯದ ಆತಂಕ; ತೆರವುಗೊಳಿಸದ ಅಧಿಕಾರಿಗಳು

Date:

ರಸ್ತೆ ಮಧ್ಯದಲ್ಲಿರುವ ವಿದ್ಯುತ್‌ ಕಂಬ ಅರ್ಧಕ್ಕೆ ಮುರಿದು ಬಾಗಿದ್ದು, ಹತ್ತು ಹದಿನೈದು ದಿನಗಳಾದರೂ ಈವರೆಗೆ ಅಧಿಕಾರಿಗಳು ತೆರವುಗೊಳಿಸದೆ ಇರುವುದು ಅಪಾಯಕ್ಕೆ ಎಡೆಮಾಡಿದೆ.

ಗದಗ ಜಿಲ್ಲೆಯ ರೋಣ ಪಟ್ಟಣದ ಮಿನಿ ವಿಧಾನಸೌಧದ ಎದುರಿಗೆ ಇರುವ ಮುಖ್ಯ ರಸ್ತೆಯ ಡಿವೈಡರ್ ಮಧ್ಯೆಯಿರುವ ಬೀದಿದೀಪದ(ವಿದ್ಯುತ್ ಕಂಬ) ಕಂಬಕ್ಕೆ ಹದಿನೈದು ದಿನಗಳ ಹಿಂದೆ ಲಾರಿ ಡಿಕ್ಕಿ ಹೊಡೆದು, ರಸ್ತೆಗೆ ಬಾಗಿದೆ. ಅಪಾಯಕ್ಕೆ ಎಡೆ ಮಾಡಿಕೊತ್ತಿದ್ದರೂ ಕೂಡಾ ಇಲ್ಲಿಯ ಅಧಿಕಾರಿಗಳು ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಇರುವುದು ದುರಂತ.

ಈ ಮುಖ್ಯ ರಸ್ತೆಯಲ್ಲಿ ಬಸ್‌, ಲಾರಿ ಸೇರಿದಂತೆ ದ್ವಿಚಕ್ರ ವಾಹನಗಳು ಅತಿಹೆಚ್ಚು ಓಡಾಡುತ್ತವೆ. ಹುಬ್ಬಳ್ಳಿ, ನರಗುಂದ, ಗದಗ ಬಸ್‌ಗಳೂ ಕೂಡಾ ಇದೇ ರಸ್ತೆಯಲ್ಲಿ ಹೆಚ್ಚು ಸಂಚರಿಸುತ್ತವೆ. ಈ ರಸ್ತೆಯ ಪಕ್ಕದಲ್ಲಿಯೇ ಪೆಟ್ರೋಲ್‌ ಬಂಕ್‌ ಹೋಟೆಲ್‌ಗಳು, ಜೆರಾಕ್ಸ್ ಅಂಗಡಿಗಳೂ ಕೂಡ ಇವೆ. ಈ ರಸ್ತೆ ಪಕ್ಕದಲ್ಲಿಯೇ ತಹಶೀಲ್ದಾರ್ ಕಚೇರಿ ಮಿನಿ ವಿಧಾನಸೌಧ ಕೂಡ ಇದೆ. ಜನದಟ್ಟಣೆ ಇರುವ ರಸ್ತೆಯು ಆಗಿದೆ. ಸಂಚರಿಸುವ ಬಸ್‌ ಮತ್ತು ಲಾರಿಗಳು ಅಪಾಯ ಒಡ್ಡಿದ ಬೀದಿದೀಪದ ಕಂಬಕ್ಕೆ ತಾಗಿದರೆ ದೊಡ್ಡ ಅಪಘಾತ ಸಾವು ನೋವುಗಳಾಗುವ ಸಂಭವ ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಸ್ಯೆ ಏನು?

