ಗದಗ | ಬರ ನಿರ್ವಹಣೆ: ಗಂಭೀರತೆ ಅರಿತು ಸಮರ್ಥವಾಗಿ ನಿಭಾಯಿಸಲು ಡಿಸಿ ಸೂಚನೆ

Date:

ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬರನಿರ್ವಹಣೆ ಗಂಭೀರತೆಯನ್ನು ಅರಿತು ಸಮರ್ಥವಾಗಿ ನಿಭಾಯಿಸಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೆ ಪ್ರಥಮಾದ್ಯತೆ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಾ ಮಟ್ಟದಲ್ಲಿ ತಹಸೀಲ್ದಾರರ ನೇತೃತ್ವದಲ್ಲಿ ವಾರಕ್ಕೊಂದು ಸಲ ಬರನಿರ್ವಹಣೆ ಕುರಿತು ಸಭೆ ಜರುಗಿಸಬೇಕು. ಸಭೆಯಲ್ಲಿ ಜನಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಯನ್ನು ಸಮರ್ಪಕವಾಗಿ ಮಾಡಲು ಆದ್ಯತೆ ಇರಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆ ಎದುರಾದ ವಾರ್ಡ ಅಥವಾ ಗ್ರಾಮಗಳಲ್ಲಿ ಬೊರ್‍ವೆಲ್ ಕೊರೆಸುವ ಬದಲಾಗಿ ಖಾಸಗಿ ಬೋರ್‍ವೆಲ್‍ಗಳಲ್ಲಿ ನೀರಿನ ಲಭ್ಯತೆ ಇದ್ದಲ್ಲಿ ಅವರಿಂದ ನೀರನ್ನು ಪಡೆಯಲು ಮುಂದಾಗಬೇಕು. ಹತ್ತಿರದಲ್ಲಿ ನೀರಿನ ಲಭ್ಯತೆ ಇಲ್ಲದಿದ್ದರೆ ಅನಿವಾರ್ಯವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ವಾಲ್‍ಮನ್‍ಗಳ ಸಭೆ ಕರೆದು ನೀರಿನ ಅಪವ್ಯಯವಾಗದಂತೆ ನಿಗಾವಹಿಸಲು ಸೂಚನೆ ನೀಡಬೇಕು. ನೀರನ್ನು ವೃಥಾಕಾರಣ ವ್ಯರ್ಥ ಮಾಡದೇ ಮಿತವಾಗಿ ಬಳಸುವಂತೆ ಜೀವಜಲದ ಮಹತ್ವ ಕುರಿತು ರೈತರು ಸೇರಿದಂತೆ ಸಾರ್ವಜನಿಕರಿಗೆ ತಿಳಿಹೇಳಬೇಕು ಎಂದರು.

ಜಿಲ್ಲೆಯಲ್ಲಿ ಜೂನ್ ಅಂತ್ಯದವರೆಗೆ ಕುಡಿಯುವ ನೀರಿನ ಸಮರ್ಪಕ ಪೂರೈಕೆಯನ್ನು ಇರುವ ನೀರಿನ ಲಭ್ಯತೆಗನುಸಾರ ಅಧಿಕಾರಿಗಳು ಹಂಚಿಕೆ ಮಾಡಿ ಬರನಿರ್ವಹಣೆ ಮಾಡಬೇಕು. ಯಾವುದೇ ಕಾರಣಕ್ಕೂ ಅಧಿಕಾರಿಗಳು ಬರನಿರ್ವಹಣೆಯಲ್ಲಿ ನಿಷ್ಕಾಳಜಿ ಹಾಗೂ ನಿಧಾನಗತಿ ಕಾರ್ಯವನ್ನು ಸಹಿಸಲಾಗದು. ತಪ್ಪಿದಲ್ಲಿ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ ಎಂದು ಡಿಸಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸ್ಪಷ್ಟಪಡಿಸಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ  ಬರನಿರ್ವಹಣೆ ಕುರಿತು ಖಾಸಗಿ ಬೋರ್‍ವೆಲ್ ಗುರುತಿಸಿದ, ಹೊಸದಾಗಿ ಬೋರ್‍ವೆಲ್ ಕೊರೆಸಲು ಗುರುತಿಸಿದ ಪ್ರದೇಶಗಳ ಮಾಹಿತಿ,  ಪೈಪ್‍ಲೈನ್ ದುರಸ್ತಿಗೆ ಸಂಬಂಧಿಸಿದ ವಿವರವಾದ ವರದಿಯನ್ನು ವಾಟ್ಸ್‍ಅಪ್ ಮುಖಾಂತರ ಸಲ್ಲಿಸಬೇಕು. ತಮ್ಮ ಹಂತದಲ್ಲಿ ಸಮಸ್ಯೆ ಪರಿಹಾರವಾಗದಿದ್ದಲ್ಲಿ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ ಅವರು ಮಾತನಾಡಿ, ಜಿಲ್ಲಾಧಿಕಾರಿಗಳು ಸೂಚಿಸಿದಂತೆ ನದಿ ದಡದಲ್ಲಿ ಹಾಗೂ ಕೆರೆಗಳಲ್ಲಿನ ನೀರನ್ನು ರೈತರು ತಮ್ಮ ಬೆಳೆಗಳಿಗೆ ಮೋಟರ್ ಮೂಲಕ ನೀರೆತ್ತುವುದನ್ನು ತಡೆಯಬೇಕು. ಅದಕ್ಕಾಗಿ ಈಗಾಗಲೇ ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿಯಲ್ಲಿ ಪೊಲೀಸ ಇಲಾಖೆಯ ಜಿಲ್ಲಾ ಮೀಸಲು ಪಡೆಯ ತುಕಡಿಯನ್ನು ತಾಲೂಕುವಾರು ನೀಡಲಾಗಿದೆ. ಅವುಗಳನ್ನು ಬಳಸಿಕೊಂಡು ರೈತರ ನೀರೆತ್ತುವ ಪಂಪ್‍ಸೆಟ್‍ಗಳನ್ನು ತೆರವುಗೊಳಿಸಬೇಕು. ಇನ್ನೂ ಹೆಚ್ಚಿನ ಪೊಲೀಸ ಅಗತ್ಯವಿದ್ದಲ್ಲಿ ಒದಗಿಸಲಾಗುವುದು ಎಂದರು.

