ಗದಗ | ರೋಸ್ಟರ್ ನಿಯಮದಂತೆ ಹೊರಗುತ್ತಿಗೆ ನೇಮಕಾತಿ ಮಾಡುವಂತೆ ದಸಂಸ ಒತ್ತಾಯ

Date:

ರೋಸ್ಟರ್ ನಿಯಮಗಳ ಅನುಸಾರವಾಗಿ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆಗಳು ಕಡ್ಡಾಯವಾಗಿ ಇರಲೇಬೇಕೆಂದು ಸರಕಾರ ಸುತ್ತೋಲೆ ಹೊರಡಿಸಲು ಬೇಗ ಕ್ರಮಕೈಗೊಳ್ಳಬೇಕು. ಈಗಾಗಲೇ ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸಬೇಕೆಂದು ಗದಗ ಪಟ್ಟಣದ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘರ್ಷ ಸಮಿತಿಯಿಂದ ನಡೆಸಿದ ಪ್ರತಿಭಟಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಹಲವಾರು ವರ್ಷಗಳಿಂದ ಉದ್ಯೋಗ ನೇಮಕಾತಿ ಪ್ರಕ್ರಿಯೆಗಳೇ ನಡೆಯದೆ ಅಹಿಂದ ಸಮುದಾಯದ ಲಕ್ಷಾಂತರ ನಿರುದ್ಯೋಗಿ ಯುವಸಮೂಹವು ಅಕ್ಷರಶಃ ಬೀದಿಗೆ ಬಿದ್ದಿತ್ತು. ಇಂತಹ ಹೊತ್ತಿನಲ್ಲಿ ತಮ್ಮ ಸರ್ಕಾರದ ಈ ಆದೇಶವು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಪ್ರಮುಖ ಹೆಜ್ಜೆ ಆಗಲಿದೆ. ಆದರೆ, ಸುತ್ತೋಲೆಯ 1 ಮತ್ತು 6ನೇ ಷರತ್ತುಗಳು ಈ ಆದೇಶದ ಸದುದ್ದೇಶದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಡಿಎಸ್‌ಎಸ್ ಸಂಘಟನಾ ಸಂಚಾಲಕ ವೆಂಕಟೇಶಯ್ಯ ಹೇಳಿದರು.

“1ನೇ ಷರತ್ತಿನಲ್ಲಿ ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ ಎಂದಿದೆ. ಇದು ಮೀಸಲಾತಿ ವಿರೋಧಿಗಳಿಗೆ ಅನುಕೂಲಕರವಾಗಿದ್ದು ಅದನ್ನು ರದ್ದುಪಡಿಸಿ, ಮೀಸಲಾತಿ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಆದೇಶಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“6ನೇ ಷರತ್ತಿನಲ್ಲಿ ಯಾವುದೇ ಇಲಾಖೆಯಲ್ಲಿ ಕನಿಷ್ಟ 20 ಮಂದಿ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವಾಗ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು ಎಂದಿರುವುದು ತುಂಬಾ ಅವೈಜ್ಞಾನಿಕ ಮತ್ತು ದುರುದ್ದೇಶಪೂರಿತವಾಗಿದೆ. ಇಪ್ಪತ್ತಕ್ಕಿಂತ ಹೆಚ್ಚು ನೇಮಕಾತಿಗಳಿದ್ದಾಗ ಮಾತ್ರ ಮೀಸಲಾತಿ ನೀತಿ ಅನ್ವಯಿಸುತ್ತದೆಂದು ಸರ್ಕಾರವೇ ನಿರ್ಬಂಧ ಹೇಳಿದರೆ, ಇದ್ದಾಗ ಎಲ್ಲ ನೇಮಕಾತಿ ಉದ್ಯೋಗಗಳನ್ನು 20ರ ಒಳಗೇ ನಿಗದಿ ಮಾಡುತ್ತಾ ಹೋಗುವ ಮೀಸಲಾತಿ ವಂಚಕರಿಗೆ ಅನುಕೂಲ ಮಾಡಿ ಕೊಟ್ಟಂತಾಗುತ್ತದೆ. ಹಾಗಾಗಿ ಸುತ್ತೋಲೆಯ ಈ ಎರಡೂ ಷರತ್ತುಗಳನ್ನು ರದ್ದುಪಡಿಸಬೇಕು” ಎಂದು ವೆಂಕಟೇಶಯ್ಯ ಒತ್ತಾಯಿಸಿದರು.

ದಸಂಸ ಮುಖಂಡ ಶರೀಫ್ ಬಿಳಿಯಲಿ ಮಾತನಾಡಿ, “ಹುದ್ದೆಗಳ ಸಂಖ್ಯೆ ಎಷ್ಟೇ ಇರಲಿ ಮತ್ತು ಎಷ್ಟೇ ಅವಧಿಯದ್ದಾಗಿರಲಿ ಅಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ರೋಸ್ಟರ್ ನಿಯಮಗಳ ಅನುಸಾರವಾಗಿ ನೇಮಕಾತಿ ಪ್ರಕ್ರಿಯೆಗಳು ಕಡ್ಡಾಯವಾಗಿ ಇರಲೇಬೇಕೆಂದು ಸರಕಾರ ಸುತ್ತೋಲೆ ಹೊರಡಿಸಲು ಬೇಗ ಕ್ರಮಕೈಗೊಳ್ಳಬೇಕು. ಒಂದು ವೇಳೆ ಸರ್ಕಾರ ಈ ಸಂಬಂಧವಾಗಿ ಯಾವುದೇ ತುರ್ತು ಕ್ರಮ ಕೈಗೊಳ್ಳದೇ ಇದ್ದಲ್ಲಿ, ರಾಜ್ಯ ಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲಾಗುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಹೊರಗುತ್ತಿಗೆ ನೇಮಕಾತಿ ನಿಯಮದ ಆದೇಶ ತಿದ್ದುಪಡಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಪ್ರತಿಭಟನೆಯಲ್ಲಿ, ದಸಂಸ ಮುಖಂಡರು ಬಾಲರಾಜ್ ಅರಬರ್, ಕೃಷ್ಣ ಮಡಿವಾಳರ, ಮಲ್ಲಪ್ಪ ಬಾವಿಮನಿ, ಆನಂದ ಶಿಂಗಡಿ, ಮುತ್ತು ಬಿಳಿಯಲಿ, ಪಾಸು ಕಾಳೆ, ಎಚ್ ಎಸ್ ಜೋಗಣ್ಣವರ, ಮೌನೇಶ ಹಾದಿಮನಿ, ಪರಶುರಾಮ್ ಭಜಂತ್ರಿ, ಪರಮೇಶ್ ಕಾಳೆ ಹೊನ್ನಪ್ಪ ಸಾಕಿ, ಬಾಲರಾಜ್ ಅರಬರ, ನಾಗರಾಜ್ ಗೋಕಾವಿ, ಉಮರ್ ನಾಗಾವಿ, ಯಲ್ಲಪ್ಪ ರಾಮಗಿರಿ, ಪಾಕಿರೇಶ್ ರಾಮಗಿರಿ, ಮಲ್ಲೇಶ ಹೊಸಮನಿ, ಕರಿಯಪ್ಪ ಶಿರಹಟ್ಟಿ, ಮಾರುತಿ ಭಜಂತ್ರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...