ರೋಣ ಪಟ್ಟಣದ ಮುಲ್ಲಾನಾ ಭಾವಿ ಕ್ರಾಸ್‌ನಿಂದ ತಹಶೀಲ್ದಾರ್ ಕಚೇರಿವರೆಗೂ ಒಂದೇ ರಸ್ತೆಯಿದೆ. ತಹಶೀಲ್ದಾರ್ ಕಚೇರಿ ಹತ್ತಿರ ಬರುತ್ತಿದ್ದಂತೆಯೇ ರಸ್ತೆಯ ಮಧ್ಯದಿಂದ ಡಿವೈಡರ್ ರಸ್ತೆಗಳು ಆಗಿದ್ದು, ವೇಗವಾಗಿ ಬರುವ ಬಸ್ಸು ಮತ್ತು ಲಾರಿಗಳು, ಒಮ್ಮಿಂದೊಮ್ಮೆಲೆ ಮಗ್ಗಲು ರಸ್ತೆಗೆ ತೆಗೆದುಕೊಳ್ಳಲು ಆಗದೆ ಇರುವುದರಿಂದ ಕಂಬಕ್ಕೆ ಡಿಕ್ಕಿ ಹೊಡೆಯುವ ಸಂಭವ ಜಾಸ್ತಿ ಕಂಡುಬರುತ್ತದೆ. ರಾತ್ರಿ ವೇಳೆ ಲಾರಿ ಮತ್ತು ಬಸ್‌ ಚಾಲಾಯಿಸುವುದು ಸಾರ್ವಜನಿಕರಿಗೆ ಸವಾಲಾಗಿದೆ.‌

ವಿದ್ಯುತ್‌ ಕಂಬ 1

ಅಷ್ಟೇ ಅಲ್ಲದೇ ಈ ರಸ್ತೆ ಪಕ್ಕದಲ್ಲಿ ಹೋಟೆಲ್‌ಗಳಿಗೆ ಹೋಗುವವರು ದ್ವಿಚಕ್ರ ವಾಹನಗಳ ಬಳಸುವುದರಿಂದ ಬಸ್‌ಗಳು ಸರಾಗವಾಗಿ ಓಡಾಡಲು ಆಗುತ್ತಿಲ್ಲ. ಇದರಿಂದ ಈ ರೀತಿಯ ಅಪಾಯಗಳಾಗುವ ಸಂಭವ ಹೆಚ್ಚು.

ಮಾದಿಗ ದಂಡೋರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಬುರಡಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಈ ಬೀದಿದೀಪದ ಕಂಬಕ್ಕೆ ಬಸ್ಸೋ ಲಾರಿಯೋ ಡಿಕ್ಕಿ ಹೊಡೆದಿದ್ದು, ಸುಮಾರು ಹದಿನೈದು ದಿನಗಳಿಂದ ಈ ಕಂಬ ಬೀಳುವ ಹಂತದಲ್ಲಿದೆ. ನಿತ್ಯ ನೂರಾರು ಬಸ್‌ಗಳು, ದ್ವಿಚಕ್ರ ವಾಹನಗಳು, ಓಡಾಡುತ್ತವೆ. ಬಸ್‌ಗಳಿಗೆ ತಾಗಿ ದೊಡ್ಡ ಅನಾಹುತವಾಗುವ ಸಂಭವ ಹೆಚ್ಚು. ಹಾಗಾಗಿ ಕೂಡಲೇ ಕಂಬವನ್ನು ತೆರವುಗೊಳಿಸಿ, ಅಪಾಯ ತಪ್ಪಿಸಬೇಕು. ತಹಶೀಲ್ದಾರ್ ಇದೇ ರಸ್ತೆಯಲ್ಲಿಯೇ ನಿತ್ಯ ಓಡಾಡುತ್ತಾರೆ. ಆದರೂ ಗಮನ ಹರಿಸದೇ ಇರುವುದು ದುರಂತ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಿ ಶಾಲೆ ನಿರ್ಮಾಣ ಜಾಗದಲ್ಲಿ ಅಕ್ರಮ ಶೆಡ್: ತೆರವುಗೊಳಿಸಲು ಜಿಲ್ಲಾಧಿಕಾರಿಗೆ ಮನವಿ

ಈ ಕುರಿತು ಮಾಹಿತಿ ಪಡೆಯಲು ಈ ದಿನ.ಕಾಮ್ ಪುರಸಭೆ ಮುಖ್ಯ ಅಧಿಕಾರಿಗೆ ಸಂಪರ್ಕಿಸಿದ್ದು, ಅವರು ಕರೆಗೆ ಲಭ್ಯವಾಗಿಲ್ಲ.

“ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಬಾಗಿದ ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಅಪಾಯ ಹಾಗೂ ಅಪಘಾತ ಆಗುವುದನ್ನು ತಪ್ಪಿಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದರು.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...