ಅನುದಾನದ ವಿವರ: ಬರ ನಿರ್ವಹಣೆಗಾಗಿ ಸರ್ಕಾರ ಅನುದಾನ ನೀಡಿದ್ದು ಅಗತ್ಯಕ್ಕನುಸಾರ ಬಳಕೆ ಮಾಡಿಕೊಳ್ಳಲು ಈ ಕೆಳಕಂಡಂತೆ ಅನುದಾನ ಲಭ್ಯವಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 2421.01 ಲಕ್ಷ ರೂ ಅನುದಾನ ಬರ ನಿರ್ವಹಣೆಗಾಗಿ ಲಭ್ಯವಿದ್ದು ತಾಲೂಕುವಾರು ಎಲ್ಲ ತಹಶೀಲ್ದಾರರ ಖಾತೆಯಲ್ಲಿ ಒಟ್ಟಾರೆ 274.74 ಲಕ್ಷ ರೂ. ಅನುದಾನ ಲಭ್ಯವಿದ್ದು, ತಾಲೂಕುವಾರು ವಿವರ. ಗದಗ-41.81 , ಗಜೇಂದ್ರಗಡ-21.06, ಲಕ್ಷ್ಮೇಶ್ವರ- 7.53, ಮುಂಡರಗಿ-52.05, ನರಗುಂದ-67.64,ರೋಣ-34.39, ಶಿರಹಟ್ಟಿ-50.26

ಪರಿಹಾರ ವಿತರಣೆ: ಜಿಲ್ಲೆಯಲ್ಲಿ 2023 ರ ಮುಂಗಾರು ಹಂಗಾಮಿನಲ್ಲಿ  ಮಳೆ ಕೊರತೆಯಿಂದ (ಬರಗಾಲದಿಂದ) ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಹಾನಿಗೆ 113778  ಫಲಾನುಭವಿಗಳಿಗೆ ತಲಾ ಎರಡು ಸಾವಿರ ರೂ.ಗಳಂತೆ ಒಟ್ಟು 22,41,78,565 ರೂ. ಪರಿಹಾರ ವಿತರಿಸಲಾಗಿದೆ. ತಾಲೂಕಾವಾರು ಫಲಾನುಭವಿಗಳ ವಿವರ ಇಂತಿದೆ:    ನರಗುಂದ ತಾಲೂಕಿನಲ್ಲಿ 25988, ರೋಣ- 10703, ಗದಗ -13818, ಶಿರಹಟ್ಟಿ- 17325, ಮುಂಡರಗಿ 12905, ಗಜೇಂದ್ರಗಡ –18680, ಲಕ್ಷ್ಮೇಶ್ವರ – 14269.

ಮೇವು ಬ್ಯಾಂಕ್:  ಜಾನುವಾರುಗಳಿಗೆ ಮೇವಿನ ಅಭಾವ ತಲೆದೂರದಂತೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಜಿಲ್ಲೆಯ 11  ಗ್ರಾಮಗಳಲ್ಲಿ ಮೇವು ಬ್ಯಾಂಕ್ ತೆರೆಯಲಾಗಿದೆ. ಅವುಗಳೆಂದರೆ ಗದಗ ತಾಲೂಕಿನ ಬಿಂಕದಕಟ್ಟಿ, ಕುರ್ತಕೋಟಿ, ಮುಳಗುಂದ, ಗಜೇಂದ್ರಗಡ ತಾಲೂಕಿನ ರಾಜೂರು, ಲಕ್ಷ್ಮೇಶ್ವರ, ಬಾಲೆಹೊಸೂರು, ಶಿಗ್ಲಿ, ಬಟ್ಟೂರು, ಅಡರಕಟ್ಟಿ, ಮುಂಡರಗಿ ತಾಲೂಕಿನ ಡಂಬಳ, ರೋಣ ತಾಲೂಕಿನ ಕೊತಬಾಳಗಳಲ್ಲಿ ಮೇವು ಬ್ಯಾಂಕು ತೆರೆಯಲಾಗಿದೆ.

ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮ ಹಾಗೂ ನಗರ ಪ್ರದೇಶಗಳ ವಿವರ: ಜಿಲ್ಲೆಯ  ಒಟ್ಟು  76 ಗ್ರಾಮಗಳನ್ನು  ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳಾಗಿವೆ. ಗದಗ ತಾಲೂಕಿನ 14 , ಗಜೇಂದ್ರಗಡ – 4, ಲಕ್ಷ್ಮೇಶ್ವರ – 8, ಮುಂಡರಗಿ – 7, ನರಗುಂದ – 18, ರೋಣ-17, ಶಿರಹಟ್ಟಿ -8 ಗ್ರಾಮಗಳು. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸಬಹುದಾದ ವಾರ್ಡುಗಳನ್ನು ಗುರುತಿಸಲಾಗಿದ್ದು ಒಟ್ಟು 81 ವಾರ್ಡುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾಗಿದೆ.  ಅವುಗಳೆಂದರೆ ಬೆಟಗೇರಿ ನಗರಸಭೆಯ 21 ವಾರ್ಡುಗಳು, ಗಜೇಂದ್ರಗಡ ಪುರಸಭೆ- 14, ಲಕ್ಷ್ಮೇಶ್ವರ ಪುರಸಭೆಯ -5, ಮುಂಡರಗಿ ಪುರಸಭೆ-11 , ನರಗುಂದ ಪುರಸಭೆಯ -7, ರೋಣ ಪುರಸಭೆಯ–7, ಮುಳಗುಂದ-5, ನರೇಗಲ್ ಪಟ್ಟಣ ಪಂಚಾಯತ್-5, ಶಿರಹಟ್ಟಿ ಪಟ್ಟಣಪಂಚಾಯತ್ -6  ವಾರ್ಡುಗಳಲ್ಲಿ ಮುಂದಿನ ದಿನಮಾನಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಗುರುತಿಸಲಾಗಿದೆ.

ಅಂತರ್ಜಲಮಟ್ಟ: ಬರಗಾಲದಿಂದಾಗಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವು ಅಧೋಗತಿಗೆ ಸಾಗಿದ್ದು ಮುಂದಿನ ದಿನಗಳಲ್ಲಿ ಈ ಪ್ರಮಾಣ ಇನ್ನೂ ಅಧಿಕ ಆಗಬಹುದಾಗಿದೆ. ಗದಗ -9.84 ಮೀಟರ್, ಮುಂಡರಗಿ-7.12 ಮೀಟರ್, ಶಿರಹಟ್ಟಿ -13.58 ಮೀಟರ್, ಲಕ್ಷ್ಮೇಶ್ವರ –19.60 ಮೀಟರ್, ರೋಣ- 13.07 ಮೀಟರ್, ಗಜೇಂದ್ರಗಡ- 20.97  ಮೀಟರ್ , ನರಗುಂದ – 8.40 ಮೀಟರ್.

ಸಹಾಯವಾಣಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಸಾರ್ವಜನಿಕರಿಗಾಗಿ ಸಹಾಯವಾಣಿಗಳನ್ನು  ತಾಲೂಕಾವಾರು ತೆರೆಯಲಾಗಿದೆ ಸಂಖ್ಯೆಗಳು ಇಂತಿವೆ:  ಜಿಲ್ಲಾಧಿಕಾರಿಗಳ ಕಚೇರಿ- 08372-239177 ; ಗದಗ 08372-250009 ; ಗಜೇಂದ್ರಗಡ – 08381-262131 ; ಲಕ್ಷ್ಮೇಶ್ವರ- 08487-273273 ; ಮುಂಡರಗಿ- 08371-262237 ; ನರಗುಂದ- 08377- 245243 ; ರೋಣ- 08381-267239 ;  ಶಿರಹಟ್ಟಿ- 08487- 242100.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಡಿ.ಎಚ್.ಒ ಡಾ.ಎಸ್.ಎಸ್. ನೀಲಗುಂದ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ಶಿಂಗಟಾಲೂರು ಏತನೀರಾವರಿ ಯೋಜನೆ ಕಾರ್ಯನಿರ್ವಾಹಕ ಅಭಿಯಂತರ ಶಿವಮೂರ್ತಿ, ಪಿಆರ್‌ಇಡಿ ಕಾರ್ಯಪಾಲಕ ಅಭಿಯಂತರ ಆರ್.ಎ.ಗೌಡರ್ ಸೇರಿದಂತೆ ಆಯಾ ತಾಲೂಕುಗಳ  ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು, ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...